ಚಿತ್ರ ಮಂಜರಿ

ಖ್ಯಾತ ನಟ ದಳಪತಿ ವಿಜಯ್ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

ಚೆನ್ನೈ: ಲಿಯೋ ಚಿತ್ರದಲ್ಲಿನ ನಾ ರೆಡಿ ಹಾಡಿನಲ್ಲಿ ಡ್ರಗ್ಸ್ ಪ್ರಚಾರ ಮಾಡಿದ ಆರೋಪದ ಮೇಲೆ ನಟ ದಳಪತಿ ವಿಜಯ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಚೆನ್ನೈನ ‘ಆರ್‌ಟಿಐ’ ಕಾರ್ಯಕರ್ತ ಸೆಲ್ವಂ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

ಈ ಹಾಡು ಮಾದಕ ವ್ಯಸನವನ್ನು ಪ್ರತಿಪಾದಿಸುತ್ತಿರುವುದರಿಂದ ಮಾದಕ ದ್ರವ್ಯ ನಿಯಂತ್ರಣ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಅರ್ಜಿದಾರರು ಕೋರಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ನಟ ವಿಜಯ್ ಅವರ ಲಿಯೋ ಚಿತ್ರದ ಹಾಡು ‘ನಾ ರೆಡಿ’ ಯುವಕರಲ್ಲಿ ಮಾದಕ ವ್ಯಸನವನ್ನು ಉತ್ತೇಜಿಸುತ್ತದೆ ಮತ್ತು ರೌಡಿಸಂಗೆ ಉತ್ತೇಜನ ನೀಡುತ್ತದೆ ಎಂದು ಸೆಲ್ವಂ ಹೇಳಿದ್ದಾರೆ.

ಈ ಹಾಡಿನಲ್ಲಿ ನಟ ವಿಜಯ್ ಸಿಗರೇಟ್ ಹಿಡಿದುಕೊಂಡು ನೃತ್ಯ ಮಾಡುವ ದೃಶ್ಯಗಳಿವೆ. ಹಾಗಾಗಿ ನಟ ವಿಜಯ್ ವಿರುದ್ಧ ಮಾದಕ ದ್ರವ್ಯ ತಡೆ ಕಾಯ್ದೆಯ ಸೆಕ್ಷನ್ ಪ್ರಕಾರ ಕ್ರಮ ಕೈಗೊಳ್ಳಬೇಕು ಮತ್ತು ಇದನ್ನು ಬೆಂಬಲಿಸಿ ಹಾಡು ಬಿಡುಗಡೆ ಮಾಡಿದವರ ವಿರುದ್ಧವೂ ಕಾನೂನು ಪ್ರಕಾರ ಪ್ರಕರಣ ದಾಖಲಿಸಬೇಕು ಎಂದು ಸೆಲ್ವಂ ಆನ್‌ಲೈನ್‌ನಲ್ಲಿ ದೂರು ದಾಖಲಿಸಿದ್ದಾರೆ.

ಡ್ರಗ್ಸ್​​​ನ್ನು ಬೆಂಬಲಿಸುವವರ ವಿರುದ್ಧ ಮತ್ತು ಡ್ರಗ್ಸ್ ತಡೆಗಟ್ಟುವಲ್ಲಿ ಕರ್ತವ್ಯ ಲೋಪವೆಸಗುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಇತ್ತೀಚಿಗಷ್ಟೇ ಹೇಳಿದ್ದರು. ಏತನ್ಮಧ್ಯೆ, ಜೂನ್ 22ರಂದು ಬಿಡುಗಡೆಯಾದ ಈ ಹಾಡು ಕೇವಲ ಮೂರು ದಿನಗಳಲ್ಲಿ 28 ಮಿಲಿಯನ್ ವೀಕ್ಷಣೆ ಕಂಡಿದೆ. ಬಹುನಿರೀಕ್ಷಿತ ಈ ತಮಿಳು ಚಲನಚಿತ್ರವು ಈ ವರ್ಷ ಅಕ್ಟೋಬರ್ 19ರಂದು ತೆರೆಗೆ ಬರಲಿದೆ.

andolanait

Recent Posts

ಇರಾನ್‌ ಮೇಲಿನ ದಾಳಿಗೆ ಮತ್ತೆ 10 ದನ ಗಡುವು ವಿಸ್ತರಿಸಿದ ಟ್ರಂಪ್!‌

ವಾಷಿಂಗ್ಟನ್‌ : ಇರಾನ್‌ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…

4 mins ago

IPL 2ನೇ ಹಂತದ ವೇಳಾಪಟ್ಟಿ ಬಿಡುಗಡೆ

ಮುಂಬೈ : ಬಿಸಿಸಿಐ ಮಾರ್ಚ್ 26ರ ಗುರುವಾರದಂದು ಬಹುನಿರೀಕ್ಷಿತ 19 ನೇ ಸೀಸನ್ ಐಪಿಎಲ್‌ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.…

42 mins ago

ಮೈಸೂರು ವಿಶ್ವವಿದ್ಯಾಲಯ : 53.76 ಕೋಟಿ ರೂ. ವಿತ್ತೀಯ ಕೊರತೆ ಬಜೆಟ್

ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮೈಸೂರು :…

48 mins ago

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

5 hours ago

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…

6 hours ago

ಓದುಗರ ಪತ್ರ: ಹಗಲು ದರೋಡೆ ನಿಲ್ಲಿಸಿ

ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…

6 hours ago