ಚಿತ್ರ ಮಂಜರಿ

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಸಿಎಂ-ಡಿಸಿಎಂ ಸೇರಿ ಹಲವು ಗಣ್ಯರಿಂದ ಸಂತಾಪ

ಬೆಂಗಳೂರು : ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಸ್ಪಂದನಾ ಅವರು ಬ್ಯಾಂಕಾಕ್‌ಗೆ ವಿದೇಶ ಪ್ರವಾಸಕ್ಕೆ ತೆರಳಿದ್ದರು. ಅಲ್ಲಿಯೇ ಅವರಿಗೆ ಲೋ ಬಿಪಿಯಿಂದಾಗಿ ಹೃದಯಾಘಾತವಾಗಿದೆ ಎಂದು ಹೇಳಲಾಗುತ್ತಿದೆ. ಇನ್ನು, ಸ್ಪಂದನಾ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ, ಸ್ಪಂದನಾ ಅವರ ನಿಧನ ಆಘಾತವನ್ನು ಉಂಟುಮಾಡಿದೆ ಎಂದಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ಅವರು, ‘ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನು ಉಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ಹೇಳಿದ್ದಾರೆ.

ಚಿಕ್ಕ ವಯಸ್ಸಿನಲ್ಲಿ ಹೀಗಾಗಿದ್ದು ನೋವು ತಂದಿದೆ-ಡಿಕೆಶಿ

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾಗಿದ್ದಕ್ಕೆ ಡಿಸಿಎಂ‌ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಹಳ ಚಿಕ್ಕ ವಯಸ್ಸು ಇಷ್ಟು ವಯಸ್ಸಲ್ಲಿ ಹೀಗಾಗಿದ್ದು ಬಹಳ ದುಃಖ ಆಗಿದೆ. ಭಗವಂತ ಏಕೆ ಹೀಗೆ ಮಾಡಿದನೋ ಗೊತ್ತಾಗ್ತಿಲ್ಲ. ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ನೀಡಲಿ. ಚುನಾವಣೆಯಲ್ಲಿ ಅವರ ಸಹೋದರ ನಮ್ಮ ಪಕ್ಷದ ಅಭ್ಯರ್ಥಿ ಆಗಿದ್ದರು. ಅವರ ತಂದೆಯೂ ಅಭ್ಯರ್ಥಿ ಆಗಿದ್ರು. ಅವರ ಪಾರ್ಥಿವ ಶರೀರ ತರುವ ವಿಚಾರದಲ್ಲಿ ಏನು ಮಾಡಬೇಕೋ ಎಂದು ನೋಡೋಣ ‘ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

‘ಕೋವಿಡ್ ಬಳಿಕ ಸಾವು ನೋವು ಹೆಚ್ಚಾಗ್ತಿದೆ’- ಎಚ್‌ಡಿಕೆ

‘ಕೋವಿಡ್ ಬಳಿಕ ಇಂತಹ ಸಾವು ನೋವುಗಳು ಹೆಚ್ಚಾಗುತ್ತಿವೆ’ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಿಧನ ಹಿನ್ನಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ ಸೂಚಿಸಿ ಮಾತನಾಡಿದ್ದಾರೆ. ‘ವಿದೇಶ ಪ್ರವಾಸದಲ್ಲಿ ಹೃದಯಾಘಾತ ಆಗಿದ್ದು, ಅತ್ಯಂತ ಚಿಕ್ಕ ವಯಸ್ಸಿನಲ್ಲೇ ಸಾವನ್ನಪ್ಪಿರೋದು ಎಲ್ಲರಿಗೂ ಆಘಾತಕಾರಿ. ಆರೋಗ್ಯಯುತವಾಗಿ ಇದ್ದರು, ಯಾರೂ ಕೂಡ ನಿರೀಕ್ಷೆ ಮಾಡಿಲ್ಲ. ಕುಟುಂಬ ಸಹ ನಿರೀಕ್ಷೆ ಮಾಡಿರಲ್ಲಿಲ್ಲ. ಇತ್ತೀಚಿನ ದಿನಗಳಲ್ಲಿ ಕೋವಿಡ್ ನಂತರ ಅಪಾರ ಸಾವು ನೋವು ಆಗ್ತಾ ಇದೆ‌.
ಅದರಲ್ಲೂ ಕೋವಿಡ್ ನಂತರ ಎಲ್ಲರ ಮೇಲೂ ಪರಿಣಾಮ ಬೀರಿದೆ. ಪ್ರತಿಯೊಬ್ಬರು ಎಚ್ಚರಿಕೆಯಿಂದ ಇರಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

ಮಾಜಿ ಸಿಎಂ ಬೊಮ್ಮಾಯಿ ಸಂತಾಪ

ಸ್ಪಂದನಾ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಕನ್ನಡದ ಖ್ಯಾತ ಚಲನಚಿತ್ರ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಿಧನದ ಸುದ್ದಿ ಕೇಳಿ ಆಘಾತವಾಯಿತು. ಮೃತರ ಆತ್ಮಕ್ಕೆ ಆ ದೇವರು ಚಿರಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆ‌. ನಟ ವಿಜಯ ರಾಘವೇಂದ್ರ ಹಾಗೂ ಬಿ ಕೆ ಶಿವರಾಮ್ ಕುಟುಂಬಕ್ಕೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ‌’ ಅಂತ ಟ್ವೀಟ್ ಮಾಡಿದ್ದಾರೆ.

andolanait

Recent Posts

ಮಿಷನ್ 40 ಫಾರ್ 90 ಡೇಸ್ : ಮಂಡ್ಯ ಜಿಲ್ಲೆಯಲ್ಲಿ SSLC ಫಲಿತಾಂಶ ಹೆಚ್ಚಳಕ್ಕೆ ವಿಶೇಷ ಅಭಿಯಾನ

ಮಂಡ್ಯ : ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿನೂತನವಾಗಿ “ಮಿಷನ್ 40 ಫಾರ್ 90 ಡೇಸ್” ಅಭಿಯಾನವನ್ನು…

2 mins ago

ಗೃಹಲಕ್ಷ್ಮಿಗೆ ಮತ್ತೆ ತಾಂತ್ರಿಕ ಸಮಸ್ಯೆ ; ಬಾಕಿ ಹಣ ಬಿಡುಗಡೆ ವಿಳಂಬ?

ಬೆಂಗಳೂರು : ಬೆಳಗಾವಿ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ರಾಜ್ಯ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ…

7 mins ago

ದುರಂಧರ್‌ ಸಕ್ಸಸ್ | ‌ದಿಢೀರ್‌ ಸಂಭಾವನೆ ಏರಿಕೆ ; ದೃಶ್ಯಂ-3 ಚಿತ್ರದಿಂದ ಹೊರಬಂದ ಅಕ್ಷಯ್‌ ಖನ್ನಾ

ಮುಂಬೈ : ಬಾಲಿವುಡ್‌, ಟಾಲಿವುಡ್‌, ಸ್ಯಾಂಡಲ್‌ವುಡ್‌ ಸೇರಿದಂತೆ ಎಲ್ಲಾ ವುಡ್‌ಗಳಲ್ಲಿಯೂ ಧುರಂಧರ್‌ದೆ ಹಾವಳಿ. ಈ ವರ್ಷದ ಅತಿ ಹೆಚ್ಚು ಕೆಲಕ್ಷನ್…

19 mins ago

ಅಧಿಕಾರ ಹಂಚಿಕೆ ದೊಂಬರಾಟದಂತಿದೆ : ಎಚ್.ಡಿ.ದೇವೇಗೌಡ ಟೀಕೆ

ಬೆಂಗಳೂರು : ಅಧಿಕಾರ ಹಸ್ತಾಂತರದ ವಿಚಾರದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹೈಡ್ರಾಮ ಆಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು…

35 mins ago

ಮಂತ್ರಾಲಯಕ್ಕೆ ಭೇಟಿ ನೀಡಿದ ನಟ ರಿಷಬ್‌ ಶೆಟ್ಟಿ ಕುಟುಂಬ

ರಾಯಚೂರು: ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಅವರಿಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.…

2 hours ago

ಬಿಪಿಎಲ್‌ ಕಾರ್ಡ್‌ದಾರರಿಗೆ ಜನವರಿಯಿಂದ ಇಂದಿರಾ ಕಿಟ್:‌ ಸಚಿವ ಮುನಿಯಪ್ಪ

ಬೆಂಗಳೂರು: ಬಿಪಿಎಲ್‌ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.…

2 hours ago