ಹೊಸದಿಲ್ಲಿ : “ಆದಿಪುರುಷ್” ಚಲನಚಿತ್ರದಲ್ಲಿ ಹನುಮಂತನ ಚಿತ್ರಣ ಜನರ ಭಾವನೆಗಳನ್ನು ಘಾಸಿಗೊಳಿಸಿವೆ ಎಂದು ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ),ಎಎಪಿ ಸೇರಿದಂತೆ ಹಲವು ಪಕ್ಷಗಳು ಶನಿವಾರ ಟೀಕಿಸಿವೆ, ಆದರೆ ಬಿಜೆಪಿ ತಾತ್ಕಾಲಿಕವಾಗಿ ಚಿತ್ರಮಂದಿರಗಳಲ್ಲಿ ಚಿತ್ರದ ಪ್ರದರ್ಶನ ಅಮಾನತುಗೊಳಿಸುವಂತೆ ಒತ್ತಾಯಿಸಿದೆ.
ಪ್ರಭಾಸ್ ನಟಿಸಿರುವ “ಆದಿಪುರುಷ್ ” ಚಿತ್ರ ಕಳಪೆ ವಿಎಫ್ಎಕ್ಸ್ ಮತ್ತು ಆಡುಮಾತಿನ ಸಂಭಾಷಣೆಗಳ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಟೀಕೆ ಮಾಡಲಾಗಿದೆ. ಬರಹಗಾರ ಮನೋಜ್ ಮುಂತಶಿರ್ ಶುಕ್ಲಾ ಅವರು ‘ಲಂಕಾ ದಹನ್’ ಸರಣಿಯಲ್ಲಿ ಹನುಮಂತನ ಸಂಭಾಷಣೆಗಾಗಿ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರಿನಾಥೆ ಅವರು ಮಾತನಾಡಿ, ಸಿನಿಮಾದಲ್ಲಿ ಬಳಸಿರುವ ಭಾಷೆಯನ್ನು “ಟಪೋರಿ” (ರಸ್ತೆ ಅಥವಾ ಬೀದಿಹೋಕರು ಬಳಸಿದ್ದು) ಎಂದು ಕರೆದಿದ್ದಾರೆ ಮತ್ತು ಇದು ಜನರ ಭಾವನೆಗಳಿಗೆ ಧಕ್ಕೆ ತಂದಿದೆ. ಧರ್ಮ ಮತ್ತು ಧರ್ಮದ ವ್ಯವಹಾರದ ನಡುವೆ ವ್ಯತ್ಯಾಸವಿದೆ ಎಂದು ಹೇಳಿದ್ದಾರೆ.
“ಭಗವಾನ್ ಶ್ರೀ ಹನುಮಾನ್ ಸೌಮ್ಯತೆ ಮತ್ತು ಗಂಭೀರತೆಯ ಸಂಕೇತವಾಗಿದೆ. 1987 ರಲ್ಲಿ, ರಮಾನಂದ್ ಸಾಗರ್ ಅವರು ರಾಮಾಯಣ ಧಾರಾವಾಹಿಯನ್ನು ನಿರ್ಮಿಸಿದಾಗ, ಆಗಿನ ಪ್ರಧಾನಿ ರಾಜೀವ್ ಗಾಂಧಿಯವರು ‘ರಾಮಾಯಣ’ ಲಕ್ಷಾಂತರ ವೀಕ್ಷಕರ ಹೃದಯ ಮತ್ತು ಮನಸ್ಸನ್ನು ಬೆಳಗಿಸಿತು. ಭಾರತದ ಶ್ರೇಷ್ಠ ಸಂಸ್ಕೃತಿ, ಸಂಪ್ರದಾಯ ಮತ್ತು ನೈತಿಕ ಮೌಲ್ಯಗಳನ್ನು ಎತ್ತಿಹಿಡಿದಿದೆ ಎಂದು ಹೇಳಿದ್ದರು ಎಂದು ತಿಳಿಸಿದರು.
ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರಿಗೆ ಮನವಿ ಸಲ್ಲಿಸಿರುವ ದೆಹಲಿ ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್, ಚಿತ್ರದ “ವಿವಾದಾತ್ಮಕ ದೃಶ್ಯಗಳು ಮತ್ತು ಸಂಭಾಷಣೆಗಳಿದ್ದು” ಮರುಪರಿಶೀಲಿಸಬೇಕು. ಚಿತ್ರಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ಸೆನ್ಸಾರ್ ಮಂಡಳಿಯು ತನ್ನ ಸೆನ್ಸಾರ್ ಪ್ರಮಾಣಪತ್ರವನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಬೇಕು ಮತ್ತು ಅದನ್ನು ಮತ್ತೆ ಪರಿಶೀಲಿಸುವವರೆಗೆ ಅದರ ಪ್ರದರ್ಶನವನ್ನು ನಿಷೇಧಿಸಬೇಕು ”ಎಂದು ಟ್ವೀಟ್ ಮಾಡಿದ್ದಾರೆ.
ರಾಯ್ಪುರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಈ ಸಿನಿಮಾವು ರಾಮ ಮತ್ತು ಹನುಮಂತನ ಪ್ರತಿಷ್ಠೆಗೆ ಕಳಂಕ ತರುವ ಪ್ರಯತ್ನವಾಗಿದೆ. ಜನರು ಈ ದಿಕ್ಕಿನಲ್ಲಿ ನಿಷೇಧದ ಬೇಡಿಕೆಯನ್ನು ಎತ್ತಿದರೆ ಸರ್ಕಾರ ಅದರ ಬಗ್ಗೆ ಯೋಚಿಸುತ್ತದೆ ಎಂದು ಹೇಳಿದ್ದಾರೆ.
ಶಿವಸೇನಾ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಪ್ರತಿಕ್ರಿಯಿಸಿ, ಬರಹಗಾರ ಮುಂತಶಿರ್ ಮತ್ತು ಚಿತ್ರದ ನಿರ್ದೇಶಕ ರಾವುತ್ ಅವರು “ಚಿತ್ರಕ್ಕಾಗಿ, ವಿಶೇಷವಾಗಿ ಹನುಮಾನ್ ದೇವರಿಗಾಗಿ ಬರೆದ ದಾರಿಹೋಕ ಸಂಭಾಷಣೆಗಳಿಗಾಗಿ” ದೇಶದ ಕ್ಷಮೆಯಾಚಿಸಬೇಕು ಎಂದು ಕಿಡಿ ಕಾರಿದ್ದಾರೆ.
ಎಎಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಜ್ಯಸಭಾ ಸಂಸದ ಮತ್ತು ರಾಷ್ಟ್ರೀಯ ವಕ್ತಾರ ಸಂಜಯ್ ಸಿಂಗ್, ಈ ಚಿತ್ರವು ರಾಮ, ಸೀತೆ, ಹನುಮಾನ್ ಮತ್ತು ಹಿಂದೂ ಸಮಾಜಕ್ಕೆ “ಘೋರ ಅವಮಾನ”,ಈ ಚಿತ್ರ ಮಾಡಲು ಬಿಜೆಪಿ ಅನುಮತಿ ನೀಡಿದೆ. ಇಂತಹ ಚಿತ್ರ ನಿರ್ಮಾಣ ಮತ್ತು ಪ್ರದರ್ಶನಕ್ಕೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ಕೃತಿ ಸನೋನ್, ಸೈಫ್ ಅಲಿ ಖಾನ್ ಮತ್ತು ಸನ್ನಿ ಸಿಂಗ್ ನಟಿಸಿರುವ 3D ಬಹುಭಾಷಾ ಚಿತ್ರ ಶುಕ್ರವಾರ ದೇಶಾದ್ಯಂತ ಬಿಡುಗಡೆಯಾಗಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…