ಚಿತ್ರ ಮಂಜರಿ

ಆದಿಪುರುಷ್‌ ಚಿತ್ರಕ್ಕೆ ಕಾಂಗ್ರೆಸ್, ಎಎಪಿ, ಶಿವಸೇನೆ ಟೀಕೆ : ಬಿಜೆಪಿ ವಿರುದ್ದವೂ ಆಕ್ರೋಶ

ಹೊಸದಿಲ್ಲಿ : “ಆದಿಪುರುಷ್” ಚಲನಚಿತ್ರದಲ್ಲಿ ಹನುಮಂತನ ಚಿತ್ರಣ ಜನರ ಭಾವನೆಗಳನ್ನು ಘಾಸಿಗೊಳಿಸಿವೆ ಎಂದು ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ),ಎಎಪಿ ಸೇರಿದಂತೆ ಹಲವು ಪಕ್ಷಗಳು ಶನಿವಾರ ಟೀಕಿಸಿವೆ, ಆದರೆ ಬಿಜೆಪಿ ತಾತ್ಕಾಲಿಕವಾಗಿ ಚಿತ್ರಮಂದಿರಗಳಲ್ಲಿ ಚಿತ್ರದ ಪ್ರದರ್ಶನ ಅಮಾನತುಗೊಳಿಸುವಂತೆ ಒತ್ತಾಯಿಸಿದೆ.

ಪ್ರಭಾಸ್‌ ನಟಿಸಿರುವ “ಆದಿಪುರುಷ್ ” ಚಿತ್ರ ಕಳಪೆ ವಿಎಫ್‌ಎಕ್ಸ್ ಮತ್ತು ಆಡುಮಾತಿನ ಸಂಭಾಷಣೆಗಳ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಟೀಕೆ ಮಾಡಲಾಗಿದೆ. ಬರಹಗಾರ ಮನೋಜ್ ಮುಂತಶಿರ್ ಶುಕ್ಲಾ ಅವರು ‘ಲಂಕಾ ದಹನ್’ ಸರಣಿಯಲ್ಲಿ ಹನುಮಂತನ ಸಂಭಾಷಣೆಗಾಗಿ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರಿನಾಥೆ ಅವರು ಮಾತನಾಡಿ, ಸಿನಿಮಾದಲ್ಲಿ ಬಳಸಿರುವ ಭಾಷೆಯನ್ನು “ಟಪೋರಿ” (ರಸ್ತೆ ಅಥವಾ ಬೀದಿಹೋಕರು ಬಳಸಿದ್ದು) ಎಂದು ಕರೆದಿದ್ದಾರೆ ಮತ್ತು ಇದು ಜನರ ಭಾವನೆಗಳಿಗೆ ಧಕ್ಕೆ ತಂದಿದೆ. ಧರ್ಮ ಮತ್ತು ಧರ್ಮದ ವ್ಯವಹಾರದ ನಡುವೆ ವ್ಯತ್ಯಾಸವಿದೆ ಎಂದು ಹೇಳಿದ್ದಾರೆ.

“ಭಗವಾನ್ ಶ್ರೀ ಹನುಮಾನ್ ಸೌಮ್ಯತೆ ಮತ್ತು ಗಂಭೀರತೆಯ ಸಂಕೇತವಾಗಿದೆ. 1987 ರಲ್ಲಿ, ರಮಾನಂದ್ ಸಾಗರ್ ಅವರು ರಾಮಾಯಣ ಧಾರಾವಾಹಿಯನ್ನು ನಿರ್ಮಿಸಿದಾಗ, ಆಗಿನ ಪ್ರಧಾನಿ ರಾಜೀವ್ ಗಾಂಧಿಯವರು ‘ರಾಮಾಯಣ’ ಲಕ್ಷಾಂತರ ವೀಕ್ಷಕರ ಹೃದಯ ಮತ್ತು ಮನಸ್ಸನ್ನು ಬೆಳಗಿಸಿತು. ಭಾರತದ ಶ್ರೇಷ್ಠ ಸಂಸ್ಕೃತಿ, ಸಂಪ್ರದಾಯ ಮತ್ತು ನೈತಿಕ ಮೌಲ್ಯಗಳನ್ನು ಎತ್ತಿಹಿಡಿದಿದೆ ಎಂದು ಹೇಳಿದ್ದರು ಎಂದು ತಿಳಿಸಿದರು.

ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರಿಗೆ ಮನವಿ ಸಲ್ಲಿಸಿರುವ ದೆಹಲಿ ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್, ಚಿತ್ರದ “ವಿವಾದಾತ್ಮಕ ದೃಶ್ಯಗಳು ಮತ್ತು ಸಂಭಾಷಣೆಗಳಿದ್ದು” ಮರುಪರಿಶೀಲಿಸಬೇಕು. ಚಿತ್ರಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ಸೆನ್ಸಾರ್ ಮಂಡಳಿಯು ತನ್ನ ಸೆನ್ಸಾರ್ ಪ್ರಮಾಣಪತ್ರವನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಬೇಕು ಮತ್ತು ಅದನ್ನು ಮತ್ತೆ ಪರಿಶೀಲಿಸುವವರೆಗೆ ಅದರ ಪ್ರದರ್ಶನವನ್ನು ನಿಷೇಧಿಸಬೇಕು ”ಎಂದು ಟ್ವೀಟ್ ಮಾಡಿದ್ದಾರೆ.

ರಾಯ್‌ಪುರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಈ ಸಿನಿಮಾವು ರಾಮ ಮತ್ತು ಹನುಮಂತನ ಪ್ರತಿಷ್ಠೆಗೆ ಕಳಂಕ ತರುವ ಪ್ರಯತ್ನವಾಗಿದೆ. ಜನರು ಈ ದಿಕ್ಕಿನಲ್ಲಿ ನಿಷೇಧದ ಬೇಡಿಕೆಯನ್ನು ಎತ್ತಿದರೆ ಸರ್ಕಾರ ಅದರ ಬಗ್ಗೆ ಯೋಚಿಸುತ್ತದೆ ಎಂದು ಹೇಳಿದ್ದಾರೆ.

ಶಿವಸೇನಾ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಪ್ರತಿಕ್ರಿಯಿಸಿ, ಬರಹಗಾರ ಮುಂತಶಿರ್ ಮತ್ತು ಚಿತ್ರದ ನಿರ್ದೇಶಕ ರಾವುತ್ ಅವರು “ಚಿತ್ರಕ್ಕಾಗಿ, ವಿಶೇಷವಾಗಿ ಹನುಮಾನ್ ದೇವರಿಗಾಗಿ ಬರೆದ ದಾರಿಹೋಕ ಸಂಭಾಷಣೆಗಳಿಗಾಗಿ” ದೇಶದ ಕ್ಷಮೆಯಾಚಿಸಬೇಕು ಎಂದು ಕಿಡಿ ಕಾರಿದ್ದಾರೆ.

ಎಎಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಜ್ಯಸಭಾ ಸಂಸದ ಮತ್ತು ರಾಷ್ಟ್ರೀಯ ವಕ್ತಾರ ಸಂಜಯ್ ಸಿಂಗ್, ಈ ಚಿತ್ರವು ರಾಮ, ಸೀತೆ, ಹನುಮಾನ್ ಮತ್ತು ಹಿಂದೂ ಸಮಾಜಕ್ಕೆ “ಘೋರ ಅವಮಾನ”,ಈ ಚಿತ್ರ ಮಾಡಲು ಬಿಜೆಪಿ ಅನುಮತಿ ನೀಡಿದೆ. ಇಂತಹ ಚಿತ್ರ ನಿರ್ಮಾಣ ಮತ್ತು ಪ್ರದರ್ಶನಕ್ಕೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಕೃತಿ ಸನೋನ್, ಸೈಫ್ ಅಲಿ ಖಾನ್ ಮತ್ತು ಸನ್ನಿ ಸಿಂಗ್ ನಟಿಸಿರುವ 3D ಬಹುಭಾಷಾ ಚಿತ್ರ ಶುಕ್ರವಾರ ದೇಶಾದ್ಯಂತ ಬಿಡುಗಡೆಯಾಗಿದೆ.

andolanait

Recent Posts

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

1 hour ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

2 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

2 hours ago

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ : ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೂ ರಜೆ

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…

2 hours ago

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…

3 hours ago

ಮುಡಾ ಕೇಸ್‌ನಲ್ಲಿ ಸಿಎಂʼಗೆ ನಿರಾಳ : ʻಸತ್ಯ ಮೇವ ಜಯತೆʻ ಫ್ಲೇ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಸಂಭ್ರಮ

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…

4 hours ago