ಚಿತ್ರ ಮಂಜರಿ

ಆದಿಪುರುಷ್‌ ಚಿತ್ರಕ್ಕೆ ಕಾಂಗ್ರೆಸ್, ಎಎಪಿ, ಶಿವಸೇನೆ ಟೀಕೆ : ಬಿಜೆಪಿ ವಿರುದ್ದವೂ ಆಕ್ರೋಶ

ಹೊಸದಿಲ್ಲಿ : “ಆದಿಪುರುಷ್” ಚಲನಚಿತ್ರದಲ್ಲಿ ಹನುಮಂತನ ಚಿತ್ರಣ ಜನರ ಭಾವನೆಗಳನ್ನು ಘಾಸಿಗೊಳಿಸಿವೆ ಎಂದು ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ),ಎಎಪಿ ಸೇರಿದಂತೆ ಹಲವು ಪಕ್ಷಗಳು ಶನಿವಾರ ಟೀಕಿಸಿವೆ, ಆದರೆ ಬಿಜೆಪಿ ತಾತ್ಕಾಲಿಕವಾಗಿ ಚಿತ್ರಮಂದಿರಗಳಲ್ಲಿ ಚಿತ್ರದ ಪ್ರದರ್ಶನ ಅಮಾನತುಗೊಳಿಸುವಂತೆ ಒತ್ತಾಯಿಸಿದೆ.

ಪ್ರಭಾಸ್‌ ನಟಿಸಿರುವ “ಆದಿಪುರುಷ್ ” ಚಿತ್ರ ಕಳಪೆ ವಿಎಫ್‌ಎಕ್ಸ್ ಮತ್ತು ಆಡುಮಾತಿನ ಸಂಭಾಷಣೆಗಳ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಟೀಕೆ ಮಾಡಲಾಗಿದೆ. ಬರಹಗಾರ ಮನೋಜ್ ಮುಂತಶಿರ್ ಶುಕ್ಲಾ ಅವರು ‘ಲಂಕಾ ದಹನ್’ ಸರಣಿಯಲ್ಲಿ ಹನುಮಂತನ ಸಂಭಾಷಣೆಗಾಗಿ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರಿನಾಥೆ ಅವರು ಮಾತನಾಡಿ, ಸಿನಿಮಾದಲ್ಲಿ ಬಳಸಿರುವ ಭಾಷೆಯನ್ನು “ಟಪೋರಿ” (ರಸ್ತೆ ಅಥವಾ ಬೀದಿಹೋಕರು ಬಳಸಿದ್ದು) ಎಂದು ಕರೆದಿದ್ದಾರೆ ಮತ್ತು ಇದು ಜನರ ಭಾವನೆಗಳಿಗೆ ಧಕ್ಕೆ ತಂದಿದೆ. ಧರ್ಮ ಮತ್ತು ಧರ್ಮದ ವ್ಯವಹಾರದ ನಡುವೆ ವ್ಯತ್ಯಾಸವಿದೆ ಎಂದು ಹೇಳಿದ್ದಾರೆ.

“ಭಗವಾನ್ ಶ್ರೀ ಹನುಮಾನ್ ಸೌಮ್ಯತೆ ಮತ್ತು ಗಂಭೀರತೆಯ ಸಂಕೇತವಾಗಿದೆ. 1987 ರಲ್ಲಿ, ರಮಾನಂದ್ ಸಾಗರ್ ಅವರು ರಾಮಾಯಣ ಧಾರಾವಾಹಿಯನ್ನು ನಿರ್ಮಿಸಿದಾಗ, ಆಗಿನ ಪ್ರಧಾನಿ ರಾಜೀವ್ ಗಾಂಧಿಯವರು ‘ರಾಮಾಯಣ’ ಲಕ್ಷಾಂತರ ವೀಕ್ಷಕರ ಹೃದಯ ಮತ್ತು ಮನಸ್ಸನ್ನು ಬೆಳಗಿಸಿತು. ಭಾರತದ ಶ್ರೇಷ್ಠ ಸಂಸ್ಕೃತಿ, ಸಂಪ್ರದಾಯ ಮತ್ತು ನೈತಿಕ ಮೌಲ್ಯಗಳನ್ನು ಎತ್ತಿಹಿಡಿದಿದೆ ಎಂದು ಹೇಳಿದ್ದರು ಎಂದು ತಿಳಿಸಿದರು.

ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರಿಗೆ ಮನವಿ ಸಲ್ಲಿಸಿರುವ ದೆಹಲಿ ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್, ಚಿತ್ರದ “ವಿವಾದಾತ್ಮಕ ದೃಶ್ಯಗಳು ಮತ್ತು ಸಂಭಾಷಣೆಗಳಿದ್ದು” ಮರುಪರಿಶೀಲಿಸಬೇಕು. ಚಿತ್ರಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ಸೆನ್ಸಾರ್ ಮಂಡಳಿಯು ತನ್ನ ಸೆನ್ಸಾರ್ ಪ್ರಮಾಣಪತ್ರವನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಬೇಕು ಮತ್ತು ಅದನ್ನು ಮತ್ತೆ ಪರಿಶೀಲಿಸುವವರೆಗೆ ಅದರ ಪ್ರದರ್ಶನವನ್ನು ನಿಷೇಧಿಸಬೇಕು ”ಎಂದು ಟ್ವೀಟ್ ಮಾಡಿದ್ದಾರೆ.

ರಾಯ್‌ಪುರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಈ ಸಿನಿಮಾವು ರಾಮ ಮತ್ತು ಹನುಮಂತನ ಪ್ರತಿಷ್ಠೆಗೆ ಕಳಂಕ ತರುವ ಪ್ರಯತ್ನವಾಗಿದೆ. ಜನರು ಈ ದಿಕ್ಕಿನಲ್ಲಿ ನಿಷೇಧದ ಬೇಡಿಕೆಯನ್ನು ಎತ್ತಿದರೆ ಸರ್ಕಾರ ಅದರ ಬಗ್ಗೆ ಯೋಚಿಸುತ್ತದೆ ಎಂದು ಹೇಳಿದ್ದಾರೆ.

ಶಿವಸೇನಾ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಪ್ರತಿಕ್ರಿಯಿಸಿ, ಬರಹಗಾರ ಮುಂತಶಿರ್ ಮತ್ತು ಚಿತ್ರದ ನಿರ್ದೇಶಕ ರಾವುತ್ ಅವರು “ಚಿತ್ರಕ್ಕಾಗಿ, ವಿಶೇಷವಾಗಿ ಹನುಮಾನ್ ದೇವರಿಗಾಗಿ ಬರೆದ ದಾರಿಹೋಕ ಸಂಭಾಷಣೆಗಳಿಗಾಗಿ” ದೇಶದ ಕ್ಷಮೆಯಾಚಿಸಬೇಕು ಎಂದು ಕಿಡಿ ಕಾರಿದ್ದಾರೆ.

ಎಎಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಜ್ಯಸಭಾ ಸಂಸದ ಮತ್ತು ರಾಷ್ಟ್ರೀಯ ವಕ್ತಾರ ಸಂಜಯ್ ಸಿಂಗ್, ಈ ಚಿತ್ರವು ರಾಮ, ಸೀತೆ, ಹನುಮಾನ್ ಮತ್ತು ಹಿಂದೂ ಸಮಾಜಕ್ಕೆ “ಘೋರ ಅವಮಾನ”,ಈ ಚಿತ್ರ ಮಾಡಲು ಬಿಜೆಪಿ ಅನುಮತಿ ನೀಡಿದೆ. ಇಂತಹ ಚಿತ್ರ ನಿರ್ಮಾಣ ಮತ್ತು ಪ್ರದರ್ಶನಕ್ಕೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಕೃತಿ ಸನೋನ್, ಸೈಫ್ ಅಲಿ ಖಾನ್ ಮತ್ತು ಸನ್ನಿ ಸಿಂಗ್ ನಟಿಸಿರುವ 3D ಬಹುಭಾಷಾ ಚಿತ್ರ ಶುಕ್ರವಾರ ದೇಶಾದ್ಯಂತ ಬಿಡುಗಡೆಯಾಗಿದೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

13 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

14 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

15 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

16 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

21 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

21 hours ago