ಚಿತ್ರ ಮಂಜರಿ

ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ ವಿವಾದ: ಹೈಕೋರ್ಟ್​ ಮೆಟ್ಟಿಲೇರಿದ ನಟ ಗಣೇಶ್​

ಗುಂಡ್ಲುಪೇಟೆ : ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಕ್ಕೆ ಸಿಲುಕಿರುವ ನಟ ‘ಗೋಲ್ಡನ್​ ಸ್ಟಾರ್​’ ಗಣೇಶ್ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಅರಣ್ಯ ಇಲಾಖೆ ನೀಡಿರುವ ನೋಟೀಸ್​ಗೆ ತಡೆಯಾಜ್ಞೆ ನೀಡುವಂತೆ ಗಣೇಶ್​ ಮನವಿ ಮಾಡಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಹೋಬಳಿಯ ಜಕ್ಕಳ್ಳಿ ಗ್ರಾಮದಲ್ಲಿ ಗಣೇಶ್ ಅವರು ಕಟ್ಟಡ ನಿರ್ಮಿಸುತ್ತಿದ್ದಾರೆ. ಪರಿಸರ ಸೂಕ್ಷ್ಮ ವಲಯದಲ್ಲಿ ಶಾಶ್ವತ ಕಟ್ಟಡ ನಿರ್ಮಿಸಬಾರದು. ಹೀಗಾಗಿ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಅರಣ್ಯ ಇಲಾಖೆಯು ಗಣೇಶ್ ಅವರಿಗೆ ನೋಟೀಸ್​ ನೀಡಿತ್ತು. ಇದನ್ನು ಪ್ರಶ್ನಿಸಿ ಗಣೇಶ್ ಪರ ಹಿರಿಯ ವಕೀಲ ಸಿ.ಕೆ. ನಂದಕುಮಾರ್ ಅವರು ಹೈಕೋರ್ಟ್​ನಲ್ಲಿ ವಾದ ಮಂಡಿಸಿದ್ದಾರೆ.

ವಕೀಲರ ವಾದವೇನು? : ‘ನಟ ಗಣೇಶ್ ಅವರು ಅರಣ್ಯ ಪ್ರದೇಶದಲ್ಲಿ ಯಾವುದೇ ಕಟ್ಟಡ ನಿರ್ಮಿಸುತ್ತಿಲ್ಲ. 10 ಕಿಲೋ ಮೀಟರ್ ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಿಸಬಾರದೆಂಬ ಸುಪ್ರೀಂ ಕೋರ್ಟ್ ತೀರ್ಪು ಈಗ ಮಾರ್ಪಾಟಾಗಿದೆ. ಕೇವಲ ಭೂಮಿ ಸಮತಟ್ಟು ಮಾಡಿ ಸ್ಥಳಾಂತರಿಸಬಹುದಾದ ಸ್ಟೀಲ್ ಕಟ್ಟಡವನ್ನಷ್ಟೇ ನಿರ್ಮಿಸಲಾಗುತ್ತಿದೆ. ಹೀಗಾಗಿ ಅರಣ್ಯ ಇಲಾಖೆ ನೋಟೀಸ್​ಗೆ ತಡೆಯಾಜ್ಞೆ ನೀಡಬೇಕು’ ಎಂದು ಗಣೇಶ್ ಪರ ವಕೀಲರು ಮನವಿ ಮಾಡಿದರು.

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠವು ಗಣೇಶ್ ಸಲ್ಲಿಸಿದ್ದ ಕಾಮಗಾರಿಯ ಫೋಟೋಗಳನ್ನು ಪರಿಶೀಲಿಸಿದೆ. ‘ಕಾಂಕ್ರಿಟ್ ತಳಪಾಯದ ಕಟ್ಟಡದ ಕಾಮಗಾರಿ ನಡೆಸಲಾಗುತ್ತಿದೆ. ಶಾಶ್ವತ ಕಟ್ಟಡಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲವೆಂದು’ ಮೌಖಿಕವಾಗಿ ಕೋರ್ಟ್​ ಅಭಿಪ್ರಾಯಪಟ್ಟಿದೆ. ಅರಣ್ಯ ಇಲಾಖೆ ನೀಡಿರುವ ನೋಟೀಸ್​ಗೆ 1 ವಾರದಲ್ಲಿ ಪ್ರತಿಕ್ರಿಯೆ ನೀಡುವಂತೆ ನಟ ಗಣೇಶ್​ಗೆ ಸೂಚಿಸಿದೆ.

ನಾಲ್ಕು ವಾರದಲ್ಲಿ ವಿಚಾರಣಾ ಪ್ರಕ್ರಿಯೆ ಪೂರ್ಣಗೊಳಿಸಲು ಅರಣ್ಯ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ ಗಣೇಶ್ ಅವರಿಗೆ ಸಂಪೂರ್ಣ ರಿಲೀಫ್ ಸಿಗದಿದ್ದರೂ ಈಗ ಮತ್ತೆ ವಿವಾದ ಅರಣ್ಯ ಇಲಾಖೆಗೆ ವರ್ಗಾವಣೆಯಾಗಿದೆ. ಅರಣ್ಯ ಇಲಾಖೆ ಗಣೇಶ್ ಅಹವಾಲನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago