ಕೆಜಿಎಫ್‌ ಸಿನಿಮಾ ಮೂಲಕ ಪ್ಯಾನ್‌ ಇಂಡಿಯಾ ಸ್ಟಾರ್‌ ಆದ ರಾಕಿಂಗ್ ಸ್ಟಾರ್‌ ಯಶ್‌ ಸದ್ಯ ಕೆಜಿಎಫ್‌ ಸರಣಿಗಳು ಬಂದು ಹೋಗಿ ಒಂದುವರೆ ವರ್ಷ ಕಳೆದರೂ ಕೂಡ ಯಶ್‌ ತಮ್ಮ ಮುಂದಿನ ಸಿನಿಮಾ ಬಗ್ಗೆ ಯಾವುದೇ ಅಪ್ಡೇಟ್‌ ನೀಡಿಲ್ಲ. ಹೀಗಾಗಿ ರಾಕಿ ಬಾಯ್‌ ಅಭಿಮಾನಿಗಳು ಬೆಸರದಿಂದಲೇ ಮುಂದಿನ ಸಿನಿಮಾಗಾಗಿ ಕಾದು ಕುಳಿತಿದ್ದಾರೆ. ಈ ನಡುವೆ ಆಗಾಗ ಯಶ್‌ 19 ಬಗ್ಗೆ ಗಾಳಿಸುದ್ದಿಗಳು ಹರಿದಾಡುತ್ತಿರುತ್ತವೆ. ಇದೀಗ ಯಶ್‌ 19 ಸಿನಿಮಾಗೆ ಕೌಂಟ್‌ ಡೌನ್‌ ಶುರುವಾಗಿದೆ ಎನ್ನಲಾಗುತ್ತಿದೆ.

ಇದೀಗ ಯಶ್‌ ಅವರು ಅಪ್ಲೋಡ್‌ ಮಾಡಿರುವ ಇಸ್ಟಾಗ್ರಾಮ್‌ ಪ್ರೊಫೈಲ್‌ ಫೋಟೋದಿಂದ ಯಶ್‌ 19 ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ. ಲೋಡಿಂಗ್‌ ಎಂಬ ಬರಹವಿರುವ ಫೋಟೊವನ್ನು ಯಶ್‌ ಅವರು ಅಪ್‌ಲೋಡ್‌ ಮಾಡಿದ್ದಾರೆ. ಸಧ್ಯ ಈ ಫೋಟೊ ಅವರ ಮುಂದಿನ ಸಿನಿಮಾ ಅಪ್ಡೇಟ್‌ ನೀಡಿದ್ದಾರಾ ಎಂಬ ಕುತೂಹಲ ಹುಟ್ಟಿಸಿದೆ.

ಕಳೆದ ಕೆಲ ದಿನಗಳ ಹಿಂದೆ ಸ್ವತಃ ಯಶ್‌ ಅವರೇ ಬಿಜಿಎಸ್‌ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಹೌದು, ನವೆಂಬರ್‌ 23 ರಂದು ನಡೆದ ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಯಶ್‌ ತಮ್ಮ ಮುಂದಿನ ಚಿತ್ರದ ಅಪ್‌ಡೇಟ್‌ ಅನ್ನು ಸ್ವತಃ ತಾವೇ ನೀಡಲಿದ್ದೇನೆ ಎಂದು ಹೇಳಿಕೊಳ್ಳುವ ಮೂಲಕ ಎಲ್ಲಾ ಊಹಾಪೋಹದ ಸುದ್ದಿಗಳಿಗೂ ತೆರೆ ಎಳೆದಿದ್ದರು.

“ಒಳ್ಳೊಳ್ಳೆ ಹೊಸ ಕಲಾವಿದರು ಬರುತ್ತಾ ಇದ್ದಾರೆ. ಅವರ ಚಿತ್ರಗಳನ್ನು ನೋಡಿ ಬೆನ್ನು ತಟ್ಟಿ. ನಮಗೂ ನೀವು ಬೆನ್ನು ತಟ್ಟಿದ್ದಕ್ಕೆ ನಾನು ಇವತ್ತು ಈ ಸ್ಥಾನದಲ್ಲಿರೋದು. ನೀವೆಲ್ಲಾ ಕೇಳ್ತಾ ಇದೀರ ನನಗೆ ಗೊತ್ತು ಅಪ್‌ಡೇಟ್‌ ಅಂತ. ಒಂದು ವಿಷಯ ಹೇಳ್ತೀನಿ, ನಾನು ಕೂತಿದೀನಿ ಅಂದ್ರೆ ಅದು ನೀವು ಕೊಟ್ಟ ಧೈರ್ಯದಿಂದ. ಹಂಗಂತ ನಾನು ರಿಲ್ಯಾಕ್ಸ್‌ ಆಗಿ ಕೂತಿಲ್ಲ. ನೀವು ಕೊಟ್ಟಿರೋ ಸಕ್ಸಸ್‌ ಜವಾಬ್ದಾರಿ ಅಂತ ತಿಳಿದುಕೊಂಡು ಇನ್ನೂ ಮುಂದೆ ಕೆಲಸ ಮಾಡಬೇಕು ಅಂತ ಮುಂದಿನ ಹಂತಕ್ಕೋಸ್ಕರ ಪ್ರಿಪೇರ್‌ ಆಗ್ತಾ ಇದೀನಿ, ಕೆಲಸ ಮಾಡ್ತೀನಿ. ತಾಳ್ಮೆ ಇಟ್ಟುಕೊಳ್ಳಿ, ನಾನು ಯಾವತ್ತೂ ಅನೌನ್ಸ್‌ಮೆಂಟ್‌ ಅಂತ ಹೇಳಿಲ್ಲ. ತುಂಬಾ ಜನ ಅವರ ಖುಷಿಗೆ ಪ್ರತಿ ಹಬ್ಬ ಬಂದಾಗ, ಯಾವುದೇ ತಿಂಗಳು ಬಂದಾಗಲೂ ಈ ತಿಂಗಳು ಅಪ್‌ಡೇಟ್‌ ಅಂತ ಹೇಳಿ ಹೇಳಿ ನಿಮಗೆ ಆ ತಾಳ್ಮೆ ಲೆವೆಲ್‌ ಹೋಗ್ತಿದೆ, ಮಿಸ್‌ಗೈಡ್‌ ಆಗ್ತಿದೆ. ನಾನೇ ಹೇಳ್ತೀನಿ, ಅಡುಗೆ ಬೆಂದಮೇಲೆ ಬಡಿಸಬೇಕು, ಮುಂಚೆನೇ ಮಾಡೋಕೆ ನನಗೆ ಇಷ್ಟ ಇಲ್ಲ, ಸ್ವಲ್ಪ ತಾಳ್ಮೆ ಇಟ್ಟುಕೊಳ್ಳಿ, ನಿಮಗೆ ಇಷ್ಟವಾಗುವಂತ ಕೆಲಸ ಆಗುತ್ತೆ, ಥ್ಯಾಂಕ್ಯೂ” ಎಂದು ಯಶ್‌ ಹೇಳಿಕೆ ನೀಡಿದರು.

lokesh

Recent Posts

ಓದುಗರ ಪತ್ರ: ಮೈಸೂರಿನಲ್ಲಿ ಮಳೆ ನೀರು ಕೊಯ್ಲು ಥೀಮ್ ಪಾರ್ಕ್ ಕನ್ನಡಿಯೊಳಗಿನ ಗಂಟು

ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…

3 hours ago

ಓದುಗರ ಪತ್ರ: ಅಂಕೇಗೌಡರಿಗೆ ಸಿಕ್ಕ ಪದ್ಮಶ್ರೀ ಸಾರಸ್ವತ ಲೋಕಕ್ಕೆ ಸಂದ ಗೌರವ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…

3 hours ago

ಓದುಗರ ಪತ್ರ: ರಾಮಕೃಷ್ಣನಗರಕ್ಕೆ ಮತ್ತಷ್ಟು ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…

3 hours ago

ವಿಜೃಂಭಣೆಯಿಂದ ನಡೆದ ಸಂತೆ ಮಾಸ್ತಮ್ಮನವರ ಜಾತ್ರೆ

ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…

3 hours ago

ಕಬಿನಿ ಹಿನ್ನೀರಿನ ರೆಸಾರ್ಟ್‌ಗಳ ದಾಖಲಾತಿ ಪರಿಶೀಲನೆ

ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…

3 hours ago

ಬೀದಿ ನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ವಿರೋಧ

ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…

3 hours ago