ಚಿತ್ರ ಮಂಜರಿ

ಒಟಿಟಿ ಸೆನ್ಸಾರ್‌ಶಿಪ್‌ ಅರ್ಜಿಯನ್ನು ತಳ್ಳಿ ಹಾಕಿದ ಕೋರ್ಟ್‌

ಮನರಂಜನೆಯ ಜಗತ್ತಿನಲ್ಲಿ ಈಗ ಒಟಿಟಿ ಪ್ಲಾಟ್​ಫಾರ್ಮ್​ನದ್ದೇ ಹವಾ. ಎಲ್ಲ ಹೊಸ ಸಿನಿಮಾಗಳೂ ಚಿತ್ರಮಂದಿರದಲ್ಲಿ ಬಿಡುಗಡೆಯಾದ ಕೆಲವೇ ದಿನಗಳ ನಂತರ ಒಟಿಟಿಗೆ ಲಗ್ಗೆ ಇಡುತ್ತವೆ. ಹಲವಾರು ವೆಬ್​ ಸರಣಿಗಳು ಪ್ರತಿ ವಾರ ಬಿಡುಗಡೆ ಆಗುತ್ತವೆ. ರಿಯಾಲಿಟಿ ಶೋಗಳು ಕೂಡ ಒಟಿಟಿಯಲ್ಲಿ ಶೈನ್​ ಆಗುತ್ತಿವೆ. ಹೊಸ ಹೊಸ ಸಿನಿಮಾಗಳನ್ನು ಕೊಂಡುಕೊಳ್ಳುವಲ್ಲಿ ಎಲ್ಲ ಒಟಿಟಿ ಸಂಸ್ಥೆಗಳ ನಡುವೆ ಪೈಪೋಟಿ ಇದೆ. ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ ಪ್ರಸಾರ ಆಗುವ ಕಂಟೆಂಟ್​ಗಳ ಬಗ್ಗೆ ಕೆಲವರಿಗೆ ತರಕಾರು ಇದೆ. ಬೋಲ್ಡ್​ ದೃಶ್ಯಗಳು ಹೆಚ್ಚಾಗಿರುತ್ತವೆ ಎಂದು ಅನೇಕರು ಮೂಗು ಮುರಿದಿದ್ದುಂಟು. ಈ ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆ ಬಗ್ಗೆ ಮಹತ್ವದ ತೀರ್ಪು ಪ್ರಕಟ ಆಗಿದೆ. ಒಟಿಟಿ ಕಂಟೆಂಟ್​ಗಳಿಗೆ ಸೆನ್ಸಾರ್ ಸಮಿತಿ ರಚಿಸಲು ಸಾಧ್ಯವಿಲ್ಲ ಎಂದು ಕೋರ್ಟ್​ ಹೇಳಿದೆ.

‘ವೆಬ್​ ಸಿರೀಸ್​ಗಳಿಗೆ ಸೆನ್ಸಾರ್​ ಕಮಿಟಿ ಇರಲು ಹೇಗೆ ಸಾಧ್ಯ? ಅದಕ್ಕಾಗಿ ಬೇರೆಯದೇ ಕಾನೂನು ಇದೆ. ಅದರ ಅಡಿಯಲ್ಲಿ ಒಟಿಟಿ ಬರುತ್ತದೆ ಎಂದಾದರೆ ಮಾತ್ರ ಈಗಿರುವ ಕಾನೂನು ಅನ್ವಯ ಆಗುತ್ತದೆ. ಬೇರೆ ಬೇರೆ ದೇಶಗಳಿಂದಲೂ ಕಂಟೆಂಟ್​ ಪ್ರಸಾರ ಆಗುವುದರಿಂದ ಅನೇಕ ಪ್ರಶ್ನೆಗಳು ಉದ್ಭವ ಆಗುತ್ತವೆ’ ಎಂದು ಕೋರ್ಟ್​ ತಿಳಿಸಿದೆ.

‘ವೀಕ್ಷಕರು ಇಲ್ಲಿನವರೇ ಆಗಿದ್ದರೂ ಕೂಡ ಕಂಟೆಂಟ್​ ಪ್ರಸಾರ ಆಗುತ್ತಿರುವುದು ಬೇರೆ ಬೇರೆ ದೇಶಗಳಿಂದ. ಪ್ರಸಾರ ಆದ ನಂತರ ಏನಾದರೂ ತಪ್ಪಿದ್ದರೆ ಕ್ರಮ ಕೈಗೊಳ್ಳುವುದು ಬೇರೆ. ನಿಮ್ಮ ಅರ್ಜಿ ಹೆಚ್ಚು ವಿವರವಾಗಿ ಇರಬೇಕು’ ಎಂದು ಹೇಳುವ ಮೂಲಕ ಅರ್ಜಿದಾರರ ಮನವಿಯನ್ನು ಕೋರ್ಟ್​ ತಳ್ಳಿಹಾಕಿದೆ.

ಭಾರತದಲ್ಲೂ ಒಟಿಟಿ ಸಂಸ್ಥೆಗಳ ಪ್ರಾಬಲ್ಯ ಹೆಚ್ಚಿದೆ. ಅಮೇಜಾನ್​ ಪ್ರೈಂ ವಿಡಿಯೋ, ನೆಟ್​ಫ್ಲಿಕ್ಸ್​, ಸೋನಿ ಲಿವ್​, ಜೀ5, ವೂಟ್​ ಸೆಲೆಕ್ಟ್​, ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​, ಆಲ್ಟ್​ ಬಾಲಾಜಿ, ಆಹಾ ಸೇರಿದಂತೆ ಹತ್ತಾರು ಒಟಿಟಿ ಸಂಸ್ಥೆಗಳು ಕಾರ್ಯನಿರತವಾಗಿವೆ. ಇವುಗಳಲ್ಲಿ ಪ್ರಸಾರ ಆಗುವ ಕೆಲವು ಕಂಟೆಂಟ್​ಗಳು ತುಂಬ ಬೋಲ್ಡ್​ ಆಗಿರುತ್ತವೆ. ಎಲ್ಲಾ ವಯೋಮಾನದವರಿಗೆ ಸೂಕ್ತ ಆಗದಂತಹ ದೃಶ್ಯಗಳು ಕೂಡ ಇರುತ್ತವೆ. ಅವುಗಳಿಗೆ ಸೆನ್ಸಾರ್​ ಮಾಡಬೇಕು ಎಂಬುದು ಕೆಲವರ ಒತ್ತಾಯ.

‘ಮಿರ್ಜಾಪುರ್​’ ವೆಬ್​ ಸರಣಿಯ ಹೊಸ ಸೀಸನ್​ಗೆ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. ಅದಕ್ಕೆ ತಡೆ ನೀಡಬೇಕು ಎಂದು ಮಿರ್ಜಾಪುರ್​ ನಗರದ ನಿವಾಸಿಯೊಬ್ಬರು ಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಈ ವೆಬ್​ ಸರಣಿಯಲ್ಲಿ ಮಿರ್ಜಾಪುರ್ ನಗರವನ್ನು ಆಕ್ಷೇಪಾರ್ಹವಾಗಿ ತೋರಿಸಲಾಗಿದ್ದು, ಅದರ ಬಿಡುಗಡೆಗೆ ತಡೆ ನೀಡಬೇಕು ಎಂಬ ಮನವಿಯನ್ನು ಕೋರ್ಟ್​ ತಳ್ಳಿಹಾಕಿದೆ.

andolana

Recent Posts

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

36 mins ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

1 hour ago

ಶಿಕ್ಷಕರ ನೇಮಕಾತಿ ಶೀಘ್ರ : ಸಿಎಂ ಭರವಸೆ

ಬೆಂಗಳೂರು : ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಬಗ್ಗೆ…

1 hour ago

ಒಕ್ಕಲಿಗರ ಮೇಲೆ ಪ್ರೀತಿ ಪ್ರದರ್ಶನಕ್ಕೆ ಇದು ಸಕಾಲ ಎಂದು ಸಿದ್ದರಾಮಯ್ಯ ಕಾಲೆಳೆದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ…

1 hour ago

ಗಾಂಜಾ ಮಾರಾಟಕ್ಕೆ ಯತ್ನ : ಬಂಧನ

ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು…

2 hours ago

ʻಮನ್‌ ಕಿ ಬಾತ್‌ʼನಲ್ಲಿ ಕರ್ನಾಟಕದ ರೈತರನ್ನು ಪ್ರಶಂಸಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ರೈತರ…

2 hours ago