ಚಿತ್ರ ಮಂಜರಿ

ಒಟಿಟಿ ಸೆನ್ಸಾರ್‌ಶಿಪ್‌ ಅರ್ಜಿಯನ್ನು ತಳ್ಳಿ ಹಾಕಿದ ಕೋರ್ಟ್‌

ಮನರಂಜನೆಯ ಜಗತ್ತಿನಲ್ಲಿ ಈಗ ಒಟಿಟಿ ಪ್ಲಾಟ್​ಫಾರ್ಮ್​ನದ್ದೇ ಹವಾ. ಎಲ್ಲ ಹೊಸ ಸಿನಿಮಾಗಳೂ ಚಿತ್ರಮಂದಿರದಲ್ಲಿ ಬಿಡುಗಡೆಯಾದ ಕೆಲವೇ ದಿನಗಳ ನಂತರ ಒಟಿಟಿಗೆ ಲಗ್ಗೆ ಇಡುತ್ತವೆ. ಹಲವಾರು ವೆಬ್​ ಸರಣಿಗಳು ಪ್ರತಿ ವಾರ ಬಿಡುಗಡೆ ಆಗುತ್ತವೆ. ರಿಯಾಲಿಟಿ ಶೋಗಳು ಕೂಡ ಒಟಿಟಿಯಲ್ಲಿ ಶೈನ್​ ಆಗುತ್ತಿವೆ. ಹೊಸ ಹೊಸ ಸಿನಿಮಾಗಳನ್ನು ಕೊಂಡುಕೊಳ್ಳುವಲ್ಲಿ ಎಲ್ಲ ಒಟಿಟಿ ಸಂಸ್ಥೆಗಳ ನಡುವೆ ಪೈಪೋಟಿ ಇದೆ. ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ ಪ್ರಸಾರ ಆಗುವ ಕಂಟೆಂಟ್​ಗಳ ಬಗ್ಗೆ ಕೆಲವರಿಗೆ ತರಕಾರು ಇದೆ. ಬೋಲ್ಡ್​ ದೃಶ್ಯಗಳು ಹೆಚ್ಚಾಗಿರುತ್ತವೆ ಎಂದು ಅನೇಕರು ಮೂಗು ಮುರಿದಿದ್ದುಂಟು. ಈ ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆ ಬಗ್ಗೆ ಮಹತ್ವದ ತೀರ್ಪು ಪ್ರಕಟ ಆಗಿದೆ. ಒಟಿಟಿ ಕಂಟೆಂಟ್​ಗಳಿಗೆ ಸೆನ್ಸಾರ್ ಸಮಿತಿ ರಚಿಸಲು ಸಾಧ್ಯವಿಲ್ಲ ಎಂದು ಕೋರ್ಟ್​ ಹೇಳಿದೆ.

‘ವೆಬ್​ ಸಿರೀಸ್​ಗಳಿಗೆ ಸೆನ್ಸಾರ್​ ಕಮಿಟಿ ಇರಲು ಹೇಗೆ ಸಾಧ್ಯ? ಅದಕ್ಕಾಗಿ ಬೇರೆಯದೇ ಕಾನೂನು ಇದೆ. ಅದರ ಅಡಿಯಲ್ಲಿ ಒಟಿಟಿ ಬರುತ್ತದೆ ಎಂದಾದರೆ ಮಾತ್ರ ಈಗಿರುವ ಕಾನೂನು ಅನ್ವಯ ಆಗುತ್ತದೆ. ಬೇರೆ ಬೇರೆ ದೇಶಗಳಿಂದಲೂ ಕಂಟೆಂಟ್​ ಪ್ರಸಾರ ಆಗುವುದರಿಂದ ಅನೇಕ ಪ್ರಶ್ನೆಗಳು ಉದ್ಭವ ಆಗುತ್ತವೆ’ ಎಂದು ಕೋರ್ಟ್​ ತಿಳಿಸಿದೆ.

‘ವೀಕ್ಷಕರು ಇಲ್ಲಿನವರೇ ಆಗಿದ್ದರೂ ಕೂಡ ಕಂಟೆಂಟ್​ ಪ್ರಸಾರ ಆಗುತ್ತಿರುವುದು ಬೇರೆ ಬೇರೆ ದೇಶಗಳಿಂದ. ಪ್ರಸಾರ ಆದ ನಂತರ ಏನಾದರೂ ತಪ್ಪಿದ್ದರೆ ಕ್ರಮ ಕೈಗೊಳ್ಳುವುದು ಬೇರೆ. ನಿಮ್ಮ ಅರ್ಜಿ ಹೆಚ್ಚು ವಿವರವಾಗಿ ಇರಬೇಕು’ ಎಂದು ಹೇಳುವ ಮೂಲಕ ಅರ್ಜಿದಾರರ ಮನವಿಯನ್ನು ಕೋರ್ಟ್​ ತಳ್ಳಿಹಾಕಿದೆ.

ಭಾರತದಲ್ಲೂ ಒಟಿಟಿ ಸಂಸ್ಥೆಗಳ ಪ್ರಾಬಲ್ಯ ಹೆಚ್ಚಿದೆ. ಅಮೇಜಾನ್​ ಪ್ರೈಂ ವಿಡಿಯೋ, ನೆಟ್​ಫ್ಲಿಕ್ಸ್​, ಸೋನಿ ಲಿವ್​, ಜೀ5, ವೂಟ್​ ಸೆಲೆಕ್ಟ್​, ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​, ಆಲ್ಟ್​ ಬಾಲಾಜಿ, ಆಹಾ ಸೇರಿದಂತೆ ಹತ್ತಾರು ಒಟಿಟಿ ಸಂಸ್ಥೆಗಳು ಕಾರ್ಯನಿರತವಾಗಿವೆ. ಇವುಗಳಲ್ಲಿ ಪ್ರಸಾರ ಆಗುವ ಕೆಲವು ಕಂಟೆಂಟ್​ಗಳು ತುಂಬ ಬೋಲ್ಡ್​ ಆಗಿರುತ್ತವೆ. ಎಲ್ಲಾ ವಯೋಮಾನದವರಿಗೆ ಸೂಕ್ತ ಆಗದಂತಹ ದೃಶ್ಯಗಳು ಕೂಡ ಇರುತ್ತವೆ. ಅವುಗಳಿಗೆ ಸೆನ್ಸಾರ್​ ಮಾಡಬೇಕು ಎಂಬುದು ಕೆಲವರ ಒತ್ತಾಯ.

‘ಮಿರ್ಜಾಪುರ್​’ ವೆಬ್​ ಸರಣಿಯ ಹೊಸ ಸೀಸನ್​ಗೆ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. ಅದಕ್ಕೆ ತಡೆ ನೀಡಬೇಕು ಎಂದು ಮಿರ್ಜಾಪುರ್​ ನಗರದ ನಿವಾಸಿಯೊಬ್ಬರು ಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಈ ವೆಬ್​ ಸರಣಿಯಲ್ಲಿ ಮಿರ್ಜಾಪುರ್ ನಗರವನ್ನು ಆಕ್ಷೇಪಾರ್ಹವಾಗಿ ತೋರಿಸಲಾಗಿದ್ದು, ಅದರ ಬಿಡುಗಡೆಗೆ ತಡೆ ನೀಡಬೇಕು ಎಂಬ ಮನವಿಯನ್ನು ಕೋರ್ಟ್​ ತಳ್ಳಿಹಾಕಿದೆ.

andolana

Recent Posts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

11 hours ago

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್‌ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…

12 hours ago

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…

12 hours ago

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…

13 hours ago

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ…

13 hours ago

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು…

14 hours ago