ಚಿತ್ರ ಮಂಜರಿ

ಆರ್‌ಸಿಬಿ ಜೆರ್ಸಿಯನ್ನು ತೆಗೆದು ಹಾಕುವಂತೆ ಜೈಲರ್ ನಿರ್ಮಾಪಕರಿಗೆ ಕೋರ್ಟ್ ಸೂಚನೆ

ಸೆಪ್ಟೆಂಬರ್ 1 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಜೆರ್ಸಿಯನ್ನು ಹೊಂದಿರುವ ದೃಶ್ಯವನ್ನು ಯಾವುದೇ ಥಿಯೇಟರ್‌ಗಳಲ್ಲಿ ಪ್ರದರ್ಶಿಸದಂತೆ “ಜೈಲರ್” ಚಲನಚಿತ್ರ ನಿರ್ಮಾಪಕರಿಗೆ ದೆಹಲಿ ಹೈಕೋರ್ಟ್ ನಿರ್ದೇಶಿಸಿದೆ.

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಚಿತ್ರದ ಪಾತ್ರವೊಂದಕ್ಕೆ ಆರ್​ಸಿಬಿ ಜೆರ್ಸಿಯನ್ನು ಬಳಸಲಾಗಿದೆ. ಇದೀಗ ಈ ಆರ್​ಸಿಬಿ ಜೆರ್ಸಿಯ ಧರಿಸಿರುವ ಪಾತ್ರಧಾರಿಯ ದೃಶ್ಯಕ್ಕೆ ಕತ್ತರಿ ಹಾಕುವಂತೆ ಕೋರ್ಟ್​ ಸೂಚಿಸಿದೆ.

ಈ ಚಿತ್ರದ ಕಾಂಟ್ರಾಕ್ಟ್​ ಕಿಲ್ಲರ್ ಪಾತ್ರದಲ್ಲಿ ಆರ್​ಸಿಬಿ ಜೆರ್ಸಿ ಧರಿಸಿರುವ ವ್ಯಕ್ತಿ ಕಾಣಿಸಿಕೊಂಡಿದ್ದರು. ಅಲ್ಲದೆ ಈ ಪಾತ್ರಧಾರಿ ಮಹಿಳೆಯ ಬಗ್ಗೆ ಅವಹೇಳನಕಾರಿ ಮತ್ತು ಸ್ತ್ರೀದ್ವೇಷದ ಡೈಲಾಗ್​ಗಳನ್ನು ಹೇಳುವುದನ್ನು ಜೈಲರ್​ ಚಿತ್ರದಲ್ಲಿ ಕಾಣಬಹುದು. ಇದರ ವಿರುದ್ಧ ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಕೋರ್ಟ್ ಮೆಟ್ಟಿಲೇರಿದ್ದರು.

ನಮ್ಮ ಅನುಮತಿಯಿಲ್ಲದೆ ತಮ್ಮ ಜೆರ್ಸಿಯನ್ನು ಬಳಸಿ ನಕಾರಾತ್ಮಕವಾಗಿ ಬಿಂಬಿಸಲಾಗಿದೆ. ಇದರಿಂದ ಆರ್​ಸಿಬಿ ಬ್ರ್ಯಾಂಡ್ ಇಮೇಜ್​ಗೆ ಮತ್ತು ಇಕ್ವಿಟಿಗೆ ಹಾನಿಯುಂಟಾಗುತ್ತಿದೆ ಎಂದು ಆರ್​ಸಿಬಿ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ವಾದವನ್ನು ಮುಂದಿಟ್ಟಿದೆ.

ಈ ಮೊಕದ್ದಮೆಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್, ಜೈಲರ್ ಚಿತ್ರದಿಂದ ಈ ದೃಶ್ಯವನ್ನು ಅಥವಾ ಆರ್​ಸಿಬಿ ಜೆರ್ಸಿ ಧರಿಸಿರುವುದನ್ನು ತೆಗೆದು ಹಾಕುವಂತೆ ಸೂಚಿಸಿದೆ. ಅಷ್ಟೇ ಅಲ್ಲದೆ ಚಿತ್ರವು ಟಿವಿ, ಸ್ಯಾಟ್​ಲೈಟ್ ಅಥವಾ ಒಟಿಟಿಯಲ್ಲಿ ಬಿಡುಗಡೆ ಮೊದಲು ಈ ದೃಶ್ಯವನ್ನು ಎಡಿಟ್ ಮಾಡಬೇಕೆಂದು ತಿಳಿಸಲಾಗಿದೆ.

ದೆಹಲಿ ಹೈಕೋರ್ಟ್​ನ ಈ ಎಲ್ಲಾ ಆದೇಶಗಳಿಗೂ ಜೈಲರ್​ ನಿರ್ಮಾಪಕರು ಒಪ್ಪಿಗೆ ಸೂಚಿಸಿದ್ದಾರೆ. ಹಾಗೆಯೇ ಸದ್ಯ ಥಿಯೇಟರ್​ನಲ್ಲಿರುವ ಜೈಲರ್ ಚಿತ್ರದಿಂದ, ಸೆಪ್ಟೆಂಬರ್ 1 ರೊಳಗೆ ಆರ್​ಸಿಬಿ ಜೆರ್ಸಿಯ ದೃಶ್ಯವನ್ನು ತೆಗೆದು ಹಾಕುವಂತೆ ಕೋರ್ಟ್ ಸೂಚಿಸಿದೆ. ಹಾಗೆಯೇ ನ್ಯಾಯಾಲಯದ ಸಂಪೂರ್ಣ ಶುಲ್ಕವನ್ನು ಫಿರ್ಯಾದಿದಾರರಿಗೆ ಮರುಪಾವತಿಸಲು ದೆಹಲಿ ಹೈಕೋರ್ಟ್ ಆದೇಶಿಸಿದೆ.

andolanait

Recent Posts

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

6 mins ago

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…

25 mins ago

ಗ್ಯಾಸ್‌ ಸಿಲಿಂಡರ್ ಅಭಾವ : ಗ್ರಾಹಕರ ಕಿಸೆಗೆ ಕತ್ತರಿ

ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ   • ಚಿರಂಜೀವಿ ಸಿ…

36 mins ago

ಶತಮಾನ ಕಳೆದರೂ ಹೊಸತನ ಮೆರೆವ ಶಾಲೆ!

• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…

49 mins ago

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

10 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

11 hours ago