ಚಿತ್ರ ಮಂಜರಿ

ಆರ್‌ಸಿಬಿ ಜೆರ್ಸಿಯನ್ನು ತೆಗೆದು ಹಾಕುವಂತೆ ಜೈಲರ್ ನಿರ್ಮಾಪಕರಿಗೆ ಕೋರ್ಟ್ ಸೂಚನೆ

ಸೆಪ್ಟೆಂಬರ್ 1 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಜೆರ್ಸಿಯನ್ನು ಹೊಂದಿರುವ ದೃಶ್ಯವನ್ನು ಯಾವುದೇ ಥಿಯೇಟರ್‌ಗಳಲ್ಲಿ ಪ್ರದರ್ಶಿಸದಂತೆ “ಜೈಲರ್” ಚಲನಚಿತ್ರ ನಿರ್ಮಾಪಕರಿಗೆ ದೆಹಲಿ ಹೈಕೋರ್ಟ್ ನಿರ್ದೇಶಿಸಿದೆ.

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಚಿತ್ರದ ಪಾತ್ರವೊಂದಕ್ಕೆ ಆರ್​ಸಿಬಿ ಜೆರ್ಸಿಯನ್ನು ಬಳಸಲಾಗಿದೆ. ಇದೀಗ ಈ ಆರ್​ಸಿಬಿ ಜೆರ್ಸಿಯ ಧರಿಸಿರುವ ಪಾತ್ರಧಾರಿಯ ದೃಶ್ಯಕ್ಕೆ ಕತ್ತರಿ ಹಾಕುವಂತೆ ಕೋರ್ಟ್​ ಸೂಚಿಸಿದೆ.

ಈ ಚಿತ್ರದ ಕಾಂಟ್ರಾಕ್ಟ್​ ಕಿಲ್ಲರ್ ಪಾತ್ರದಲ್ಲಿ ಆರ್​ಸಿಬಿ ಜೆರ್ಸಿ ಧರಿಸಿರುವ ವ್ಯಕ್ತಿ ಕಾಣಿಸಿಕೊಂಡಿದ್ದರು. ಅಲ್ಲದೆ ಈ ಪಾತ್ರಧಾರಿ ಮಹಿಳೆಯ ಬಗ್ಗೆ ಅವಹೇಳನಕಾರಿ ಮತ್ತು ಸ್ತ್ರೀದ್ವೇಷದ ಡೈಲಾಗ್​ಗಳನ್ನು ಹೇಳುವುದನ್ನು ಜೈಲರ್​ ಚಿತ್ರದಲ್ಲಿ ಕಾಣಬಹುದು. ಇದರ ವಿರುದ್ಧ ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಕೋರ್ಟ್ ಮೆಟ್ಟಿಲೇರಿದ್ದರು.

ನಮ್ಮ ಅನುಮತಿಯಿಲ್ಲದೆ ತಮ್ಮ ಜೆರ್ಸಿಯನ್ನು ಬಳಸಿ ನಕಾರಾತ್ಮಕವಾಗಿ ಬಿಂಬಿಸಲಾಗಿದೆ. ಇದರಿಂದ ಆರ್​ಸಿಬಿ ಬ್ರ್ಯಾಂಡ್ ಇಮೇಜ್​ಗೆ ಮತ್ತು ಇಕ್ವಿಟಿಗೆ ಹಾನಿಯುಂಟಾಗುತ್ತಿದೆ ಎಂದು ಆರ್​ಸಿಬಿ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ವಾದವನ್ನು ಮುಂದಿಟ್ಟಿದೆ.

ಈ ಮೊಕದ್ದಮೆಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್, ಜೈಲರ್ ಚಿತ್ರದಿಂದ ಈ ದೃಶ್ಯವನ್ನು ಅಥವಾ ಆರ್​ಸಿಬಿ ಜೆರ್ಸಿ ಧರಿಸಿರುವುದನ್ನು ತೆಗೆದು ಹಾಕುವಂತೆ ಸೂಚಿಸಿದೆ. ಅಷ್ಟೇ ಅಲ್ಲದೆ ಚಿತ್ರವು ಟಿವಿ, ಸ್ಯಾಟ್​ಲೈಟ್ ಅಥವಾ ಒಟಿಟಿಯಲ್ಲಿ ಬಿಡುಗಡೆ ಮೊದಲು ಈ ದೃಶ್ಯವನ್ನು ಎಡಿಟ್ ಮಾಡಬೇಕೆಂದು ತಿಳಿಸಲಾಗಿದೆ.

ದೆಹಲಿ ಹೈಕೋರ್ಟ್​ನ ಈ ಎಲ್ಲಾ ಆದೇಶಗಳಿಗೂ ಜೈಲರ್​ ನಿರ್ಮಾಪಕರು ಒಪ್ಪಿಗೆ ಸೂಚಿಸಿದ್ದಾರೆ. ಹಾಗೆಯೇ ಸದ್ಯ ಥಿಯೇಟರ್​ನಲ್ಲಿರುವ ಜೈಲರ್ ಚಿತ್ರದಿಂದ, ಸೆಪ್ಟೆಂಬರ್ 1 ರೊಳಗೆ ಆರ್​ಸಿಬಿ ಜೆರ್ಸಿಯ ದೃಶ್ಯವನ್ನು ತೆಗೆದು ಹಾಕುವಂತೆ ಕೋರ್ಟ್ ಸೂಚಿಸಿದೆ. ಹಾಗೆಯೇ ನ್ಯಾಯಾಲಯದ ಸಂಪೂರ್ಣ ಶುಲ್ಕವನ್ನು ಫಿರ್ಯಾದಿದಾರರಿಗೆ ಮರುಪಾವತಿಸಲು ದೆಹಲಿ ಹೈಕೋರ್ಟ್ ಆದೇಶಿಸಿದೆ.

andolanait

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

9 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

9 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

10 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

10 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

10 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

10 hours ago