ಚಿತ್ರ ಮಂಜರಿ

ಆರ್‌ಸಿಬಿ ಜೆರ್ಸಿಯನ್ನು ತೆಗೆದು ಹಾಕುವಂತೆ ಜೈಲರ್ ನಿರ್ಮಾಪಕರಿಗೆ ಕೋರ್ಟ್ ಸೂಚನೆ

ಸೆಪ್ಟೆಂಬರ್ 1 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಜೆರ್ಸಿಯನ್ನು ಹೊಂದಿರುವ ದೃಶ್ಯವನ್ನು ಯಾವುದೇ ಥಿಯೇಟರ್‌ಗಳಲ್ಲಿ ಪ್ರದರ್ಶಿಸದಂತೆ “ಜೈಲರ್” ಚಲನಚಿತ್ರ ನಿರ್ಮಾಪಕರಿಗೆ ದೆಹಲಿ ಹೈಕೋರ್ಟ್ ನಿರ್ದೇಶಿಸಿದೆ.

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಚಿತ್ರದ ಪಾತ್ರವೊಂದಕ್ಕೆ ಆರ್​ಸಿಬಿ ಜೆರ್ಸಿಯನ್ನು ಬಳಸಲಾಗಿದೆ. ಇದೀಗ ಈ ಆರ್​ಸಿಬಿ ಜೆರ್ಸಿಯ ಧರಿಸಿರುವ ಪಾತ್ರಧಾರಿಯ ದೃಶ್ಯಕ್ಕೆ ಕತ್ತರಿ ಹಾಕುವಂತೆ ಕೋರ್ಟ್​ ಸೂಚಿಸಿದೆ.

ಈ ಚಿತ್ರದ ಕಾಂಟ್ರಾಕ್ಟ್​ ಕಿಲ್ಲರ್ ಪಾತ್ರದಲ್ಲಿ ಆರ್​ಸಿಬಿ ಜೆರ್ಸಿ ಧರಿಸಿರುವ ವ್ಯಕ್ತಿ ಕಾಣಿಸಿಕೊಂಡಿದ್ದರು. ಅಲ್ಲದೆ ಈ ಪಾತ್ರಧಾರಿ ಮಹಿಳೆಯ ಬಗ್ಗೆ ಅವಹೇಳನಕಾರಿ ಮತ್ತು ಸ್ತ್ರೀದ್ವೇಷದ ಡೈಲಾಗ್​ಗಳನ್ನು ಹೇಳುವುದನ್ನು ಜೈಲರ್​ ಚಿತ್ರದಲ್ಲಿ ಕಾಣಬಹುದು. ಇದರ ವಿರುದ್ಧ ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಕೋರ್ಟ್ ಮೆಟ್ಟಿಲೇರಿದ್ದರು.

ನಮ್ಮ ಅನುಮತಿಯಿಲ್ಲದೆ ತಮ್ಮ ಜೆರ್ಸಿಯನ್ನು ಬಳಸಿ ನಕಾರಾತ್ಮಕವಾಗಿ ಬಿಂಬಿಸಲಾಗಿದೆ. ಇದರಿಂದ ಆರ್​ಸಿಬಿ ಬ್ರ್ಯಾಂಡ್ ಇಮೇಜ್​ಗೆ ಮತ್ತು ಇಕ್ವಿಟಿಗೆ ಹಾನಿಯುಂಟಾಗುತ್ತಿದೆ ಎಂದು ಆರ್​ಸಿಬಿ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ವಾದವನ್ನು ಮುಂದಿಟ್ಟಿದೆ.

ಈ ಮೊಕದ್ದಮೆಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್, ಜೈಲರ್ ಚಿತ್ರದಿಂದ ಈ ದೃಶ್ಯವನ್ನು ಅಥವಾ ಆರ್​ಸಿಬಿ ಜೆರ್ಸಿ ಧರಿಸಿರುವುದನ್ನು ತೆಗೆದು ಹಾಕುವಂತೆ ಸೂಚಿಸಿದೆ. ಅಷ್ಟೇ ಅಲ್ಲದೆ ಚಿತ್ರವು ಟಿವಿ, ಸ್ಯಾಟ್​ಲೈಟ್ ಅಥವಾ ಒಟಿಟಿಯಲ್ಲಿ ಬಿಡುಗಡೆ ಮೊದಲು ಈ ದೃಶ್ಯವನ್ನು ಎಡಿಟ್ ಮಾಡಬೇಕೆಂದು ತಿಳಿಸಲಾಗಿದೆ.

ದೆಹಲಿ ಹೈಕೋರ್ಟ್​ನ ಈ ಎಲ್ಲಾ ಆದೇಶಗಳಿಗೂ ಜೈಲರ್​ ನಿರ್ಮಾಪಕರು ಒಪ್ಪಿಗೆ ಸೂಚಿಸಿದ್ದಾರೆ. ಹಾಗೆಯೇ ಸದ್ಯ ಥಿಯೇಟರ್​ನಲ್ಲಿರುವ ಜೈಲರ್ ಚಿತ್ರದಿಂದ, ಸೆಪ್ಟೆಂಬರ್ 1 ರೊಳಗೆ ಆರ್​ಸಿಬಿ ಜೆರ್ಸಿಯ ದೃಶ್ಯವನ್ನು ತೆಗೆದು ಹಾಕುವಂತೆ ಕೋರ್ಟ್ ಸೂಚಿಸಿದೆ. ಹಾಗೆಯೇ ನ್ಯಾಯಾಲಯದ ಸಂಪೂರ್ಣ ಶುಲ್ಕವನ್ನು ಫಿರ್ಯಾದಿದಾರರಿಗೆ ಮರುಪಾವತಿಸಲು ದೆಹಲಿ ಹೈಕೋರ್ಟ್ ಆದೇಶಿಸಿದೆ.

andolanait

Recent Posts

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

5 mins ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

24 mins ago

ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ ಅಧಿಕಾರಿಗಳ ಗೈರು: ಮುಖಂಡರ ಆಕ್ರೋಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೊಜಿಸಿದ್ದ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ…

41 mins ago

ಗುಂಡ್ಲುಪೇಟೆ-ಕೇರಳ ಹೆದ್ದಾರಿಯಲ್ಲಿ ಹೆಚ್ಚಿದ ಕಳ್ಳರ ಚೈಚಳಕ: ಅಲರ್ಟ್‌ ಆದ ಪೊಲೀಸರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಕೋರರ ಹಾವಳಿ‌‌ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಇದಕ್ಕೆ…

47 mins ago

ಇ-ಖಾತಾ ವ್ಯವಸ್ಥೆ ಸಂಪೂರ್ಣ ಗೊಂದಲಮಯ: ಮಾಜಿ ಮೇಯರ್‌ ಶಿವಕುಮಾರ್‌ ಆರೋಪ

ಮೈಸೂರು: ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಮಾಡಿಸಲು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಾಜಿ ಮೇಯರ್‌ ಶಿವಕುಮಾರ್‌ ಕಿಡಿಕಾರಿದರು. ಈ…

58 mins ago

ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ…

1 hour ago