ಸೆಪ್ಟೆಂಬರ್ 1 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಜೆರ್ಸಿಯನ್ನು ಹೊಂದಿರುವ ದೃಶ್ಯವನ್ನು ಯಾವುದೇ ಥಿಯೇಟರ್ಗಳಲ್ಲಿ ಪ್ರದರ್ಶಿಸದಂತೆ “ಜೈಲರ್” ಚಲನಚಿತ್ರ ನಿರ್ಮಾಪಕರಿಗೆ ದೆಹಲಿ ಹೈಕೋರ್ಟ್ ನಿರ್ದೇಶಿಸಿದೆ.
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಚಿತ್ರದ ಪಾತ್ರವೊಂದಕ್ಕೆ ಆರ್ಸಿಬಿ ಜೆರ್ಸಿಯನ್ನು ಬಳಸಲಾಗಿದೆ. ಇದೀಗ ಈ ಆರ್ಸಿಬಿ ಜೆರ್ಸಿಯ ಧರಿಸಿರುವ ಪಾತ್ರಧಾರಿಯ ದೃಶ್ಯಕ್ಕೆ ಕತ್ತರಿ ಹಾಕುವಂತೆ ಕೋರ್ಟ್ ಸೂಚಿಸಿದೆ.
ಈ ಚಿತ್ರದ ಕಾಂಟ್ರಾಕ್ಟ್ ಕಿಲ್ಲರ್ ಪಾತ್ರದಲ್ಲಿ ಆರ್ಸಿಬಿ ಜೆರ್ಸಿ ಧರಿಸಿರುವ ವ್ಯಕ್ತಿ ಕಾಣಿಸಿಕೊಂಡಿದ್ದರು. ಅಲ್ಲದೆ ಈ ಪಾತ್ರಧಾರಿ ಮಹಿಳೆಯ ಬಗ್ಗೆ ಅವಹೇಳನಕಾರಿ ಮತ್ತು ಸ್ತ್ರೀದ್ವೇಷದ ಡೈಲಾಗ್ಗಳನ್ನು ಹೇಳುವುದನ್ನು ಜೈಲರ್ ಚಿತ್ರದಲ್ಲಿ ಕಾಣಬಹುದು. ಇದರ ವಿರುದ್ಧ ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಕೋರ್ಟ್ ಮೆಟ್ಟಿಲೇರಿದ್ದರು.
ನಮ್ಮ ಅನುಮತಿಯಿಲ್ಲದೆ ತಮ್ಮ ಜೆರ್ಸಿಯನ್ನು ಬಳಸಿ ನಕಾರಾತ್ಮಕವಾಗಿ ಬಿಂಬಿಸಲಾಗಿದೆ. ಇದರಿಂದ ಆರ್ಸಿಬಿ ಬ್ರ್ಯಾಂಡ್ ಇಮೇಜ್ಗೆ ಮತ್ತು ಇಕ್ವಿಟಿಗೆ ಹಾನಿಯುಂಟಾಗುತ್ತಿದೆ ಎಂದು ಆರ್ಸಿಬಿ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ವಾದವನ್ನು ಮುಂದಿಟ್ಟಿದೆ.
ಈ ಮೊಕದ್ದಮೆಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್, ಜೈಲರ್ ಚಿತ್ರದಿಂದ ಈ ದೃಶ್ಯವನ್ನು ಅಥವಾ ಆರ್ಸಿಬಿ ಜೆರ್ಸಿ ಧರಿಸಿರುವುದನ್ನು ತೆಗೆದು ಹಾಕುವಂತೆ ಸೂಚಿಸಿದೆ. ಅಷ್ಟೇ ಅಲ್ಲದೆ ಚಿತ್ರವು ಟಿವಿ, ಸ್ಯಾಟ್ಲೈಟ್ ಅಥವಾ ಒಟಿಟಿಯಲ್ಲಿ ಬಿಡುಗಡೆ ಮೊದಲು ಈ ದೃಶ್ಯವನ್ನು ಎಡಿಟ್ ಮಾಡಬೇಕೆಂದು ತಿಳಿಸಲಾಗಿದೆ.
ದೆಹಲಿ ಹೈಕೋರ್ಟ್ನ ಈ ಎಲ್ಲಾ ಆದೇಶಗಳಿಗೂ ಜೈಲರ್ ನಿರ್ಮಾಪಕರು ಒಪ್ಪಿಗೆ ಸೂಚಿಸಿದ್ದಾರೆ. ಹಾಗೆಯೇ ಸದ್ಯ ಥಿಯೇಟರ್ನಲ್ಲಿರುವ ಜೈಲರ್ ಚಿತ್ರದಿಂದ, ಸೆಪ್ಟೆಂಬರ್ 1 ರೊಳಗೆ ಆರ್ಸಿಬಿ ಜೆರ್ಸಿಯ ದೃಶ್ಯವನ್ನು ತೆಗೆದು ಹಾಕುವಂತೆ ಕೋರ್ಟ್ ಸೂಚಿಸಿದೆ. ಹಾಗೆಯೇ ನ್ಯಾಯಾಲಯದ ಸಂಪೂರ್ಣ ಶುಲ್ಕವನ್ನು ಫಿರ್ಯಾದಿದಾರರಿಗೆ ಮರುಪಾವತಿಸಲು ದೆಹಲಿ ಹೈಕೋರ್ಟ್ ಆದೇಶಿಸಿದೆ.
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…