ಚಿತ್ರ ಮಂಜರಿ

ಆರ್‌ಸಿಬಿ ಜೆರ್ಸಿಯನ್ನು ತೆಗೆದು ಹಾಕುವಂತೆ ಜೈಲರ್ ನಿರ್ಮಾಪಕರಿಗೆ ಕೋರ್ಟ್ ಸೂಚನೆ

ಸೆಪ್ಟೆಂಬರ್ 1 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಜೆರ್ಸಿಯನ್ನು ಹೊಂದಿರುವ ದೃಶ್ಯವನ್ನು ಯಾವುದೇ ಥಿಯೇಟರ್‌ಗಳಲ್ಲಿ ಪ್ರದರ್ಶಿಸದಂತೆ “ಜೈಲರ್” ಚಲನಚಿತ್ರ ನಿರ್ಮಾಪಕರಿಗೆ ದೆಹಲಿ ಹೈಕೋರ್ಟ್ ನಿರ್ದೇಶಿಸಿದೆ.

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಚಿತ್ರದ ಪಾತ್ರವೊಂದಕ್ಕೆ ಆರ್​ಸಿಬಿ ಜೆರ್ಸಿಯನ್ನು ಬಳಸಲಾಗಿದೆ. ಇದೀಗ ಈ ಆರ್​ಸಿಬಿ ಜೆರ್ಸಿಯ ಧರಿಸಿರುವ ಪಾತ್ರಧಾರಿಯ ದೃಶ್ಯಕ್ಕೆ ಕತ್ತರಿ ಹಾಕುವಂತೆ ಕೋರ್ಟ್​ ಸೂಚಿಸಿದೆ.

ಈ ಚಿತ್ರದ ಕಾಂಟ್ರಾಕ್ಟ್​ ಕಿಲ್ಲರ್ ಪಾತ್ರದಲ್ಲಿ ಆರ್​ಸಿಬಿ ಜೆರ್ಸಿ ಧರಿಸಿರುವ ವ್ಯಕ್ತಿ ಕಾಣಿಸಿಕೊಂಡಿದ್ದರು. ಅಲ್ಲದೆ ಈ ಪಾತ್ರಧಾರಿ ಮಹಿಳೆಯ ಬಗ್ಗೆ ಅವಹೇಳನಕಾರಿ ಮತ್ತು ಸ್ತ್ರೀದ್ವೇಷದ ಡೈಲಾಗ್​ಗಳನ್ನು ಹೇಳುವುದನ್ನು ಜೈಲರ್​ ಚಿತ್ರದಲ್ಲಿ ಕಾಣಬಹುದು. ಇದರ ವಿರುದ್ಧ ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಕೋರ್ಟ್ ಮೆಟ್ಟಿಲೇರಿದ್ದರು.

ನಮ್ಮ ಅನುಮತಿಯಿಲ್ಲದೆ ತಮ್ಮ ಜೆರ್ಸಿಯನ್ನು ಬಳಸಿ ನಕಾರಾತ್ಮಕವಾಗಿ ಬಿಂಬಿಸಲಾಗಿದೆ. ಇದರಿಂದ ಆರ್​ಸಿಬಿ ಬ್ರ್ಯಾಂಡ್ ಇಮೇಜ್​ಗೆ ಮತ್ತು ಇಕ್ವಿಟಿಗೆ ಹಾನಿಯುಂಟಾಗುತ್ತಿದೆ ಎಂದು ಆರ್​ಸಿಬಿ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ವಾದವನ್ನು ಮುಂದಿಟ್ಟಿದೆ.

ಈ ಮೊಕದ್ದಮೆಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್, ಜೈಲರ್ ಚಿತ್ರದಿಂದ ಈ ದೃಶ್ಯವನ್ನು ಅಥವಾ ಆರ್​ಸಿಬಿ ಜೆರ್ಸಿ ಧರಿಸಿರುವುದನ್ನು ತೆಗೆದು ಹಾಕುವಂತೆ ಸೂಚಿಸಿದೆ. ಅಷ್ಟೇ ಅಲ್ಲದೆ ಚಿತ್ರವು ಟಿವಿ, ಸ್ಯಾಟ್​ಲೈಟ್ ಅಥವಾ ಒಟಿಟಿಯಲ್ಲಿ ಬಿಡುಗಡೆ ಮೊದಲು ಈ ದೃಶ್ಯವನ್ನು ಎಡಿಟ್ ಮಾಡಬೇಕೆಂದು ತಿಳಿಸಲಾಗಿದೆ.

ದೆಹಲಿ ಹೈಕೋರ್ಟ್​ನ ಈ ಎಲ್ಲಾ ಆದೇಶಗಳಿಗೂ ಜೈಲರ್​ ನಿರ್ಮಾಪಕರು ಒಪ್ಪಿಗೆ ಸೂಚಿಸಿದ್ದಾರೆ. ಹಾಗೆಯೇ ಸದ್ಯ ಥಿಯೇಟರ್​ನಲ್ಲಿರುವ ಜೈಲರ್ ಚಿತ್ರದಿಂದ, ಸೆಪ್ಟೆಂಬರ್ 1 ರೊಳಗೆ ಆರ್​ಸಿಬಿ ಜೆರ್ಸಿಯ ದೃಶ್ಯವನ್ನು ತೆಗೆದು ಹಾಕುವಂತೆ ಕೋರ್ಟ್ ಸೂಚಿಸಿದೆ. ಹಾಗೆಯೇ ನ್ಯಾಯಾಲಯದ ಸಂಪೂರ್ಣ ಶುಲ್ಕವನ್ನು ಫಿರ್ಯಾದಿದಾರರಿಗೆ ಮರುಪಾವತಿಸಲು ದೆಹಲಿ ಹೈಕೋರ್ಟ್ ಆದೇಶಿಸಿದೆ.

andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

2 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

14 hours ago