ಚಿತ್ರ ಮಂಜರಿ

ಬಿಡುಗಡೆಗೆ ಕೋರ್ಟ್​ ಅನುಮತಿ : ರಮ್ಯಾ ಹಾಕಿದ ಕೇಸ್​ನಲ್ಲಿ ನಿಟ್ಟುಸಿರು ಬಿಟ್ಟ ಹಾಸ್ಟೆಲ್​ ಹುಡುಗರು

ಭಾರಿ ನಿರೀಕ್ಷೆ ಮೂಡಿಸಿರುವ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾ ತಂಡದ ಬಿಡುಗಡೆಗೆ ಎದುರಾಗಿದ್ದ ವಿಘ್ನ ನಿವಾರಣೆ ಆಗಿದೆ. ಈ ಸಿನಿಮಾದಲ್ಲಿ ತಮ್ಮ ವಿಡಿಯೋಗಳನ್ನು ಅನುಮತಿ ಇಲ್ಲದೇ ಬಳಸಿಕೊಳ್ಳಲಾಗಿದೆ ಎಂದು ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಆರೋಪಿಸಿದ್ದರು. ಹಾಗಾಗಿ ಚಿತ್ರದಲ್ಲಿನ ತಮ್ಮ ದೃಶಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದರು. ಅಲ್ಲದೇ ಚಿತ್ರತಂಡಕ್ಕೆ ಲೀಗಲ್​ ನೋಟೀಸ್​ ಕಳಿಸಿದ್ದರು. ಇದರಿಂದ ಜುಲೈ 21ರಂದು ಸಿನಿಮಾ ಬಿಡುಗಡೆ ಆಗತ್ತೋ ಇಲ್ಲವೋ ಎಂಬ ಅನುಮಾನ ಮೂಡಿತ್ತು. ಆದರೆ ಕೋರ್ಟ್​ನಲ್ಲಿ ರಮ್ಯಾ ಅವರ ಅರ್ಜಿ ವಜಾ ಆಗಿದೆ. ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾದ ಬಿಡುಗಡೆಗೆ ನ್ಯಾಯಾಲಯ ಅನುಮತಿ ನೀಡಿದೆ.

ಕೆಲವೇ ದಿನಗಳ ಹಿಂದೆ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಚಿತ್ರದ ಟ್ರೇಲರ್​ ಬಿಡುಗಡೆ ಆಗಿತ್ತು. ಅದರಲ್ಲಿ ರಮ್ಯಾ, ದಿಗಂತ್​, ರಿಷಬ್​ ಶೆಟ್ಟಿ, ಪವನ್​ ಕುಮಾರ್ ಕಾಣಿಸಿಕೊಂಡಿದ್ದಾರೆ. ಟ್ರೇಲರ್​ನಲ್ಲಿ ರಮ್ಯಾ ಅವರನ್ನು ನೋಡಿ ಫ್ಯಾನ್ಸ್​ ಖುಷಿಪಟ್ಟರು. ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಲು ಇದು ಕೂಡ ಕಾರಣ ಆಯಿತು. ಆದರೆ ಇದರಲ್ಲಿ ಬಳಕೆ ಆಗಿರುವ ತಮ್ಮ ದೃಶ್ಯಗಳಿಗೆ ಚಿತ್ರತಂಡದವರು ಅನುಮತಿ ಪಡೆದಿಲ್ಲ ಎಂದು ರಮ್ಯಾ ತಕಾರು ತೆಗೆದಿದ್ದರು. ಅದಕ್ಕಾಗಿ ಅವರು ಕೋರ್ಟ್​ ಮೊರೆ ಹೋಗಿದ್ದರು.

ನಿತಿನ್​ ಕೃಷ್ಣಮೂರ್ತಿ ಅವರ ನಿರ್ದೇಶನದಲ್ಲಿ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾ ಮೂಡಿಬಂದಿದೆ. ಅಜನೀಶ್​ ಬಿ. ಲೋಕನಾಥ್​ ಅವರು ಸಂಗೀತ ನೀಡಿರುವ ಹಾಡುಗಳು ಗಮನ ಸೆಳೆದಿವೆ. ಅರವಿಂದ್​ ಎಸ್​. ಕಶ್ಯಪ್​ ಅವರು ಈ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್​ ಶೆಟ್ಟಿ ಒಡೆತನದ ಪರಂವಾ ಪಿಕ್ಚರ್ಸ್​ ಮೂಲಕ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾ ಬಿಡುಗಡೆ ಆಗುತ್ತಿದೆ.

ಕೋರ್ಟ್​​ನಲ್ಲಿ ತಮ್ಮ ಪರವಾಗಿ ತೀರ್ಪು ಬಂದಿರುವುದಕ್ಕೆ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾತಂಡದವರು ನಿಟ್ಟುಸಿರು ಬಿಟ್ಟಿದ್ದಾರೆ. ನರ್ತಕಿ ಚಿತ್ರಮಂದಿರದ ಎದುರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಸಿನಿಮಾದಲ್ಲಿ ಅನೇಕ ಹೊಸ ಕಲಾವಿದರು ನಟಿಸಿದ್ದಾರೆ. ವಿಶೇಷವಾದ ಪ್ರಮೋಷನ್​ ವಿಡಿಯೋಗಳ ಮೂಲಕ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಈ ಮೊದಲು ಪುನೀತ್​ ರಾಜ್​ಕುಮಾರ್​ ಕೂಡ ಈ ಚಿತ್ರದ ಪ್ರಮೋಷನಲ್​ ವಿಡಿಯೋದಲ್ಲಿ ಕಾಣಿಸಿಕೊಂಡು ಚಿತ್ರತಂಡಕ್ಕೆ ಬೆಂಬಲ ಸೂಚಿಸಿದ್ದರು.

 

lokesh

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

3 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

3 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

3 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

3 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

3 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

3 hours ago