ಭಾರಿ ನಿರೀಕ್ಷೆ ಮೂಡಿಸಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ತಂಡದ ಬಿಡುಗಡೆಗೆ ಎದುರಾಗಿದ್ದ ವಿಘ್ನ ನಿವಾರಣೆ ಆಗಿದೆ. ಈ ಸಿನಿಮಾದಲ್ಲಿ ತಮ್ಮ ವಿಡಿಯೋಗಳನ್ನು ಅನುಮತಿ ಇಲ್ಲದೇ ಬಳಸಿಕೊಳ್ಳಲಾಗಿದೆ ಎಂದು ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಆರೋಪಿಸಿದ್ದರು. ಹಾಗಾಗಿ ಚಿತ್ರದಲ್ಲಿನ ತಮ್ಮ ದೃಶಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದರು. ಅಲ್ಲದೇ ಚಿತ್ರತಂಡಕ್ಕೆ ಲೀಗಲ್ ನೋಟೀಸ್ ಕಳಿಸಿದ್ದರು. ಇದರಿಂದ ಜುಲೈ 21ರಂದು ಸಿನಿಮಾ ಬಿಡುಗಡೆ ಆಗತ್ತೋ ಇಲ್ಲವೋ ಎಂಬ ಅನುಮಾನ ಮೂಡಿತ್ತು. ಆದರೆ ಕೋರ್ಟ್ನಲ್ಲಿ ರಮ್ಯಾ ಅವರ ಅರ್ಜಿ ವಜಾ ಆಗಿದೆ. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದ ಬಿಡುಗಡೆಗೆ ನ್ಯಾಯಾಲಯ ಅನುಮತಿ ನೀಡಿದೆ.
ಕೆಲವೇ ದಿನಗಳ ಹಿಂದೆ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದ ಟ್ರೇಲರ್ ಬಿಡುಗಡೆ ಆಗಿತ್ತು. ಅದರಲ್ಲಿ ರಮ್ಯಾ, ದಿಗಂತ್, ರಿಷಬ್ ಶೆಟ್ಟಿ, ಪವನ್ ಕುಮಾರ್ ಕಾಣಿಸಿಕೊಂಡಿದ್ದಾರೆ. ಟ್ರೇಲರ್ನಲ್ಲಿ ರಮ್ಯಾ ಅವರನ್ನು ನೋಡಿ ಫ್ಯಾನ್ಸ್ ಖುಷಿಪಟ್ಟರು. ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಲು ಇದು ಕೂಡ ಕಾರಣ ಆಯಿತು. ಆದರೆ ಇದರಲ್ಲಿ ಬಳಕೆ ಆಗಿರುವ ತಮ್ಮ ದೃಶ್ಯಗಳಿಗೆ ಚಿತ್ರತಂಡದವರು ಅನುಮತಿ ಪಡೆದಿಲ್ಲ ಎಂದು ರಮ್ಯಾ ತಕಾರು ತೆಗೆದಿದ್ದರು. ಅದಕ್ಕಾಗಿ ಅವರು ಕೋರ್ಟ್ ಮೊರೆ ಹೋಗಿದ್ದರು.
ನಿತಿನ್ ಕೃಷ್ಣಮೂರ್ತಿ ಅವರ ನಿರ್ದೇಶನದಲ್ಲಿ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಮೂಡಿಬಂದಿದೆ. ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ನೀಡಿರುವ ಹಾಡುಗಳು ಗಮನ ಸೆಳೆದಿವೆ. ಅರವಿಂದ್ ಎಸ್. ಕಶ್ಯಪ್ ಅವರು ಈ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಒಡೆತನದ ಪರಂವಾ ಪಿಕ್ಚರ್ಸ್ ಮೂಲಕ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಬಿಡುಗಡೆ ಆಗುತ್ತಿದೆ.
ಕೋರ್ಟ್ನಲ್ಲಿ ತಮ್ಮ ಪರವಾಗಿ ತೀರ್ಪು ಬಂದಿರುವುದಕ್ಕೆ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾತಂಡದವರು ನಿಟ್ಟುಸಿರು ಬಿಟ್ಟಿದ್ದಾರೆ. ನರ್ತಕಿ ಚಿತ್ರಮಂದಿರದ ಎದುರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಸಿನಿಮಾದಲ್ಲಿ ಅನೇಕ ಹೊಸ ಕಲಾವಿದರು ನಟಿಸಿದ್ದಾರೆ. ವಿಶೇಷವಾದ ಪ್ರಮೋಷನ್ ವಿಡಿಯೋಗಳ ಮೂಲಕ ಈ ಸಿನಿಮಾ ಹೈಪ್ ಸೃಷ್ಟಿ ಮಾಡಿದೆ. ಈ ಮೊದಲು ಪುನೀತ್ ರಾಜ್ಕುಮಾರ್ ಕೂಡ ಈ ಚಿತ್ರದ ಪ್ರಮೋಷನಲ್ ವಿಡಿಯೋದಲ್ಲಿ ಕಾಣಿಸಿಕೊಂಡು ಚಿತ್ರತಂಡಕ್ಕೆ ಬೆಂಬಲ ಸೂಚಿಸಿದ್ದರು.
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…