ಚಿತ್ರ ಮಂಜರಿ

ಬಿಡುಗಡೆಗೆ ಕೋರ್ಟ್​ ಅನುಮತಿ : ರಮ್ಯಾ ಹಾಕಿದ ಕೇಸ್​ನಲ್ಲಿ ನಿಟ್ಟುಸಿರು ಬಿಟ್ಟ ಹಾಸ್ಟೆಲ್​ ಹುಡುಗರು

ಭಾರಿ ನಿರೀಕ್ಷೆ ಮೂಡಿಸಿರುವ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾ ತಂಡದ ಬಿಡುಗಡೆಗೆ ಎದುರಾಗಿದ್ದ ವಿಘ್ನ ನಿವಾರಣೆ ಆಗಿದೆ. ಈ ಸಿನಿಮಾದಲ್ಲಿ ತಮ್ಮ ವಿಡಿಯೋಗಳನ್ನು ಅನುಮತಿ ಇಲ್ಲದೇ ಬಳಸಿಕೊಳ್ಳಲಾಗಿದೆ ಎಂದು ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಆರೋಪಿಸಿದ್ದರು. ಹಾಗಾಗಿ ಚಿತ್ರದಲ್ಲಿನ ತಮ್ಮ ದೃಶಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದರು. ಅಲ್ಲದೇ ಚಿತ್ರತಂಡಕ್ಕೆ ಲೀಗಲ್​ ನೋಟೀಸ್​ ಕಳಿಸಿದ್ದರು. ಇದರಿಂದ ಜುಲೈ 21ರಂದು ಸಿನಿಮಾ ಬಿಡುಗಡೆ ಆಗತ್ತೋ ಇಲ್ಲವೋ ಎಂಬ ಅನುಮಾನ ಮೂಡಿತ್ತು. ಆದರೆ ಕೋರ್ಟ್​ನಲ್ಲಿ ರಮ್ಯಾ ಅವರ ಅರ್ಜಿ ವಜಾ ಆಗಿದೆ. ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾದ ಬಿಡುಗಡೆಗೆ ನ್ಯಾಯಾಲಯ ಅನುಮತಿ ನೀಡಿದೆ.

ಕೆಲವೇ ದಿನಗಳ ಹಿಂದೆ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಚಿತ್ರದ ಟ್ರೇಲರ್​ ಬಿಡುಗಡೆ ಆಗಿತ್ತು. ಅದರಲ್ಲಿ ರಮ್ಯಾ, ದಿಗಂತ್​, ರಿಷಬ್​ ಶೆಟ್ಟಿ, ಪವನ್​ ಕುಮಾರ್ ಕಾಣಿಸಿಕೊಂಡಿದ್ದಾರೆ. ಟ್ರೇಲರ್​ನಲ್ಲಿ ರಮ್ಯಾ ಅವರನ್ನು ನೋಡಿ ಫ್ಯಾನ್ಸ್​ ಖುಷಿಪಟ್ಟರು. ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಲು ಇದು ಕೂಡ ಕಾರಣ ಆಯಿತು. ಆದರೆ ಇದರಲ್ಲಿ ಬಳಕೆ ಆಗಿರುವ ತಮ್ಮ ದೃಶ್ಯಗಳಿಗೆ ಚಿತ್ರತಂಡದವರು ಅನುಮತಿ ಪಡೆದಿಲ್ಲ ಎಂದು ರಮ್ಯಾ ತಕಾರು ತೆಗೆದಿದ್ದರು. ಅದಕ್ಕಾಗಿ ಅವರು ಕೋರ್ಟ್​ ಮೊರೆ ಹೋಗಿದ್ದರು.

ನಿತಿನ್​ ಕೃಷ್ಣಮೂರ್ತಿ ಅವರ ನಿರ್ದೇಶನದಲ್ಲಿ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾ ಮೂಡಿಬಂದಿದೆ. ಅಜನೀಶ್​ ಬಿ. ಲೋಕನಾಥ್​ ಅವರು ಸಂಗೀತ ನೀಡಿರುವ ಹಾಡುಗಳು ಗಮನ ಸೆಳೆದಿವೆ. ಅರವಿಂದ್​ ಎಸ್​. ಕಶ್ಯಪ್​ ಅವರು ಈ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್​ ಶೆಟ್ಟಿ ಒಡೆತನದ ಪರಂವಾ ಪಿಕ್ಚರ್ಸ್​ ಮೂಲಕ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾ ಬಿಡುಗಡೆ ಆಗುತ್ತಿದೆ.

ಕೋರ್ಟ್​​ನಲ್ಲಿ ತಮ್ಮ ಪರವಾಗಿ ತೀರ್ಪು ಬಂದಿರುವುದಕ್ಕೆ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾತಂಡದವರು ನಿಟ್ಟುಸಿರು ಬಿಟ್ಟಿದ್ದಾರೆ. ನರ್ತಕಿ ಚಿತ್ರಮಂದಿರದ ಎದುರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಸಿನಿಮಾದಲ್ಲಿ ಅನೇಕ ಹೊಸ ಕಲಾವಿದರು ನಟಿಸಿದ್ದಾರೆ. ವಿಶೇಷವಾದ ಪ್ರಮೋಷನ್​ ವಿಡಿಯೋಗಳ ಮೂಲಕ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಈ ಮೊದಲು ಪುನೀತ್​ ರಾಜ್​ಕುಮಾರ್​ ಕೂಡ ಈ ಚಿತ್ರದ ಪ್ರಮೋಷನಲ್​ ವಿಡಿಯೋದಲ್ಲಿ ಕಾಣಿಸಿಕೊಂಡು ಚಿತ್ರತಂಡಕ್ಕೆ ಬೆಂಬಲ ಸೂಚಿಸಿದ್ದರು.

 

lokesh

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

17 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

17 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

17 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

17 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

17 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

17 hours ago