ಚಿತ್ರ ಮಂಜರಿ

ಬಿಡುಗಡೆಗೆ ಕೋರ್ಟ್​ ಅನುಮತಿ : ರಮ್ಯಾ ಹಾಕಿದ ಕೇಸ್​ನಲ್ಲಿ ನಿಟ್ಟುಸಿರು ಬಿಟ್ಟ ಹಾಸ್ಟೆಲ್​ ಹುಡುಗರು

ಭಾರಿ ನಿರೀಕ್ಷೆ ಮೂಡಿಸಿರುವ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾ ತಂಡದ ಬಿಡುಗಡೆಗೆ ಎದುರಾಗಿದ್ದ ವಿಘ್ನ ನಿವಾರಣೆ ಆಗಿದೆ. ಈ ಸಿನಿಮಾದಲ್ಲಿ ತಮ್ಮ ವಿಡಿಯೋಗಳನ್ನು ಅನುಮತಿ ಇಲ್ಲದೇ ಬಳಸಿಕೊಳ್ಳಲಾಗಿದೆ ಎಂದು ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಆರೋಪಿಸಿದ್ದರು. ಹಾಗಾಗಿ ಚಿತ್ರದಲ್ಲಿನ ತಮ್ಮ ದೃಶಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದರು. ಅಲ್ಲದೇ ಚಿತ್ರತಂಡಕ್ಕೆ ಲೀಗಲ್​ ನೋಟೀಸ್​ ಕಳಿಸಿದ್ದರು. ಇದರಿಂದ ಜುಲೈ 21ರಂದು ಸಿನಿಮಾ ಬಿಡುಗಡೆ ಆಗತ್ತೋ ಇಲ್ಲವೋ ಎಂಬ ಅನುಮಾನ ಮೂಡಿತ್ತು. ಆದರೆ ಕೋರ್ಟ್​ನಲ್ಲಿ ರಮ್ಯಾ ಅವರ ಅರ್ಜಿ ವಜಾ ಆಗಿದೆ. ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾದ ಬಿಡುಗಡೆಗೆ ನ್ಯಾಯಾಲಯ ಅನುಮತಿ ನೀಡಿದೆ.

ಕೆಲವೇ ದಿನಗಳ ಹಿಂದೆ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಚಿತ್ರದ ಟ್ರೇಲರ್​ ಬಿಡುಗಡೆ ಆಗಿತ್ತು. ಅದರಲ್ಲಿ ರಮ್ಯಾ, ದಿಗಂತ್​, ರಿಷಬ್​ ಶೆಟ್ಟಿ, ಪವನ್​ ಕುಮಾರ್ ಕಾಣಿಸಿಕೊಂಡಿದ್ದಾರೆ. ಟ್ರೇಲರ್​ನಲ್ಲಿ ರಮ್ಯಾ ಅವರನ್ನು ನೋಡಿ ಫ್ಯಾನ್ಸ್​ ಖುಷಿಪಟ್ಟರು. ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಲು ಇದು ಕೂಡ ಕಾರಣ ಆಯಿತು. ಆದರೆ ಇದರಲ್ಲಿ ಬಳಕೆ ಆಗಿರುವ ತಮ್ಮ ದೃಶ್ಯಗಳಿಗೆ ಚಿತ್ರತಂಡದವರು ಅನುಮತಿ ಪಡೆದಿಲ್ಲ ಎಂದು ರಮ್ಯಾ ತಕಾರು ತೆಗೆದಿದ್ದರು. ಅದಕ್ಕಾಗಿ ಅವರು ಕೋರ್ಟ್​ ಮೊರೆ ಹೋಗಿದ್ದರು.

ನಿತಿನ್​ ಕೃಷ್ಣಮೂರ್ತಿ ಅವರ ನಿರ್ದೇಶನದಲ್ಲಿ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾ ಮೂಡಿಬಂದಿದೆ. ಅಜನೀಶ್​ ಬಿ. ಲೋಕನಾಥ್​ ಅವರು ಸಂಗೀತ ನೀಡಿರುವ ಹಾಡುಗಳು ಗಮನ ಸೆಳೆದಿವೆ. ಅರವಿಂದ್​ ಎಸ್​. ಕಶ್ಯಪ್​ ಅವರು ಈ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್​ ಶೆಟ್ಟಿ ಒಡೆತನದ ಪರಂವಾ ಪಿಕ್ಚರ್ಸ್​ ಮೂಲಕ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾ ಬಿಡುಗಡೆ ಆಗುತ್ತಿದೆ.

ಕೋರ್ಟ್​​ನಲ್ಲಿ ತಮ್ಮ ಪರವಾಗಿ ತೀರ್ಪು ಬಂದಿರುವುದಕ್ಕೆ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾತಂಡದವರು ನಿಟ್ಟುಸಿರು ಬಿಟ್ಟಿದ್ದಾರೆ. ನರ್ತಕಿ ಚಿತ್ರಮಂದಿರದ ಎದುರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಸಿನಿಮಾದಲ್ಲಿ ಅನೇಕ ಹೊಸ ಕಲಾವಿದರು ನಟಿಸಿದ್ದಾರೆ. ವಿಶೇಷವಾದ ಪ್ರಮೋಷನ್​ ವಿಡಿಯೋಗಳ ಮೂಲಕ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಈ ಮೊದಲು ಪುನೀತ್​ ರಾಜ್​ಕುಮಾರ್​ ಕೂಡ ಈ ಚಿತ್ರದ ಪ್ರಮೋಷನಲ್​ ವಿಡಿಯೋದಲ್ಲಿ ಕಾಣಿಸಿಕೊಂಡು ಚಿತ್ರತಂಡಕ್ಕೆ ಬೆಂಬಲ ಸೂಚಿಸಿದ್ದರು.

 

lokesh

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

7 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

9 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

9 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

13 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

18 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

18 hours ago