ಭಾರಿ ನಿರೀಕ್ಷೆ ಮೂಡಿಸಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ತಂಡದ ಬಿಡುಗಡೆಗೆ ಎದುರಾಗಿದ್ದ ವಿಘ್ನ ನಿವಾರಣೆ ಆಗಿದೆ. ಈ ಸಿನಿಮಾದಲ್ಲಿ ತಮ್ಮ ವಿಡಿಯೋಗಳನ್ನು ಅನುಮತಿ ಇಲ್ಲದೇ ಬಳಸಿಕೊಳ್ಳಲಾಗಿದೆ ಎಂದು ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಆರೋಪಿಸಿದ್ದರು. ಹಾಗಾಗಿ ಚಿತ್ರದಲ್ಲಿನ ತಮ್ಮ ದೃಶಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದರು. ಅಲ್ಲದೇ ಚಿತ್ರತಂಡಕ್ಕೆ ಲೀಗಲ್ ನೋಟೀಸ್ ಕಳಿಸಿದ್ದರು. ಇದರಿಂದ ಜುಲೈ 21ರಂದು ಸಿನಿಮಾ ಬಿಡುಗಡೆ ಆಗತ್ತೋ ಇಲ್ಲವೋ ಎಂಬ ಅನುಮಾನ ಮೂಡಿತ್ತು. ಆದರೆ ಕೋರ್ಟ್ನಲ್ಲಿ ರಮ್ಯಾ ಅವರ ಅರ್ಜಿ ವಜಾ ಆಗಿದೆ. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದ ಬಿಡುಗಡೆಗೆ ನ್ಯಾಯಾಲಯ ಅನುಮತಿ ನೀಡಿದೆ.
ಕೆಲವೇ ದಿನಗಳ ಹಿಂದೆ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದ ಟ್ರೇಲರ್ ಬಿಡುಗಡೆ ಆಗಿತ್ತು. ಅದರಲ್ಲಿ ರಮ್ಯಾ, ದಿಗಂತ್, ರಿಷಬ್ ಶೆಟ್ಟಿ, ಪವನ್ ಕುಮಾರ್ ಕಾಣಿಸಿಕೊಂಡಿದ್ದಾರೆ. ಟ್ರೇಲರ್ನಲ್ಲಿ ರಮ್ಯಾ ಅವರನ್ನು ನೋಡಿ ಫ್ಯಾನ್ಸ್ ಖುಷಿಪಟ್ಟರು. ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಲು ಇದು ಕೂಡ ಕಾರಣ ಆಯಿತು. ಆದರೆ ಇದರಲ್ಲಿ ಬಳಕೆ ಆಗಿರುವ ತಮ್ಮ ದೃಶ್ಯಗಳಿಗೆ ಚಿತ್ರತಂಡದವರು ಅನುಮತಿ ಪಡೆದಿಲ್ಲ ಎಂದು ರಮ್ಯಾ ತಕಾರು ತೆಗೆದಿದ್ದರು. ಅದಕ್ಕಾಗಿ ಅವರು ಕೋರ್ಟ್ ಮೊರೆ ಹೋಗಿದ್ದರು.
ನಿತಿನ್ ಕೃಷ್ಣಮೂರ್ತಿ ಅವರ ನಿರ್ದೇಶನದಲ್ಲಿ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಮೂಡಿಬಂದಿದೆ. ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ನೀಡಿರುವ ಹಾಡುಗಳು ಗಮನ ಸೆಳೆದಿವೆ. ಅರವಿಂದ್ ಎಸ್. ಕಶ್ಯಪ್ ಅವರು ಈ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಒಡೆತನದ ಪರಂವಾ ಪಿಕ್ಚರ್ಸ್ ಮೂಲಕ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಬಿಡುಗಡೆ ಆಗುತ್ತಿದೆ.
ಕೋರ್ಟ್ನಲ್ಲಿ ತಮ್ಮ ಪರವಾಗಿ ತೀರ್ಪು ಬಂದಿರುವುದಕ್ಕೆ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾತಂಡದವರು ನಿಟ್ಟುಸಿರು ಬಿಟ್ಟಿದ್ದಾರೆ. ನರ್ತಕಿ ಚಿತ್ರಮಂದಿರದ ಎದುರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಸಿನಿಮಾದಲ್ಲಿ ಅನೇಕ ಹೊಸ ಕಲಾವಿದರು ನಟಿಸಿದ್ದಾರೆ. ವಿಶೇಷವಾದ ಪ್ರಮೋಷನ್ ವಿಡಿಯೋಗಳ ಮೂಲಕ ಈ ಸಿನಿಮಾ ಹೈಪ್ ಸೃಷ್ಟಿ ಮಾಡಿದೆ. ಈ ಮೊದಲು ಪುನೀತ್ ರಾಜ್ಕುಮಾರ್ ಕೂಡ ಈ ಚಿತ್ರದ ಪ್ರಮೋಷನಲ್ ವಿಡಿಯೋದಲ್ಲಿ ಕಾಣಿಸಿಕೊಂಡು ಚಿತ್ರತಂಡಕ್ಕೆ ಬೆಂಬಲ ಸೂಚಿಸಿದ್ದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…