ಭಾರಿ ನಿರೀಕ್ಷೆ ಮೂಡಿಸಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ತಂಡದ ಬಿಡುಗಡೆಗೆ ಎದುರಾಗಿದ್ದ ವಿಘ್ನ ನಿವಾರಣೆ ಆಗಿದೆ. ಈ ಸಿನಿಮಾದಲ್ಲಿ ತಮ್ಮ ವಿಡಿಯೋಗಳನ್ನು ಅನುಮತಿ ಇಲ್ಲದೇ ಬಳಸಿಕೊಳ್ಳಲಾಗಿದೆ ಎಂದು ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಆರೋಪಿಸಿದ್ದರು. ಹಾಗಾಗಿ ಚಿತ್ರದಲ್ಲಿನ ತಮ್ಮ ದೃಶಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದರು. ಅಲ್ಲದೇ ಚಿತ್ರತಂಡಕ್ಕೆ ಲೀಗಲ್ ನೋಟೀಸ್ ಕಳಿಸಿದ್ದರು. ಇದರಿಂದ ಜುಲೈ 21ರಂದು ಸಿನಿಮಾ ಬಿಡುಗಡೆ ಆಗತ್ತೋ ಇಲ್ಲವೋ ಎಂಬ ಅನುಮಾನ ಮೂಡಿತ್ತು. ಆದರೆ ಕೋರ್ಟ್ನಲ್ಲಿ ರಮ್ಯಾ ಅವರ ಅರ್ಜಿ ವಜಾ ಆಗಿದೆ. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದ ಬಿಡುಗಡೆಗೆ ನ್ಯಾಯಾಲಯ ಅನುಮತಿ ನೀಡಿದೆ.
ಕೆಲವೇ ದಿನಗಳ ಹಿಂದೆ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದ ಟ್ರೇಲರ್ ಬಿಡುಗಡೆ ಆಗಿತ್ತು. ಅದರಲ್ಲಿ ರಮ್ಯಾ, ದಿಗಂತ್, ರಿಷಬ್ ಶೆಟ್ಟಿ, ಪವನ್ ಕುಮಾರ್ ಕಾಣಿಸಿಕೊಂಡಿದ್ದಾರೆ. ಟ್ರೇಲರ್ನಲ್ಲಿ ರಮ್ಯಾ ಅವರನ್ನು ನೋಡಿ ಫ್ಯಾನ್ಸ್ ಖುಷಿಪಟ್ಟರು. ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಲು ಇದು ಕೂಡ ಕಾರಣ ಆಯಿತು. ಆದರೆ ಇದರಲ್ಲಿ ಬಳಕೆ ಆಗಿರುವ ತಮ್ಮ ದೃಶ್ಯಗಳಿಗೆ ಚಿತ್ರತಂಡದವರು ಅನುಮತಿ ಪಡೆದಿಲ್ಲ ಎಂದು ರಮ್ಯಾ ತಕಾರು ತೆಗೆದಿದ್ದರು. ಅದಕ್ಕಾಗಿ ಅವರು ಕೋರ್ಟ್ ಮೊರೆ ಹೋಗಿದ್ದರು.
ನಿತಿನ್ ಕೃಷ್ಣಮೂರ್ತಿ ಅವರ ನಿರ್ದೇಶನದಲ್ಲಿ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಮೂಡಿಬಂದಿದೆ. ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ನೀಡಿರುವ ಹಾಡುಗಳು ಗಮನ ಸೆಳೆದಿವೆ. ಅರವಿಂದ್ ಎಸ್. ಕಶ್ಯಪ್ ಅವರು ಈ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಒಡೆತನದ ಪರಂವಾ ಪಿಕ್ಚರ್ಸ್ ಮೂಲಕ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಬಿಡುಗಡೆ ಆಗುತ್ತಿದೆ.
ಕೋರ್ಟ್ನಲ್ಲಿ ತಮ್ಮ ಪರವಾಗಿ ತೀರ್ಪು ಬಂದಿರುವುದಕ್ಕೆ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾತಂಡದವರು ನಿಟ್ಟುಸಿರು ಬಿಟ್ಟಿದ್ದಾರೆ. ನರ್ತಕಿ ಚಿತ್ರಮಂದಿರದ ಎದುರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಸಿನಿಮಾದಲ್ಲಿ ಅನೇಕ ಹೊಸ ಕಲಾವಿದರು ನಟಿಸಿದ್ದಾರೆ. ವಿಶೇಷವಾದ ಪ್ರಮೋಷನ್ ವಿಡಿಯೋಗಳ ಮೂಲಕ ಈ ಸಿನಿಮಾ ಹೈಪ್ ಸೃಷ್ಟಿ ಮಾಡಿದೆ. ಈ ಮೊದಲು ಪುನೀತ್ ರಾಜ್ಕುಮಾರ್ ಕೂಡ ಈ ಚಿತ್ರದ ಪ್ರಮೋಷನಲ್ ವಿಡಿಯೋದಲ್ಲಿ ಕಾಣಿಸಿಕೊಂಡು ಚಿತ್ರತಂಡಕ್ಕೆ ಬೆಂಬಲ ಸೂಚಿಸಿದ್ದರು.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…