ಆಗಸ್ಟ್ 23ರ ಬುಧವಾರ ಸಂಜೆ 6.04 ನಿಮಿಷಕ್ಕೆ ಸರಿಯಾಗಿ ಚಂದ್ರನ ಅಂಗಳಕ್ಕೆ ವಿಕ್ರಮ್ ಲ್ಯಾಂಡ್ ರೋವರ್ ಇಳಿದಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಮೊದಲ ದೇಶವೆಂಬ ಹೆಗ್ಗಳಿಕೆ ಭಾರತದ ಪಾಲಾಗಿದೆ. ಇಸ್ರೋ ಚಂದ್ರಯಾನ-3 ನೌಕೆಯನ್ನು ಜುಲೈ 14ರಂದು ಉಡಾವಣೆ ಮಾಡಿತ್ತು.
ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಸ್ಥೆ ಅಥವಾ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ 3 ಯಶಸ್ವಿಯಾಗಿದ್ದು, ಭಾರತ ಹೊಸ ದಾಖಲೆ ಬರೆದಿದೆ. ಚಂದ್ರಯಾನ–3ರ ಯಶಸ್ಸಿನ ಕೀರ್ತಿ ಯಾರಿಗೆ ಸಲ್ಲುತ್ತದೆ. ನಮ್ಮ ವಿಜ್ಞಾನಿಗಳಿಗೋ ಅಥವಾ ‘ಲಾರ್ಡ್’ ತಿರುಪತಿಗೋ? ಎಂದು ನಟ ಚೇತನ್ ಅಹಿಂಸಾ ಪ್ರಶ್ನಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಟ್ವೀಟ್ ಮಾಡಿರುವ ಅವರು, ‘ಚಂದ್ರಯಾನ–3 ಯೋಜನೆ ಯಶಸ್ವಿಯಾಗಿದ್ದು, ವಿಕ್ರಮ್ ಲ್ಯಾಂಡಲ್ ಚಂದ್ರನ ಮೇಲೆ ಇಳಿದ ಐತಿಹಾಸಿಕ ಕ್ಷಣವನ್ನು ನೋಡಲು ನನಗೆ ಸಂತೋಷವಾಗಿದೆ ಎಂದಿದ್ದಾರೆ.
ಮುಂದುವರಿದು, ಆದರೆ, ಚಂದ್ರಯಾನ–3ರ ಈ ಯಶಸ್ಸಿನ ಕೀರ್ತಿ ಯಾರಿಗೆ ಸಲ್ಲುತ್ತದೆ: ನಮ್ಮ ವಿಜ್ಞಾನಿಗಳಿಗೋ ಅಥವಾ ‘ಲಾರ್ಡ್‘ ತಿರುಪತಿಗೋ?’ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.
ಮತ್ತೊಂದು ಟ್ವೀಟ್ ಮಾಡಿರುವ ಅವರು, ‘ವಾಸ್ತವ’ ಎಂದು ಬರೆದುಕೊಂಡಿದ್ದು, ಚಂದ್ರಯಾನ-3 ನೌಕೆಯ ಉಡಾವಣೆ ಚಿತ್ರ ಮತ್ತು ವ್ಯಕ್ತಿಯೊಬ್ಬ ಮ್ಯಾನ್ಹೋಲ್ಗೆ ಇಳಿದಿರುವ ಚಿತ್ರವನ್ನು ಅವರು ಹಂಚಿಕೊಂಡಿದ್ದಾರೆ.
ಆಗಸ್ಟ್ 23ರ ಬುಧವಾರ ಸಂಜೆ 6.04 ನಿಮಿಷಕ್ಕೆ ಸರಿಯಾಗಿ ಚಂದ್ರನ ಅಂಗಳಕ್ಕೆ ವಿಕ್ರಮ್ ಲ್ಯಾಂಡ್ ರೋವರ್ ಇಳಿದಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಮೊದಲ ದೇಶವೆಂಬ ಹೆಗ್ಗಳಿಕೆ ಭಾರತದ ಪಾಲಾಗಿದೆ. ಇಸ್ರೋ ಚಂದ್ರಯಾನ-3 ನೌಕೆಯನ್ನು ಜುಲೈ 14ರಂದು ಉಡಾವಣೆ ಮಾಡಿತ್ತು.
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…