ಆಗಸ್ಟ್ 23ರ ಬುಧವಾರ ಸಂಜೆ 6.04 ನಿಮಿಷಕ್ಕೆ ಸರಿಯಾಗಿ ಚಂದ್ರನ ಅಂಗಳಕ್ಕೆ ವಿಕ್ರಮ್ ಲ್ಯಾಂಡ್ ರೋವರ್ ಇಳಿದಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಮೊದಲ ದೇಶವೆಂಬ ಹೆಗ್ಗಳಿಕೆ ಭಾರತದ ಪಾಲಾಗಿದೆ. ಇಸ್ರೋ ಚಂದ್ರಯಾನ-3 ನೌಕೆಯನ್ನು ಜುಲೈ 14ರಂದು ಉಡಾವಣೆ ಮಾಡಿತ್ತು.
ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಸ್ಥೆ ಅಥವಾ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ 3 ಯಶಸ್ವಿಯಾಗಿದ್ದು, ಭಾರತ ಹೊಸ ದಾಖಲೆ ಬರೆದಿದೆ. ಚಂದ್ರಯಾನ–3ರ ಯಶಸ್ಸಿನ ಕೀರ್ತಿ ಯಾರಿಗೆ ಸಲ್ಲುತ್ತದೆ. ನಮ್ಮ ವಿಜ್ಞಾನಿಗಳಿಗೋ ಅಥವಾ ‘ಲಾರ್ಡ್’ ತಿರುಪತಿಗೋ? ಎಂದು ನಟ ಚೇತನ್ ಅಹಿಂಸಾ ಪ್ರಶ್ನಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಟ್ವೀಟ್ ಮಾಡಿರುವ ಅವರು, ‘ಚಂದ್ರಯಾನ–3 ಯೋಜನೆ ಯಶಸ್ವಿಯಾಗಿದ್ದು, ವಿಕ್ರಮ್ ಲ್ಯಾಂಡಲ್ ಚಂದ್ರನ ಮೇಲೆ ಇಳಿದ ಐತಿಹಾಸಿಕ ಕ್ಷಣವನ್ನು ನೋಡಲು ನನಗೆ ಸಂತೋಷವಾಗಿದೆ ಎಂದಿದ್ದಾರೆ.
ಮುಂದುವರಿದು, ಆದರೆ, ಚಂದ್ರಯಾನ–3ರ ಈ ಯಶಸ್ಸಿನ ಕೀರ್ತಿ ಯಾರಿಗೆ ಸಲ್ಲುತ್ತದೆ: ನಮ್ಮ ವಿಜ್ಞಾನಿಗಳಿಗೋ ಅಥವಾ ‘ಲಾರ್ಡ್‘ ತಿರುಪತಿಗೋ?’ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.
ಮತ್ತೊಂದು ಟ್ವೀಟ್ ಮಾಡಿರುವ ಅವರು, ‘ವಾಸ್ತವ’ ಎಂದು ಬರೆದುಕೊಂಡಿದ್ದು, ಚಂದ್ರಯಾನ-3 ನೌಕೆಯ ಉಡಾವಣೆ ಚಿತ್ರ ಮತ್ತು ವ್ಯಕ್ತಿಯೊಬ್ಬ ಮ್ಯಾನ್ಹೋಲ್ಗೆ ಇಳಿದಿರುವ ಚಿತ್ರವನ್ನು ಅವರು ಹಂಚಿಕೊಂಡಿದ್ದಾರೆ.
ಆಗಸ್ಟ್ 23ರ ಬುಧವಾರ ಸಂಜೆ 6.04 ನಿಮಿಷಕ್ಕೆ ಸರಿಯಾಗಿ ಚಂದ್ರನ ಅಂಗಳಕ್ಕೆ ವಿಕ್ರಮ್ ಲ್ಯಾಂಡ್ ರೋವರ್ ಇಳಿದಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಮೊದಲ ದೇಶವೆಂಬ ಹೆಗ್ಗಳಿಕೆ ಭಾರತದ ಪಾಲಾಗಿದೆ. ಇಸ್ರೋ ಚಂದ್ರಯಾನ-3 ನೌಕೆಯನ್ನು ಜುಲೈ 14ರಂದು ಉಡಾವಣೆ ಮಾಡಿತ್ತು.
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…
ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…
ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…
ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…