ಆಗಸ್ಟ್ 23ರ ಬುಧವಾರ ಸಂಜೆ 6.04 ನಿಮಿಷಕ್ಕೆ ಸರಿಯಾಗಿ ಚಂದ್ರನ ಅಂಗಳಕ್ಕೆ ವಿಕ್ರಮ್ ಲ್ಯಾಂಡ್ ರೋವರ್ ಇಳಿದಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಮೊದಲ ದೇಶವೆಂಬ ಹೆಗ್ಗಳಿಕೆ ಭಾರತದ ಪಾಲಾಗಿದೆ. ಇಸ್ರೋ ಚಂದ್ರಯಾನ-3 ನೌಕೆಯನ್ನು ಜುಲೈ 14ರಂದು ಉಡಾವಣೆ ಮಾಡಿತ್ತು.
ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಸ್ಥೆ ಅಥವಾ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ 3 ಯಶಸ್ವಿಯಾಗಿದ್ದು, ಭಾರತ ಹೊಸ ದಾಖಲೆ ಬರೆದಿದೆ. ಚಂದ್ರಯಾನ–3ರ ಯಶಸ್ಸಿನ ಕೀರ್ತಿ ಯಾರಿಗೆ ಸಲ್ಲುತ್ತದೆ. ನಮ್ಮ ವಿಜ್ಞಾನಿಗಳಿಗೋ ಅಥವಾ ‘ಲಾರ್ಡ್’ ತಿರುಪತಿಗೋ? ಎಂದು ನಟ ಚೇತನ್ ಅಹಿಂಸಾ ಪ್ರಶ್ನಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಟ್ವೀಟ್ ಮಾಡಿರುವ ಅವರು, ‘ಚಂದ್ರಯಾನ–3 ಯೋಜನೆ ಯಶಸ್ವಿಯಾಗಿದ್ದು, ವಿಕ್ರಮ್ ಲ್ಯಾಂಡಲ್ ಚಂದ್ರನ ಮೇಲೆ ಇಳಿದ ಐತಿಹಾಸಿಕ ಕ್ಷಣವನ್ನು ನೋಡಲು ನನಗೆ ಸಂತೋಷವಾಗಿದೆ ಎಂದಿದ್ದಾರೆ.
ಮುಂದುವರಿದು, ಆದರೆ, ಚಂದ್ರಯಾನ–3ರ ಈ ಯಶಸ್ಸಿನ ಕೀರ್ತಿ ಯಾರಿಗೆ ಸಲ್ಲುತ್ತದೆ: ನಮ್ಮ ವಿಜ್ಞಾನಿಗಳಿಗೋ ಅಥವಾ ‘ಲಾರ್ಡ್‘ ತಿರುಪತಿಗೋ?’ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.
ಮತ್ತೊಂದು ಟ್ವೀಟ್ ಮಾಡಿರುವ ಅವರು, ‘ವಾಸ್ತವ’ ಎಂದು ಬರೆದುಕೊಂಡಿದ್ದು, ಚಂದ್ರಯಾನ-3 ನೌಕೆಯ ಉಡಾವಣೆ ಚಿತ್ರ ಮತ್ತು ವ್ಯಕ್ತಿಯೊಬ್ಬ ಮ್ಯಾನ್ಹೋಲ್ಗೆ ಇಳಿದಿರುವ ಚಿತ್ರವನ್ನು ಅವರು ಹಂಚಿಕೊಂಡಿದ್ದಾರೆ.
ಆಗಸ್ಟ್ 23ರ ಬುಧವಾರ ಸಂಜೆ 6.04 ನಿಮಿಷಕ್ಕೆ ಸರಿಯಾಗಿ ಚಂದ್ರನ ಅಂಗಳಕ್ಕೆ ವಿಕ್ರಮ್ ಲ್ಯಾಂಡ್ ರೋವರ್ ಇಳಿದಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಮೊದಲ ದೇಶವೆಂಬ ಹೆಗ್ಗಳಿಕೆ ಭಾರತದ ಪಾಲಾಗಿದೆ. ಇಸ್ರೋ ಚಂದ್ರಯಾನ-3 ನೌಕೆಯನ್ನು ಜುಲೈ 14ರಂದು ಉಡಾವಣೆ ಮಾಡಿತ್ತು.
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…