ಆಗಸ್ಟ್ 23ರ ಬುಧವಾರ ಸಂಜೆ 6.04 ನಿಮಿಷಕ್ಕೆ ಸರಿಯಾಗಿ ಚಂದ್ರನ ಅಂಗಳಕ್ಕೆ ವಿಕ್ರಮ್ ಲ್ಯಾಂಡ್ ರೋವರ್ ಇಳಿದಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಮೊದಲ ದೇಶವೆಂಬ ಹೆಗ್ಗಳಿಕೆ ಭಾರತದ ಪಾಲಾಗಿದೆ. ಇಸ್ರೋ ಚಂದ್ರಯಾನ-3 ನೌಕೆಯನ್ನು ಜುಲೈ 14ರಂದು ಉಡಾವಣೆ ಮಾಡಿತ್ತು.
ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಸ್ಥೆ ಅಥವಾ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ 3 ಯಶಸ್ವಿಯಾಗಿದ್ದು, ಭಾರತ ಹೊಸ ದಾಖಲೆ ಬರೆದಿದೆ. ಚಂದ್ರಯಾನ–3ರ ಯಶಸ್ಸಿನ ಕೀರ್ತಿ ಯಾರಿಗೆ ಸಲ್ಲುತ್ತದೆ. ನಮ್ಮ ವಿಜ್ಞಾನಿಗಳಿಗೋ ಅಥವಾ ‘ಲಾರ್ಡ್’ ತಿರುಪತಿಗೋ? ಎಂದು ನಟ ಚೇತನ್ ಅಹಿಂಸಾ ಪ್ರಶ್ನಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಟ್ವೀಟ್ ಮಾಡಿರುವ ಅವರು, ‘ಚಂದ್ರಯಾನ–3 ಯೋಜನೆ ಯಶಸ್ವಿಯಾಗಿದ್ದು, ವಿಕ್ರಮ್ ಲ್ಯಾಂಡಲ್ ಚಂದ್ರನ ಮೇಲೆ ಇಳಿದ ಐತಿಹಾಸಿಕ ಕ್ಷಣವನ್ನು ನೋಡಲು ನನಗೆ ಸಂತೋಷವಾಗಿದೆ ಎಂದಿದ್ದಾರೆ.
ಮುಂದುವರಿದು, ಆದರೆ, ಚಂದ್ರಯಾನ–3ರ ಈ ಯಶಸ್ಸಿನ ಕೀರ್ತಿ ಯಾರಿಗೆ ಸಲ್ಲುತ್ತದೆ: ನಮ್ಮ ವಿಜ್ಞಾನಿಗಳಿಗೋ ಅಥವಾ ‘ಲಾರ್ಡ್‘ ತಿರುಪತಿಗೋ?’ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.
ಮತ್ತೊಂದು ಟ್ವೀಟ್ ಮಾಡಿರುವ ಅವರು, ‘ವಾಸ್ತವ’ ಎಂದು ಬರೆದುಕೊಂಡಿದ್ದು, ಚಂದ್ರಯಾನ-3 ನೌಕೆಯ ಉಡಾವಣೆ ಚಿತ್ರ ಮತ್ತು ವ್ಯಕ್ತಿಯೊಬ್ಬ ಮ್ಯಾನ್ಹೋಲ್ಗೆ ಇಳಿದಿರುವ ಚಿತ್ರವನ್ನು ಅವರು ಹಂಚಿಕೊಂಡಿದ್ದಾರೆ.
ಆಗಸ್ಟ್ 23ರ ಬುಧವಾರ ಸಂಜೆ 6.04 ನಿಮಿಷಕ್ಕೆ ಸರಿಯಾಗಿ ಚಂದ್ರನ ಅಂಗಳಕ್ಕೆ ವಿಕ್ರಮ್ ಲ್ಯಾಂಡ್ ರೋವರ್ ಇಳಿದಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಮೊದಲ ದೇಶವೆಂಬ ಹೆಗ್ಗಳಿಕೆ ಭಾರತದ ಪಾಲಾಗಿದೆ. ಇಸ್ರೋ ಚಂದ್ರಯಾನ-3 ನೌಕೆಯನ್ನು ಜುಲೈ 14ರಂದು ಉಡಾವಣೆ ಮಾಡಿತ್ತು.
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…
ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…
ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷದ ದರ ನಿಯಂತ್ರಣ ಪ್ರಾಧಿಕಾರ (ಎನ್ಪಿಪಿಎ) ೩೯ ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಮಹತ್ವದ…
ಕುಗ್ರಾಮಗಳಲ್ಲಿ ವೈದ್ಯಕೀಯ ಶಿಬಿರಗಳ ಆಯೋಜನೆ ಬಿಹಾರದ ಪಟ್ನಾ ಜಿಲ್ಲೆಯ ದರ್ಭಾಂಗಾದ ಭುರವನ್ ಗ್ರಾಮದ ರಮಣ್ ಕಿಶೋರ್ ಅವರದ್ದು ಒಂದು ಸಾಧಾರಣ…
ಕೆ.ಬಿ.ರಮೇಶನಾಯಕ ಧಾರ್ಮಿಕತೆ ಹೆಸರಿನಲ್ಲಿ ನಿಷೇಧ ಹೇರಿದ್ದ ವಿಡಿಯೋ, ಫೋಟೋ ಚಿತ್ರೀಕರಣಕ್ಕೂ ಅವಕಾಶ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿರುವ ಹೆಸರಾಂತ ದೇವಸ್ಥಾನಗಳಿಗೆ…
ಹೇಮಂತ್ಕುಮಾರ್ ಮಂಡ್ಯ: ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರು ಸರಬರಾಜಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ಸಮಸ್ಯೆ…