ಚಿತ್ರ ಮಂಜರಿ

ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಡಿ ಬಾಸ್‌

ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಹಿರಿಯ ನಟಿ ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.

ವಯೋಸಹಜ ಕಾರಣದಿಂದ ಹಾಸಿಗೆ ಹಿಡಿದಿರುವ ನಟಿ ಲೀಲಾವತಿ ಅವರ ಮನೆಗೆ ತರೆಳಿದ ದರ್ಶನ್‌ ಅವರು ಲೀಲಾವತಿಯವರ ಪುತ್ರ ವಿನೋದ್‌ ರಾಜ್‌ ಬಳಿ ಯೋಗಕ್ಷೇಮ ವಿಚಾರಿಸಿದ್ದು ಕೆಲಕಾಲ ಅಲ್ಲಿಯೇ ಇದ್ದು ನಾನಾ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಇತ್ತೀಚೆಗೆ ಚಿತ್ರರಂಗದ ಹಲವು ನಟ ನಟಿಯರು ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ಅವರ ಮನೆಗೆ ತೆರಳಿ ವಯೋಸಹಜ ಕಾರಣದಿಂದ ಹಾಸಿಗೆ ಹಿಡಿದಿರುವ ನಟಿಯ ಆರೋಗ್ಯ ವಿಚಾರಿಸುತ್ತಿದ್ದಾರೆ.ಕಳೆದ ಕೆಲ ದಿನಗಳ ಹಿಂದೆ ನಟ ಅರ್ಜುನ್‌ ಸರ್ಜಾ ಅವರು ಕೂಡ ಲೀಲಾವತಿಯವರ ಮನೆಗೆ ತೆರಳಿ ಯೋಗಕ್ಷೇಮ ವಿಚಾರಿಸಿದ್ದರು. ನೆನ್ನೆ ದರಶನ್‌ ಅವರು ಕೂಡ ಲೀಲಾವತಿಯವರನ್ನು ಭೇಟಿಯಾಗಿದ್ದಾರೆ.

ಕೆಲದಿನಗಳ ಹಿಂದೆ ಲೀಲಾವತಿಯವರು ನಿಧನರಾದರೆಂಬ ಸುಳ್ಳು ವದಂತಿಯನ್ನು ಹಬ್ಬಿಸಲಾಗಿತ್ತು. ಇದು ಅವರ ಪುತ್ರ ವಿನೋದ್‌ ರಾಜ್‌ ಅವರಿಗೆ ಬಹಳ ಬೇಸರ ತರಿಸಿತ್ತು. ಈ ಬಗ್ಗೆ ವಿನೋದ್‌ ರಾಜ್‌ ಅವರು ಸಂದರ್ಶನವೊಂದರಲ್ಲಿ ತಮ್ಮ ತಾಯಿಯ ಆರೋಗ್ಯದ ಬಗೆಗಿನ ಮಾಹಿತಿ ಹಂಚಿಕೊಂಡಿದ್ದರು. ಅಮ್ಮ ಆರೋಗ್ಯವಾಗಿದ್ದಾರೆ. ಅವರ ವಯಸ್ಸಿಗೆ ತಕ್ಕಂತೆ ಹೇಗೆ ಇರಬೇಕೋ ಹಾಗೆ ಇದ್ದಾರೆ ಅಮ್ಮ 86-87 ವಯಸ್ಸು ಮುಟ್ಟಿದ್ದಾರೆ. ಅವರ ಕಾಲದಲ್ಲಿ ಒಂದು ದಿನಕ್ಕೆ ನಾಲ್ಕು ಸಿನಿಮಾಗೆ ಪಾತ್ರ ಮಾಡಿದವರು. ಅಮ್ಮ ಒಟ್ಟು 650 ಸಿನಿಮಾಗಳಲ್ಲಿ ಅಭಿನಯ ಮಾಡಿದ್ದಾರೆ. ಜನ ಯಾಕೆ ಅಮ್ಮನ ಸಾವಿನ ಸುದ್ದಿ ಹಬ್ಬಿಸಿದ್ರು ಅನ್ನೋದನ್ನು ಮಂಜುನಾಥನಿಗೆ ಬಿಟ್ಟಿದ್ದೀವಿ. ಅವನೇ ನೋಡಿಕೊಳ್ಳಬೇಕು ಅಷ್ಟೇ ಎಂದು ಹೇಳಿದ್ದರು.
ನಟಿ ಲೀಲಾವತಿಯವರು ಕಳೆದ ಕೆಲ ವರ್ಷಗಳಿಂದ ವಯೋಸಹಜ ಅನಾರೋಗ್ಯದಿಂದ ತಮ್ಮ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ದಶಕಗಳಕಾಲ ಬಹುಬೇಡಿಕೆಯ ನಟಿಯಾಗಿ ಮಿಂಚಿದ್ದ ಲೀಲಾವತಿಯವರು ತಮ್ಮ ಅತ್ಯದ್ಭುತ ನಟನೆಯ ಮೂಲಕ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

lokesh

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

35 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

40 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

49 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago