ಚಿತ್ರ ಮಂಜರಿ

ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಡಿ ಬಾಸ್‌

ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಹಿರಿಯ ನಟಿ ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.

ವಯೋಸಹಜ ಕಾರಣದಿಂದ ಹಾಸಿಗೆ ಹಿಡಿದಿರುವ ನಟಿ ಲೀಲಾವತಿ ಅವರ ಮನೆಗೆ ತರೆಳಿದ ದರ್ಶನ್‌ ಅವರು ಲೀಲಾವತಿಯವರ ಪುತ್ರ ವಿನೋದ್‌ ರಾಜ್‌ ಬಳಿ ಯೋಗಕ್ಷೇಮ ವಿಚಾರಿಸಿದ್ದು ಕೆಲಕಾಲ ಅಲ್ಲಿಯೇ ಇದ್ದು ನಾನಾ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಇತ್ತೀಚೆಗೆ ಚಿತ್ರರಂಗದ ಹಲವು ನಟ ನಟಿಯರು ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ಅವರ ಮನೆಗೆ ತೆರಳಿ ವಯೋಸಹಜ ಕಾರಣದಿಂದ ಹಾಸಿಗೆ ಹಿಡಿದಿರುವ ನಟಿಯ ಆರೋಗ್ಯ ವಿಚಾರಿಸುತ್ತಿದ್ದಾರೆ.ಕಳೆದ ಕೆಲ ದಿನಗಳ ಹಿಂದೆ ನಟ ಅರ್ಜುನ್‌ ಸರ್ಜಾ ಅವರು ಕೂಡ ಲೀಲಾವತಿಯವರ ಮನೆಗೆ ತೆರಳಿ ಯೋಗಕ್ಷೇಮ ವಿಚಾರಿಸಿದ್ದರು. ನೆನ್ನೆ ದರಶನ್‌ ಅವರು ಕೂಡ ಲೀಲಾವತಿಯವರನ್ನು ಭೇಟಿಯಾಗಿದ್ದಾರೆ.

ಕೆಲದಿನಗಳ ಹಿಂದೆ ಲೀಲಾವತಿಯವರು ನಿಧನರಾದರೆಂಬ ಸುಳ್ಳು ವದಂತಿಯನ್ನು ಹಬ್ಬಿಸಲಾಗಿತ್ತು. ಇದು ಅವರ ಪುತ್ರ ವಿನೋದ್‌ ರಾಜ್‌ ಅವರಿಗೆ ಬಹಳ ಬೇಸರ ತರಿಸಿತ್ತು. ಈ ಬಗ್ಗೆ ವಿನೋದ್‌ ರಾಜ್‌ ಅವರು ಸಂದರ್ಶನವೊಂದರಲ್ಲಿ ತಮ್ಮ ತಾಯಿಯ ಆರೋಗ್ಯದ ಬಗೆಗಿನ ಮಾಹಿತಿ ಹಂಚಿಕೊಂಡಿದ್ದರು. ಅಮ್ಮ ಆರೋಗ್ಯವಾಗಿದ್ದಾರೆ. ಅವರ ವಯಸ್ಸಿಗೆ ತಕ್ಕಂತೆ ಹೇಗೆ ಇರಬೇಕೋ ಹಾಗೆ ಇದ್ದಾರೆ ಅಮ್ಮ 86-87 ವಯಸ್ಸು ಮುಟ್ಟಿದ್ದಾರೆ. ಅವರ ಕಾಲದಲ್ಲಿ ಒಂದು ದಿನಕ್ಕೆ ನಾಲ್ಕು ಸಿನಿಮಾಗೆ ಪಾತ್ರ ಮಾಡಿದವರು. ಅಮ್ಮ ಒಟ್ಟು 650 ಸಿನಿಮಾಗಳಲ್ಲಿ ಅಭಿನಯ ಮಾಡಿದ್ದಾರೆ. ಜನ ಯಾಕೆ ಅಮ್ಮನ ಸಾವಿನ ಸುದ್ದಿ ಹಬ್ಬಿಸಿದ್ರು ಅನ್ನೋದನ್ನು ಮಂಜುನಾಥನಿಗೆ ಬಿಟ್ಟಿದ್ದೀವಿ. ಅವನೇ ನೋಡಿಕೊಳ್ಳಬೇಕು ಅಷ್ಟೇ ಎಂದು ಹೇಳಿದ್ದರು.
ನಟಿ ಲೀಲಾವತಿಯವರು ಕಳೆದ ಕೆಲ ವರ್ಷಗಳಿಂದ ವಯೋಸಹಜ ಅನಾರೋಗ್ಯದಿಂದ ತಮ್ಮ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ದಶಕಗಳಕಾಲ ಬಹುಬೇಡಿಕೆಯ ನಟಿಯಾಗಿ ಮಿಂಚಿದ್ದ ಲೀಲಾವತಿಯವರು ತಮ್ಮ ಅತ್ಯದ್ಭುತ ನಟನೆಯ ಮೂಲಕ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

lokesh

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

6 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

6 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

6 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

6 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

7 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

7 hours ago