ಚಿತ್ರ ಮಂಜರಿ

ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಡಿ ಬಾಸ್‌

ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಹಿರಿಯ ನಟಿ ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.

ವಯೋಸಹಜ ಕಾರಣದಿಂದ ಹಾಸಿಗೆ ಹಿಡಿದಿರುವ ನಟಿ ಲೀಲಾವತಿ ಅವರ ಮನೆಗೆ ತರೆಳಿದ ದರ್ಶನ್‌ ಅವರು ಲೀಲಾವತಿಯವರ ಪುತ್ರ ವಿನೋದ್‌ ರಾಜ್‌ ಬಳಿ ಯೋಗಕ್ಷೇಮ ವಿಚಾರಿಸಿದ್ದು ಕೆಲಕಾಲ ಅಲ್ಲಿಯೇ ಇದ್ದು ನಾನಾ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಇತ್ತೀಚೆಗೆ ಚಿತ್ರರಂಗದ ಹಲವು ನಟ ನಟಿಯರು ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ಅವರ ಮನೆಗೆ ತೆರಳಿ ವಯೋಸಹಜ ಕಾರಣದಿಂದ ಹಾಸಿಗೆ ಹಿಡಿದಿರುವ ನಟಿಯ ಆರೋಗ್ಯ ವಿಚಾರಿಸುತ್ತಿದ್ದಾರೆ.ಕಳೆದ ಕೆಲ ದಿನಗಳ ಹಿಂದೆ ನಟ ಅರ್ಜುನ್‌ ಸರ್ಜಾ ಅವರು ಕೂಡ ಲೀಲಾವತಿಯವರ ಮನೆಗೆ ತೆರಳಿ ಯೋಗಕ್ಷೇಮ ವಿಚಾರಿಸಿದ್ದರು. ನೆನ್ನೆ ದರಶನ್‌ ಅವರು ಕೂಡ ಲೀಲಾವತಿಯವರನ್ನು ಭೇಟಿಯಾಗಿದ್ದಾರೆ.

ಕೆಲದಿನಗಳ ಹಿಂದೆ ಲೀಲಾವತಿಯವರು ನಿಧನರಾದರೆಂಬ ಸುಳ್ಳು ವದಂತಿಯನ್ನು ಹಬ್ಬಿಸಲಾಗಿತ್ತು. ಇದು ಅವರ ಪುತ್ರ ವಿನೋದ್‌ ರಾಜ್‌ ಅವರಿಗೆ ಬಹಳ ಬೇಸರ ತರಿಸಿತ್ತು. ಈ ಬಗ್ಗೆ ವಿನೋದ್‌ ರಾಜ್‌ ಅವರು ಸಂದರ್ಶನವೊಂದರಲ್ಲಿ ತಮ್ಮ ತಾಯಿಯ ಆರೋಗ್ಯದ ಬಗೆಗಿನ ಮಾಹಿತಿ ಹಂಚಿಕೊಂಡಿದ್ದರು. ಅಮ್ಮ ಆರೋಗ್ಯವಾಗಿದ್ದಾರೆ. ಅವರ ವಯಸ್ಸಿಗೆ ತಕ್ಕಂತೆ ಹೇಗೆ ಇರಬೇಕೋ ಹಾಗೆ ಇದ್ದಾರೆ ಅಮ್ಮ 86-87 ವಯಸ್ಸು ಮುಟ್ಟಿದ್ದಾರೆ. ಅವರ ಕಾಲದಲ್ಲಿ ಒಂದು ದಿನಕ್ಕೆ ನಾಲ್ಕು ಸಿನಿಮಾಗೆ ಪಾತ್ರ ಮಾಡಿದವರು. ಅಮ್ಮ ಒಟ್ಟು 650 ಸಿನಿಮಾಗಳಲ್ಲಿ ಅಭಿನಯ ಮಾಡಿದ್ದಾರೆ. ಜನ ಯಾಕೆ ಅಮ್ಮನ ಸಾವಿನ ಸುದ್ದಿ ಹಬ್ಬಿಸಿದ್ರು ಅನ್ನೋದನ್ನು ಮಂಜುನಾಥನಿಗೆ ಬಿಟ್ಟಿದ್ದೀವಿ. ಅವನೇ ನೋಡಿಕೊಳ್ಳಬೇಕು ಅಷ್ಟೇ ಎಂದು ಹೇಳಿದ್ದರು.
ನಟಿ ಲೀಲಾವತಿಯವರು ಕಳೆದ ಕೆಲ ವರ್ಷಗಳಿಂದ ವಯೋಸಹಜ ಅನಾರೋಗ್ಯದಿಂದ ತಮ್ಮ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ದಶಕಗಳಕಾಲ ಬಹುಬೇಡಿಕೆಯ ನಟಿಯಾಗಿ ಮಿಂಚಿದ್ದ ಲೀಲಾವತಿಯವರು ತಮ್ಮ ಅತ್ಯದ್ಭುತ ನಟನೆಯ ಮೂಲಕ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

lokesh

Recent Posts

ಮೈಸೂರು: ಕೆಮಿಕಲ್‌ ಘಟಕದ ಮೇಲೆ ದೆಹಲಿ ಪೊಲೀಸರ ದಾಳಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್‌ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು…

17 mins ago

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

4 hours ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

4 hours ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

4 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

4 hours ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

4 hours ago