ಚಿತ್ರ ಮಂಜರಿ

ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಡಿ ಬಾಸ್‌

ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಹಿರಿಯ ನಟಿ ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.

ವಯೋಸಹಜ ಕಾರಣದಿಂದ ಹಾಸಿಗೆ ಹಿಡಿದಿರುವ ನಟಿ ಲೀಲಾವತಿ ಅವರ ಮನೆಗೆ ತರೆಳಿದ ದರ್ಶನ್‌ ಅವರು ಲೀಲಾವತಿಯವರ ಪುತ್ರ ವಿನೋದ್‌ ರಾಜ್‌ ಬಳಿ ಯೋಗಕ್ಷೇಮ ವಿಚಾರಿಸಿದ್ದು ಕೆಲಕಾಲ ಅಲ್ಲಿಯೇ ಇದ್ದು ನಾನಾ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಇತ್ತೀಚೆಗೆ ಚಿತ್ರರಂಗದ ಹಲವು ನಟ ನಟಿಯರು ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ಅವರ ಮನೆಗೆ ತೆರಳಿ ವಯೋಸಹಜ ಕಾರಣದಿಂದ ಹಾಸಿಗೆ ಹಿಡಿದಿರುವ ನಟಿಯ ಆರೋಗ್ಯ ವಿಚಾರಿಸುತ್ತಿದ್ದಾರೆ.ಕಳೆದ ಕೆಲ ದಿನಗಳ ಹಿಂದೆ ನಟ ಅರ್ಜುನ್‌ ಸರ್ಜಾ ಅವರು ಕೂಡ ಲೀಲಾವತಿಯವರ ಮನೆಗೆ ತೆರಳಿ ಯೋಗಕ್ಷೇಮ ವಿಚಾರಿಸಿದ್ದರು. ನೆನ್ನೆ ದರಶನ್‌ ಅವರು ಕೂಡ ಲೀಲಾವತಿಯವರನ್ನು ಭೇಟಿಯಾಗಿದ್ದಾರೆ.

ಕೆಲದಿನಗಳ ಹಿಂದೆ ಲೀಲಾವತಿಯವರು ನಿಧನರಾದರೆಂಬ ಸುಳ್ಳು ವದಂತಿಯನ್ನು ಹಬ್ಬಿಸಲಾಗಿತ್ತು. ಇದು ಅವರ ಪುತ್ರ ವಿನೋದ್‌ ರಾಜ್‌ ಅವರಿಗೆ ಬಹಳ ಬೇಸರ ತರಿಸಿತ್ತು. ಈ ಬಗ್ಗೆ ವಿನೋದ್‌ ರಾಜ್‌ ಅವರು ಸಂದರ್ಶನವೊಂದರಲ್ಲಿ ತಮ್ಮ ತಾಯಿಯ ಆರೋಗ್ಯದ ಬಗೆಗಿನ ಮಾಹಿತಿ ಹಂಚಿಕೊಂಡಿದ್ದರು. ಅಮ್ಮ ಆರೋಗ್ಯವಾಗಿದ್ದಾರೆ. ಅವರ ವಯಸ್ಸಿಗೆ ತಕ್ಕಂತೆ ಹೇಗೆ ಇರಬೇಕೋ ಹಾಗೆ ಇದ್ದಾರೆ ಅಮ್ಮ 86-87 ವಯಸ್ಸು ಮುಟ್ಟಿದ್ದಾರೆ. ಅವರ ಕಾಲದಲ್ಲಿ ಒಂದು ದಿನಕ್ಕೆ ನಾಲ್ಕು ಸಿನಿಮಾಗೆ ಪಾತ್ರ ಮಾಡಿದವರು. ಅಮ್ಮ ಒಟ್ಟು 650 ಸಿನಿಮಾಗಳಲ್ಲಿ ಅಭಿನಯ ಮಾಡಿದ್ದಾರೆ. ಜನ ಯಾಕೆ ಅಮ್ಮನ ಸಾವಿನ ಸುದ್ದಿ ಹಬ್ಬಿಸಿದ್ರು ಅನ್ನೋದನ್ನು ಮಂಜುನಾಥನಿಗೆ ಬಿಟ್ಟಿದ್ದೀವಿ. ಅವನೇ ನೋಡಿಕೊಳ್ಳಬೇಕು ಅಷ್ಟೇ ಎಂದು ಹೇಳಿದ್ದರು.
ನಟಿ ಲೀಲಾವತಿಯವರು ಕಳೆದ ಕೆಲ ವರ್ಷಗಳಿಂದ ವಯೋಸಹಜ ಅನಾರೋಗ್ಯದಿಂದ ತಮ್ಮ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ದಶಕಗಳಕಾಲ ಬಹುಬೇಡಿಕೆಯ ನಟಿಯಾಗಿ ಮಿಂಚಿದ್ದ ಲೀಲಾವತಿಯವರು ತಮ್ಮ ಅತ್ಯದ್ಭುತ ನಟನೆಯ ಮೂಲಕ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

lokesh

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

6 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

10 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

10 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

11 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

11 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

12 hours ago