ಚಿತ್ರ ಮಂಜರಿ

ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಡಿ ಬಾಸ್‌

ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಹಿರಿಯ ನಟಿ ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.

ವಯೋಸಹಜ ಕಾರಣದಿಂದ ಹಾಸಿಗೆ ಹಿಡಿದಿರುವ ನಟಿ ಲೀಲಾವತಿ ಅವರ ಮನೆಗೆ ತರೆಳಿದ ದರ್ಶನ್‌ ಅವರು ಲೀಲಾವತಿಯವರ ಪುತ್ರ ವಿನೋದ್‌ ರಾಜ್‌ ಬಳಿ ಯೋಗಕ್ಷೇಮ ವಿಚಾರಿಸಿದ್ದು ಕೆಲಕಾಲ ಅಲ್ಲಿಯೇ ಇದ್ದು ನಾನಾ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಇತ್ತೀಚೆಗೆ ಚಿತ್ರರಂಗದ ಹಲವು ನಟ ನಟಿಯರು ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ಅವರ ಮನೆಗೆ ತೆರಳಿ ವಯೋಸಹಜ ಕಾರಣದಿಂದ ಹಾಸಿಗೆ ಹಿಡಿದಿರುವ ನಟಿಯ ಆರೋಗ್ಯ ವಿಚಾರಿಸುತ್ತಿದ್ದಾರೆ.ಕಳೆದ ಕೆಲ ದಿನಗಳ ಹಿಂದೆ ನಟ ಅರ್ಜುನ್‌ ಸರ್ಜಾ ಅವರು ಕೂಡ ಲೀಲಾವತಿಯವರ ಮನೆಗೆ ತೆರಳಿ ಯೋಗಕ್ಷೇಮ ವಿಚಾರಿಸಿದ್ದರು. ನೆನ್ನೆ ದರಶನ್‌ ಅವರು ಕೂಡ ಲೀಲಾವತಿಯವರನ್ನು ಭೇಟಿಯಾಗಿದ್ದಾರೆ.

ಕೆಲದಿನಗಳ ಹಿಂದೆ ಲೀಲಾವತಿಯವರು ನಿಧನರಾದರೆಂಬ ಸುಳ್ಳು ವದಂತಿಯನ್ನು ಹಬ್ಬಿಸಲಾಗಿತ್ತು. ಇದು ಅವರ ಪುತ್ರ ವಿನೋದ್‌ ರಾಜ್‌ ಅವರಿಗೆ ಬಹಳ ಬೇಸರ ತರಿಸಿತ್ತು. ಈ ಬಗ್ಗೆ ವಿನೋದ್‌ ರಾಜ್‌ ಅವರು ಸಂದರ್ಶನವೊಂದರಲ್ಲಿ ತಮ್ಮ ತಾಯಿಯ ಆರೋಗ್ಯದ ಬಗೆಗಿನ ಮಾಹಿತಿ ಹಂಚಿಕೊಂಡಿದ್ದರು. ಅಮ್ಮ ಆರೋಗ್ಯವಾಗಿದ್ದಾರೆ. ಅವರ ವಯಸ್ಸಿಗೆ ತಕ್ಕಂತೆ ಹೇಗೆ ಇರಬೇಕೋ ಹಾಗೆ ಇದ್ದಾರೆ ಅಮ್ಮ 86-87 ವಯಸ್ಸು ಮುಟ್ಟಿದ್ದಾರೆ. ಅವರ ಕಾಲದಲ್ಲಿ ಒಂದು ದಿನಕ್ಕೆ ನಾಲ್ಕು ಸಿನಿಮಾಗೆ ಪಾತ್ರ ಮಾಡಿದವರು. ಅಮ್ಮ ಒಟ್ಟು 650 ಸಿನಿಮಾಗಳಲ್ಲಿ ಅಭಿನಯ ಮಾಡಿದ್ದಾರೆ. ಜನ ಯಾಕೆ ಅಮ್ಮನ ಸಾವಿನ ಸುದ್ದಿ ಹಬ್ಬಿಸಿದ್ರು ಅನ್ನೋದನ್ನು ಮಂಜುನಾಥನಿಗೆ ಬಿಟ್ಟಿದ್ದೀವಿ. ಅವನೇ ನೋಡಿಕೊಳ್ಳಬೇಕು ಅಷ್ಟೇ ಎಂದು ಹೇಳಿದ್ದರು.
ನಟಿ ಲೀಲಾವತಿಯವರು ಕಳೆದ ಕೆಲ ವರ್ಷಗಳಿಂದ ವಯೋಸಹಜ ಅನಾರೋಗ್ಯದಿಂದ ತಮ್ಮ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ದಶಕಗಳಕಾಲ ಬಹುಬೇಡಿಕೆಯ ನಟಿಯಾಗಿ ಮಿಂಚಿದ್ದ ಲೀಲಾವತಿಯವರು ತಮ್ಮ ಅತ್ಯದ್ಭುತ ನಟನೆಯ ಮೂಲಕ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

lokesh

Recent Posts

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

8 mins ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

49 mins ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

1 hour ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

1 hour ago

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ ಜಿಐಎಸ್ ಆಧಾರಿತ ಆಪ್ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…

2 hours ago

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

6 hours ago