ಚಿತ್ರ ಮಂಜರಿ

ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಡಿ ಬಾಸ್‌

ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಹಿರಿಯ ನಟಿ ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.

ವಯೋಸಹಜ ಕಾರಣದಿಂದ ಹಾಸಿಗೆ ಹಿಡಿದಿರುವ ನಟಿ ಲೀಲಾವತಿ ಅವರ ಮನೆಗೆ ತರೆಳಿದ ದರ್ಶನ್‌ ಅವರು ಲೀಲಾವತಿಯವರ ಪುತ್ರ ವಿನೋದ್‌ ರಾಜ್‌ ಬಳಿ ಯೋಗಕ್ಷೇಮ ವಿಚಾರಿಸಿದ್ದು ಕೆಲಕಾಲ ಅಲ್ಲಿಯೇ ಇದ್ದು ನಾನಾ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಇತ್ತೀಚೆಗೆ ಚಿತ್ರರಂಗದ ಹಲವು ನಟ ನಟಿಯರು ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ಅವರ ಮನೆಗೆ ತೆರಳಿ ವಯೋಸಹಜ ಕಾರಣದಿಂದ ಹಾಸಿಗೆ ಹಿಡಿದಿರುವ ನಟಿಯ ಆರೋಗ್ಯ ವಿಚಾರಿಸುತ್ತಿದ್ದಾರೆ.ಕಳೆದ ಕೆಲ ದಿನಗಳ ಹಿಂದೆ ನಟ ಅರ್ಜುನ್‌ ಸರ್ಜಾ ಅವರು ಕೂಡ ಲೀಲಾವತಿಯವರ ಮನೆಗೆ ತೆರಳಿ ಯೋಗಕ್ಷೇಮ ವಿಚಾರಿಸಿದ್ದರು. ನೆನ್ನೆ ದರಶನ್‌ ಅವರು ಕೂಡ ಲೀಲಾವತಿಯವರನ್ನು ಭೇಟಿಯಾಗಿದ್ದಾರೆ.

ಕೆಲದಿನಗಳ ಹಿಂದೆ ಲೀಲಾವತಿಯವರು ನಿಧನರಾದರೆಂಬ ಸುಳ್ಳು ವದಂತಿಯನ್ನು ಹಬ್ಬಿಸಲಾಗಿತ್ತು. ಇದು ಅವರ ಪುತ್ರ ವಿನೋದ್‌ ರಾಜ್‌ ಅವರಿಗೆ ಬಹಳ ಬೇಸರ ತರಿಸಿತ್ತು. ಈ ಬಗ್ಗೆ ವಿನೋದ್‌ ರಾಜ್‌ ಅವರು ಸಂದರ್ಶನವೊಂದರಲ್ಲಿ ತಮ್ಮ ತಾಯಿಯ ಆರೋಗ್ಯದ ಬಗೆಗಿನ ಮಾಹಿತಿ ಹಂಚಿಕೊಂಡಿದ್ದರು. ಅಮ್ಮ ಆರೋಗ್ಯವಾಗಿದ್ದಾರೆ. ಅವರ ವಯಸ್ಸಿಗೆ ತಕ್ಕಂತೆ ಹೇಗೆ ಇರಬೇಕೋ ಹಾಗೆ ಇದ್ದಾರೆ ಅಮ್ಮ 86-87 ವಯಸ್ಸು ಮುಟ್ಟಿದ್ದಾರೆ. ಅವರ ಕಾಲದಲ್ಲಿ ಒಂದು ದಿನಕ್ಕೆ ನಾಲ್ಕು ಸಿನಿಮಾಗೆ ಪಾತ್ರ ಮಾಡಿದವರು. ಅಮ್ಮ ಒಟ್ಟು 650 ಸಿನಿಮಾಗಳಲ್ಲಿ ಅಭಿನಯ ಮಾಡಿದ್ದಾರೆ. ಜನ ಯಾಕೆ ಅಮ್ಮನ ಸಾವಿನ ಸುದ್ದಿ ಹಬ್ಬಿಸಿದ್ರು ಅನ್ನೋದನ್ನು ಮಂಜುನಾಥನಿಗೆ ಬಿಟ್ಟಿದ್ದೀವಿ. ಅವನೇ ನೋಡಿಕೊಳ್ಳಬೇಕು ಅಷ್ಟೇ ಎಂದು ಹೇಳಿದ್ದರು.
ನಟಿ ಲೀಲಾವತಿಯವರು ಕಳೆದ ಕೆಲ ವರ್ಷಗಳಿಂದ ವಯೋಸಹಜ ಅನಾರೋಗ್ಯದಿಂದ ತಮ್ಮ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ದಶಕಗಳಕಾಲ ಬಹುಬೇಡಿಕೆಯ ನಟಿಯಾಗಿ ಮಿಂಚಿದ್ದ ಲೀಲಾವತಿಯವರು ತಮ್ಮ ಅತ್ಯದ್ಭುತ ನಟನೆಯ ಮೂಲಕ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

lokesh

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

11 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

12 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

13 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

14 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

14 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

15 hours ago