ಚಿತ್ರ ಮಂಜರಿ

ಡಾಲಿ ಧನಂಜಯ ಅಭಿನಯದ ‘ಹೆಡ್‌ ಬುಷ್‌’ ಸಿನಿಮಾದ ಟ್ರೈಲರ್‌ ಬಿಡುಗಡೆ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ‘ಡಾಲಿ’ ಧನಂಜಯ್‌ ಅಭಿನಯದ ‘ಹೆಡ್‌ ಬುಷ್‌’ ಸಿನಿಮಾದ ಅಧಿಕೃತ ಟ್ರೈಲರ್‌ ಭಾನುವಾರ ಬಿಡುಗಡೆಯಾಗಿದೆ.

‘ಹೆಡ್‌ ಬುಷ್‌’ ಸಿನಿಮಾ ಪತ್ರಕರ್ತ ಅಗ್ನಿ ಶ್ರೀಧರ್‌ ಅವರ ಆತ್ಮಕಥೆ ‘ದಾದಾಗಿರಿಯ ಆ ದಿನಗಳು’ ಕೃತಿಯನ್ನು ಆಧರಿಸಿದ್ದಾಗಿದೆ. ಬೆಂಗಳೂರಿನ ಭೂಗತ ದೊರೆ ಎಂ.ಪಿ ಜಯರಾಜ್‌ ಪಾತ್ರವನ್ನು ಧನಂಜಯ್‌ ಅವರು ನಿಭಾಯಿಸಿದ್ದಾರೆ. ಚಿತ್ರವನ್ನು ಶೂನ್ಯ ಅವರು ನಿರ್ದೇಶಿಸಿದ್ದಾರೆ.

ಸ್ವತಃ ಅಗ್ನಿ ಶ್ರೀಧರ್ ಅವರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಮುಂದುವರಿದು ನೋಡುವುದಾದರೆ 1970ರ ಬೆಂಗಳೂರಿನ ಭೂಗತ ಜಗತ್ತನ್ನು ಚಿತ್ರದಲ್ಲಿ ತೋರಿಸಲಾಗಿದೆ. ‘ಡಾಲಿ’ ಧನಂಜಯ, ಪಾಯಲ್ ರಜಪೂತ್, ಕ್ರೇಜಿಸ್ಟಾರ್ ರವಿಚಂದ್ರ, ‘ಲೂಸ್ ಮಾದ’ ಯೋಗಿ, ವಸಿಷ್ಠ ಎನ್ ಸಿಂಹ, ಡೈನಾಮಿಕ್ ಸ್ಟಾರ್ ದೇವರಾಜ್, ಶೃತಿ ಹರಿಹರನ್, ರಘು ಮುಖರ್ಜಿ, ಬಾಲು ನಾಗೇಂದ್ರ ಹೀಗೆ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.

ಡಾಲಿ ಪಿಕ್ಚರ್ಸ್ ಹಾಗೂ ಸೋಮಣ್ಣ ಟಾಕೀಸ್ ಲಾಂಛನದಲ್ಲಿ ಡಾಲಿ ಧನಂಜಯ ಹಾಗೂ ರಾಮ್ಕೊ ಸೋಮಣ್ಣ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಚಿತ್ರದ ಬಿಡುಗಡೆಗೆ ತಡೆ ಕೋರಿ ಎಂ.ಪಿ ಜಯರಾಜ್‌ ಪುತ್ರ ಅಜಿತ್‌ ಜಯರಾಜ್‌ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ಕೊಟ್ಟಿದ್ದರಾದರೂ, ಅದೆಲ್ಲವನ್ನೂ ಮೀರಿ ಇಂದು ಚಿತ್ರದ ಬಿಡುಗಡೆಯಾಗಿದೆ. ಟ್ರೈಲರ್‌‌ಗೆ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಸ್ಪಂದನೆ ಸಿಕ್ಕಿದೆ.

ಸಿನಿಮಾ ಅಕ್ಟೋಬರ್‌ 21ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ .

 

andolanait

Recent Posts

ಟ್ರೆಂಡ್‌ ಸೃಷ್ಟಿಸಿದ ಕಾಕ್ರೋಚ್‌ ಜನತಾ ಪಾರ್ಟಿ ; ಚಳವಳಿಯಾಗಿ ಬದಲಾದ ಸಿಜೆಪಿ

ಹೊಸದಿಲ್ಲಿ : ಜೆನ್‌ಝೀಗಳ ನೆಚ್ಚಿನ ತಾಣವಾಗಿರುವ ಇನ್‌ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ…

40 mins ago

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

5 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

7 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

15 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

17 hours ago