ಚಿತ್ರ ಮಂಜರಿ

ಡಾಲಿ ಧನಂಜಯ ಅಭಿನಯದ ‘ಹೆಡ್‌ ಬುಷ್‌’ ಸಿನಿಮಾದ ಟ್ರೈಲರ್‌ ಬಿಡುಗಡೆ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ‘ಡಾಲಿ’ ಧನಂಜಯ್‌ ಅಭಿನಯದ ‘ಹೆಡ್‌ ಬುಷ್‌’ ಸಿನಿಮಾದ ಅಧಿಕೃತ ಟ್ರೈಲರ್‌ ಭಾನುವಾರ ಬಿಡುಗಡೆಯಾಗಿದೆ.

‘ಹೆಡ್‌ ಬುಷ್‌’ ಸಿನಿಮಾ ಪತ್ರಕರ್ತ ಅಗ್ನಿ ಶ್ರೀಧರ್‌ ಅವರ ಆತ್ಮಕಥೆ ‘ದಾದಾಗಿರಿಯ ಆ ದಿನಗಳು’ ಕೃತಿಯನ್ನು ಆಧರಿಸಿದ್ದಾಗಿದೆ. ಬೆಂಗಳೂರಿನ ಭೂಗತ ದೊರೆ ಎಂ.ಪಿ ಜಯರಾಜ್‌ ಪಾತ್ರವನ್ನು ಧನಂಜಯ್‌ ಅವರು ನಿಭಾಯಿಸಿದ್ದಾರೆ. ಚಿತ್ರವನ್ನು ಶೂನ್ಯ ಅವರು ನಿರ್ದೇಶಿಸಿದ್ದಾರೆ.

ಸ್ವತಃ ಅಗ್ನಿ ಶ್ರೀಧರ್ ಅವರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಮುಂದುವರಿದು ನೋಡುವುದಾದರೆ 1970ರ ಬೆಂಗಳೂರಿನ ಭೂಗತ ಜಗತ್ತನ್ನು ಚಿತ್ರದಲ್ಲಿ ತೋರಿಸಲಾಗಿದೆ. ‘ಡಾಲಿ’ ಧನಂಜಯ, ಪಾಯಲ್ ರಜಪೂತ್, ಕ್ರೇಜಿಸ್ಟಾರ್ ರವಿಚಂದ್ರ, ‘ಲೂಸ್ ಮಾದ’ ಯೋಗಿ, ವಸಿಷ್ಠ ಎನ್ ಸಿಂಹ, ಡೈನಾಮಿಕ್ ಸ್ಟಾರ್ ದೇವರಾಜ್, ಶೃತಿ ಹರಿಹರನ್, ರಘು ಮುಖರ್ಜಿ, ಬಾಲು ನಾಗೇಂದ್ರ ಹೀಗೆ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.

ಡಾಲಿ ಪಿಕ್ಚರ್ಸ್ ಹಾಗೂ ಸೋಮಣ್ಣ ಟಾಕೀಸ್ ಲಾಂಛನದಲ್ಲಿ ಡಾಲಿ ಧನಂಜಯ ಹಾಗೂ ರಾಮ್ಕೊ ಸೋಮಣ್ಣ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಚಿತ್ರದ ಬಿಡುಗಡೆಗೆ ತಡೆ ಕೋರಿ ಎಂ.ಪಿ ಜಯರಾಜ್‌ ಪುತ್ರ ಅಜಿತ್‌ ಜಯರಾಜ್‌ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ಕೊಟ್ಟಿದ್ದರಾದರೂ, ಅದೆಲ್ಲವನ್ನೂ ಮೀರಿ ಇಂದು ಚಿತ್ರದ ಬಿಡುಗಡೆಯಾಗಿದೆ. ಟ್ರೈಲರ್‌‌ಗೆ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಸ್ಪಂದನೆ ಸಿಕ್ಕಿದೆ.

ಸಿನಿಮಾ ಅಕ್ಟೋಬರ್‌ 21ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ .

 

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

6 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

8 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

16 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

16 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

16 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

16 hours ago