ಚಿತ್ರ ಮಂಜರಿ

ಡಾಲಿ ಧನಂಜಯ ಅಭಿನಯದ ‘ಹೆಡ್‌ ಬುಷ್‌’ ಸಿನಿಮಾದ ಟ್ರೈಲರ್‌ ಬಿಡುಗಡೆ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ‘ಡಾಲಿ’ ಧನಂಜಯ್‌ ಅಭಿನಯದ ‘ಹೆಡ್‌ ಬುಷ್‌’ ಸಿನಿಮಾದ ಅಧಿಕೃತ ಟ್ರೈಲರ್‌ ಭಾನುವಾರ ಬಿಡುಗಡೆಯಾಗಿದೆ.

‘ಹೆಡ್‌ ಬುಷ್‌’ ಸಿನಿಮಾ ಪತ್ರಕರ್ತ ಅಗ್ನಿ ಶ್ರೀಧರ್‌ ಅವರ ಆತ್ಮಕಥೆ ‘ದಾದಾಗಿರಿಯ ಆ ದಿನಗಳು’ ಕೃತಿಯನ್ನು ಆಧರಿಸಿದ್ದಾಗಿದೆ. ಬೆಂಗಳೂರಿನ ಭೂಗತ ದೊರೆ ಎಂ.ಪಿ ಜಯರಾಜ್‌ ಪಾತ್ರವನ್ನು ಧನಂಜಯ್‌ ಅವರು ನಿಭಾಯಿಸಿದ್ದಾರೆ. ಚಿತ್ರವನ್ನು ಶೂನ್ಯ ಅವರು ನಿರ್ದೇಶಿಸಿದ್ದಾರೆ.

ಸ್ವತಃ ಅಗ್ನಿ ಶ್ರೀಧರ್ ಅವರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಮುಂದುವರಿದು ನೋಡುವುದಾದರೆ 1970ರ ಬೆಂಗಳೂರಿನ ಭೂಗತ ಜಗತ್ತನ್ನು ಚಿತ್ರದಲ್ಲಿ ತೋರಿಸಲಾಗಿದೆ. ‘ಡಾಲಿ’ ಧನಂಜಯ, ಪಾಯಲ್ ರಜಪೂತ್, ಕ್ರೇಜಿಸ್ಟಾರ್ ರವಿಚಂದ್ರ, ‘ಲೂಸ್ ಮಾದ’ ಯೋಗಿ, ವಸಿಷ್ಠ ಎನ್ ಸಿಂಹ, ಡೈನಾಮಿಕ್ ಸ್ಟಾರ್ ದೇವರಾಜ್, ಶೃತಿ ಹರಿಹರನ್, ರಘು ಮುಖರ್ಜಿ, ಬಾಲು ನಾಗೇಂದ್ರ ಹೀಗೆ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.

ಡಾಲಿ ಪಿಕ್ಚರ್ಸ್ ಹಾಗೂ ಸೋಮಣ್ಣ ಟಾಕೀಸ್ ಲಾಂಛನದಲ್ಲಿ ಡಾಲಿ ಧನಂಜಯ ಹಾಗೂ ರಾಮ್ಕೊ ಸೋಮಣ್ಣ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಚಿತ್ರದ ಬಿಡುಗಡೆಗೆ ತಡೆ ಕೋರಿ ಎಂ.ಪಿ ಜಯರಾಜ್‌ ಪುತ್ರ ಅಜಿತ್‌ ಜಯರಾಜ್‌ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ಕೊಟ್ಟಿದ್ದರಾದರೂ, ಅದೆಲ್ಲವನ್ನೂ ಮೀರಿ ಇಂದು ಚಿತ್ರದ ಬಿಡುಗಡೆಯಾಗಿದೆ. ಟ್ರೈಲರ್‌‌ಗೆ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಸ್ಪಂದನೆ ಸಿಕ್ಕಿದೆ.

ಸಿನಿಮಾ ಅಕ್ಟೋಬರ್‌ 21ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ .

 

andolanait

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

2 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

2 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

2 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

2 hours ago

ಅಕ್ರಮ ಮದ್ಯ ಮಾರಾಟ: ಕಡಿವಾಣ ಕಾರ್ಯಾಚರಣೆ

ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್‌ನಲ್ಲಿ ನಡೆದ…

2 hours ago

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

4 hours ago