ಚಿತ್ರ ಮಂಜರಿ

ಆಶಾ ಪಾರೇಖ್‌ಗೆ ದಾದಾ ಸಾಹೇಬ್ ಫಾಲ್ಕೆ ಗರಿ

ಹೊಸದಿಲ್ಲಿ: ‘ದಿಲ್ ದೇಕೆ ದೇಖೋ’ ಖ್ಯಾತಿಯ ಬಾಲಿವುಡ್‌ನ ಹಿರಿಯ ನಟಿ, ನಿರ್ಮಾಪಕಿ ಆಶಾ ಪಾರೇಖ್ ೨೦೨೦ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಆಶಾ ಬೋಸ್ಲೆ, ಹೇಮಾ ಮಾಲಿನಿ, ಪೂನಂ ಧಿಲ್ಲೋನ್, ಉದಿತ್ ನಾರಾಯಣ್ ಮತ್ತು ಟಿ.ಎಸ್.ನಾಗಾಭರಣ ಅವರನ್ನು ಒಳಗೊಂಡ ಆಯ್ಕೆ ಸಮಿತಿ ಭಾರತೀಯ ಚಿತ್ರರಂಗದಲ್ಲಿನ ಸಾಧನೆಗೆ ನೀಡಲಾಗುವ ಅತ್ಯುನ್ನತ ಪ್ರಶಸ್ತಿಯನ್ನು ೭೯ರ ಹರೆಯದ ಪಾರೇಖ್‌ಗೆ ನೀಡಲು ತೀರ್ಮಾನ ಮಾಡಿದೆ.
೬೮ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಗೌರವ ನೀಡಲಾಗುವುದು’ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮಂಗಳವಾರ ಹೇಳಿದ್ದಾರೆ.

ಸಂಕ್ಷಿಪ್ತ ಪರಿಚಯ
೧೯೫೦ರ ದಶಕದಲ್ಲಿ ಬಾಲ ನಟಿಯಾಗಿ ಬಾಲಿವುಡ್‌ಗೆ ಕಾಲಿಟ್ಟ ಪಾರೇಖ್, ೧೯೬೦-೭೦ರ ದಶಕದಲ್ಲಿ ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡಿದ ಯಶಸ್ವಿ ತಾರೆ. ೧೯೫೨ರಲ್ಲಿ ‘ಆಸ್ಮಾನ್’ ಚಿತ್ರದ ಮೂಲಕ ತಮ್ಮ ೧೦ನೇ ವಯಸ್ಸಿನಿಂದಲೇ ನಟನೆ ಆರಂಭಿಸಿದ ಅವರು, ಇಲ್ಲಿವರೆಗೆ ೯೫ಕ್ಕೂ ಹೆಚ್ಚು ಚಿತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ೧೯೫೪ರಲ್ಲಿ ಬಿಮಲ್ ರಾಯ್ ಅವರ ‘ಬಾಪ್ ಬೇಟಿ’ ಚಿತ್ರದ ಮೂಲಕ ಆಶಾ ಹಿಂದಿ ಚಿತ್ರರಂಗದಲ್ಲಿ ಚಿರಪರಿಚಿತರಾದರು.

೧೯೫೯ರಲ್ಲಿ ಅಂದಿನ ಸೂಪರ್ ಸ್ಟಾರ್ ಶಮ್ಮಿ ಕಪೂರ್ಗೆ ಜೊತೆಯಾಗಿ ನಾಸೀರ್ ಹುಸೈನ್ ಅವರ ‘ದಿಲ್ ದೇಕೆ ದೇಖೋ’ ಚಿತ್ರದಲ್ಲಿ ನಾಯಕಿಯಾಗಿ ಬಡ್ತಿ ಪಡೆದು, ಮೊದಲ ಚಿತ್ರದಲ್ಲಿಯೇ ಪ್ರೇಕ್ಷಕರ ಮನ ಗೆದ್ದರು. ’ಕಟಿ ಪತಂಗ್, ತೀಸ್ರಿ ಮಂಜಿಲ್, ಬಹರೋನ್ ಖೆ ಸಪ್ನೆ, ಪ್ಯಾರ್ ಕಾ ಮೌಸಂ’ ಮೊದಲಾದ ಚಿತ್ರಗಳ ಮೂಲಕ ಹಿಂದಿ ಚಿತ್ರರಂಗದಲ್ಲಿನ ಅತ್ಯಂತ ಪ್ರಭಾವಶಾಲಿ ನಟಿಯಾಗಿ ಹೊರಹೊಮ್ಮಿದರು.

ನಿರ್ಮಾಪಕಿ, ನಿರ್ದೇಶಕಿಯಾಗಿಯೂ ಗುರುತಿಸಿಕೊಂಡ ಪಾರೇಖ್, ೧೯೯೦ರಲ್ಲಿ ‘ಕೋರ ಕಾಗಜ್‘ ಎಂಬ ಟಿವಿ ಧಾರವಾಹಿಯಲ್ಲಿಯೂ ಕಾಣಿಸಿಕೊಂಡರು.
ಪ್ರಶಸ್ತಿಗಳು: ೧೯೯೨ರಲ್ಲಿ ಪದ್ಮಶ್ರೀ, ಪಡೆದ ಅವರು ೧೯೯೮?೨೦೦೧ರ ವರೆಗೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ(ಸಿಬಿಎಫ್ಸಿ)ಅಧ್ಯಕ್ಷರಾಗಿದ್ದರು. ಸೂಪರ್ಸ್ಟಾರ್ ರಜನಿಕಾಂತ್ ೨೦೧೯ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದಿದ್ದರು.

andolana

Recent Posts

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

10 mins ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

42 mins ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

1 hour ago

ಭಾರತ್‌ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…

2 hours ago

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಮಂಡ್ಯ ರಮೇಶ್, ಸಾಧು ಕೋಕಿಲಾ ಕೇಸ್‌ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…

2 hours ago

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ…

6 hours ago