ಚಿತ್ರ ಮಂಜರಿ

ಆಶಾ ಪಾರೇಖ್‌ಗೆ ದಾದಾ ಸಾಹೇಬ್ ಫಾಲ್ಕೆ ಗರಿ

ಹೊಸದಿಲ್ಲಿ: ‘ದಿಲ್ ದೇಕೆ ದೇಖೋ’ ಖ್ಯಾತಿಯ ಬಾಲಿವುಡ್‌ನ ಹಿರಿಯ ನಟಿ, ನಿರ್ಮಾಪಕಿ ಆಶಾ ಪಾರೇಖ್ ೨೦೨೦ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಆಶಾ ಬೋಸ್ಲೆ, ಹೇಮಾ ಮಾಲಿನಿ, ಪೂನಂ ಧಿಲ್ಲೋನ್, ಉದಿತ್ ನಾರಾಯಣ್ ಮತ್ತು ಟಿ.ಎಸ್.ನಾಗಾಭರಣ ಅವರನ್ನು ಒಳಗೊಂಡ ಆಯ್ಕೆ ಸಮಿತಿ ಭಾರತೀಯ ಚಿತ್ರರಂಗದಲ್ಲಿನ ಸಾಧನೆಗೆ ನೀಡಲಾಗುವ ಅತ್ಯುನ್ನತ ಪ್ರಶಸ್ತಿಯನ್ನು ೭೯ರ ಹರೆಯದ ಪಾರೇಖ್‌ಗೆ ನೀಡಲು ತೀರ್ಮಾನ ಮಾಡಿದೆ.
೬೮ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಗೌರವ ನೀಡಲಾಗುವುದು’ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮಂಗಳವಾರ ಹೇಳಿದ್ದಾರೆ.

ಸಂಕ್ಷಿಪ್ತ ಪರಿಚಯ
೧೯೫೦ರ ದಶಕದಲ್ಲಿ ಬಾಲ ನಟಿಯಾಗಿ ಬಾಲಿವುಡ್‌ಗೆ ಕಾಲಿಟ್ಟ ಪಾರೇಖ್, ೧೯೬೦-೭೦ರ ದಶಕದಲ್ಲಿ ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡಿದ ಯಶಸ್ವಿ ತಾರೆ. ೧೯೫೨ರಲ್ಲಿ ‘ಆಸ್ಮಾನ್’ ಚಿತ್ರದ ಮೂಲಕ ತಮ್ಮ ೧೦ನೇ ವಯಸ್ಸಿನಿಂದಲೇ ನಟನೆ ಆರಂಭಿಸಿದ ಅವರು, ಇಲ್ಲಿವರೆಗೆ ೯೫ಕ್ಕೂ ಹೆಚ್ಚು ಚಿತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ೧೯೫೪ರಲ್ಲಿ ಬಿಮಲ್ ರಾಯ್ ಅವರ ‘ಬಾಪ್ ಬೇಟಿ’ ಚಿತ್ರದ ಮೂಲಕ ಆಶಾ ಹಿಂದಿ ಚಿತ್ರರಂಗದಲ್ಲಿ ಚಿರಪರಿಚಿತರಾದರು.

೧೯೫೯ರಲ್ಲಿ ಅಂದಿನ ಸೂಪರ್ ಸ್ಟಾರ್ ಶಮ್ಮಿ ಕಪೂರ್ಗೆ ಜೊತೆಯಾಗಿ ನಾಸೀರ್ ಹುಸೈನ್ ಅವರ ‘ದಿಲ್ ದೇಕೆ ದೇಖೋ’ ಚಿತ್ರದಲ್ಲಿ ನಾಯಕಿಯಾಗಿ ಬಡ್ತಿ ಪಡೆದು, ಮೊದಲ ಚಿತ್ರದಲ್ಲಿಯೇ ಪ್ರೇಕ್ಷಕರ ಮನ ಗೆದ್ದರು. ’ಕಟಿ ಪತಂಗ್, ತೀಸ್ರಿ ಮಂಜಿಲ್, ಬಹರೋನ್ ಖೆ ಸಪ್ನೆ, ಪ್ಯಾರ್ ಕಾ ಮೌಸಂ’ ಮೊದಲಾದ ಚಿತ್ರಗಳ ಮೂಲಕ ಹಿಂದಿ ಚಿತ್ರರಂಗದಲ್ಲಿನ ಅತ್ಯಂತ ಪ್ರಭಾವಶಾಲಿ ನಟಿಯಾಗಿ ಹೊರಹೊಮ್ಮಿದರು.

ನಿರ್ಮಾಪಕಿ, ನಿರ್ದೇಶಕಿಯಾಗಿಯೂ ಗುರುತಿಸಿಕೊಂಡ ಪಾರೇಖ್, ೧೯೯೦ರಲ್ಲಿ ‘ಕೋರ ಕಾಗಜ್‘ ಎಂಬ ಟಿವಿ ಧಾರವಾಹಿಯಲ್ಲಿಯೂ ಕಾಣಿಸಿಕೊಂಡರು.
ಪ್ರಶಸ್ತಿಗಳು: ೧೯೯೨ರಲ್ಲಿ ಪದ್ಮಶ್ರೀ, ಪಡೆದ ಅವರು ೧೯೯೮?೨೦೦೧ರ ವರೆಗೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ(ಸಿಬಿಎಫ್ಸಿ)ಅಧ್ಯಕ್ಷರಾಗಿದ್ದರು. ಸೂಪರ್ಸ್ಟಾರ್ ರಜನಿಕಾಂತ್ ೨೦೧೯ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದಿದ್ದರು.

andolana

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

11 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

13 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

14 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

14 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

15 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

17 hours ago