ಚಿತ್ರ ಮಂಜರಿ

ಆಶಾ ಪಾರೇಖ್‌ಗೆ ದಾದಾ ಸಾಹೇಬ್ ಫಾಲ್ಕೆ ಗರಿ

ಹೊಸದಿಲ್ಲಿ: ‘ದಿಲ್ ದೇಕೆ ದೇಖೋ’ ಖ್ಯಾತಿಯ ಬಾಲಿವುಡ್‌ನ ಹಿರಿಯ ನಟಿ, ನಿರ್ಮಾಪಕಿ ಆಶಾ ಪಾರೇಖ್ ೨೦೨೦ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಆಶಾ ಬೋಸ್ಲೆ, ಹೇಮಾ ಮಾಲಿನಿ, ಪೂನಂ ಧಿಲ್ಲೋನ್, ಉದಿತ್ ನಾರಾಯಣ್ ಮತ್ತು ಟಿ.ಎಸ್.ನಾಗಾಭರಣ ಅವರನ್ನು ಒಳಗೊಂಡ ಆಯ್ಕೆ ಸಮಿತಿ ಭಾರತೀಯ ಚಿತ್ರರಂಗದಲ್ಲಿನ ಸಾಧನೆಗೆ ನೀಡಲಾಗುವ ಅತ್ಯುನ್ನತ ಪ್ರಶಸ್ತಿಯನ್ನು ೭೯ರ ಹರೆಯದ ಪಾರೇಖ್‌ಗೆ ನೀಡಲು ತೀರ್ಮಾನ ಮಾಡಿದೆ.
೬೮ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಗೌರವ ನೀಡಲಾಗುವುದು’ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮಂಗಳವಾರ ಹೇಳಿದ್ದಾರೆ.

ಸಂಕ್ಷಿಪ್ತ ಪರಿಚಯ
೧೯೫೦ರ ದಶಕದಲ್ಲಿ ಬಾಲ ನಟಿಯಾಗಿ ಬಾಲಿವುಡ್‌ಗೆ ಕಾಲಿಟ್ಟ ಪಾರೇಖ್, ೧೯೬೦-೭೦ರ ದಶಕದಲ್ಲಿ ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡಿದ ಯಶಸ್ವಿ ತಾರೆ. ೧೯೫೨ರಲ್ಲಿ ‘ಆಸ್ಮಾನ್’ ಚಿತ್ರದ ಮೂಲಕ ತಮ್ಮ ೧೦ನೇ ವಯಸ್ಸಿನಿಂದಲೇ ನಟನೆ ಆರಂಭಿಸಿದ ಅವರು, ಇಲ್ಲಿವರೆಗೆ ೯೫ಕ್ಕೂ ಹೆಚ್ಚು ಚಿತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ೧೯೫೪ರಲ್ಲಿ ಬಿಮಲ್ ರಾಯ್ ಅವರ ‘ಬಾಪ್ ಬೇಟಿ’ ಚಿತ್ರದ ಮೂಲಕ ಆಶಾ ಹಿಂದಿ ಚಿತ್ರರಂಗದಲ್ಲಿ ಚಿರಪರಿಚಿತರಾದರು.

೧೯೫೯ರಲ್ಲಿ ಅಂದಿನ ಸೂಪರ್ ಸ್ಟಾರ್ ಶಮ್ಮಿ ಕಪೂರ್ಗೆ ಜೊತೆಯಾಗಿ ನಾಸೀರ್ ಹುಸೈನ್ ಅವರ ‘ದಿಲ್ ದೇಕೆ ದೇಖೋ’ ಚಿತ್ರದಲ್ಲಿ ನಾಯಕಿಯಾಗಿ ಬಡ್ತಿ ಪಡೆದು, ಮೊದಲ ಚಿತ್ರದಲ್ಲಿಯೇ ಪ್ರೇಕ್ಷಕರ ಮನ ಗೆದ್ದರು. ’ಕಟಿ ಪತಂಗ್, ತೀಸ್ರಿ ಮಂಜಿಲ್, ಬಹರೋನ್ ಖೆ ಸಪ್ನೆ, ಪ್ಯಾರ್ ಕಾ ಮೌಸಂ’ ಮೊದಲಾದ ಚಿತ್ರಗಳ ಮೂಲಕ ಹಿಂದಿ ಚಿತ್ರರಂಗದಲ್ಲಿನ ಅತ್ಯಂತ ಪ್ರಭಾವಶಾಲಿ ನಟಿಯಾಗಿ ಹೊರಹೊಮ್ಮಿದರು.

ನಿರ್ಮಾಪಕಿ, ನಿರ್ದೇಶಕಿಯಾಗಿಯೂ ಗುರುತಿಸಿಕೊಂಡ ಪಾರೇಖ್, ೧೯೯೦ರಲ್ಲಿ ‘ಕೋರ ಕಾಗಜ್‘ ಎಂಬ ಟಿವಿ ಧಾರವಾಹಿಯಲ್ಲಿಯೂ ಕಾಣಿಸಿಕೊಂಡರು.
ಪ್ರಶಸ್ತಿಗಳು: ೧೯೯೨ರಲ್ಲಿ ಪದ್ಮಶ್ರೀ, ಪಡೆದ ಅವರು ೧೯೯೮?೨೦೦೧ರ ವರೆಗೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ(ಸಿಬಿಎಫ್ಸಿ)ಅಧ್ಯಕ್ಷರಾಗಿದ್ದರು. ಸೂಪರ್ಸ್ಟಾರ್ ರಜನಿಕಾಂತ್ ೨೦೧೯ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದಿದ್ದರು.

andolana

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

1 hour ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

1 hour ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

1 hour ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

1 hour ago