ಚಿತ್ರ ಮಂಜರಿ

‘ಧರಣಿ ಮಂಡಲ ಮಧ್ಯದೊಳಗೆ’ ಚಿತ್ರದ ಟ್ರೇಲರ್ ಬಿಡುಗಡೆ

ಟೀಸರ್, ಹಾಡುಗಳ ಮೂಲಕ ಪ್ರೇಕ್ಷಕರ ಮನದಲ್ಲಿ ಭರವಸೆಯ ಮುದ್ರೆ ಒತ್ತಿರುವ ‘ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್ ರನ್ನು ಡಿಜಿಟಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ವೇದಿಕೆಯಲ್ಲಿ ನಾಯಕ ನಟ ವಸಿಷ್ಠ ಸಿಂಹ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಡಿಸೆಂಬರ್ 2ರಂದು ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಟ್ರೇಲರ್ ಹೊತ್ತು ಬಂದ ಸಿನಿಮಾ ತಂಡ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ಸಿನಿಮಾದ ಕ್ಯೂರಿಯಾಸಿಟಿ ಹೊತ್ತ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಪ್ರಾಮಿಸಿಂಗ್ ಆಗಿದ್ದು ಭರವಸೆ ಮೂಡಿಸಿದೆ. ಗುಲ್ಟು ಖ್ಯಾತಿಯ ನಟ ನವೀನ್ ಶಂಕರ್, ಐಶಾನಿ ಶೆಟ್ಟಿ ನಟಿಸಿರುವ ಈ ಚಿತ್ರವನ್ನು ಶ್ರೀಧರ್ ಶಿಕಾರಿಪುರ ನಿರ್ದೇಶನ ಮಾಡಿದ್ದಾರೆ.

ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ನಟ ವಸಿಷ್ಠ ಸಿಂಹ ಚಿತ್ರದಲ್ಲಿ ಪ್ರತಿಯೊಂದು ಅಂಶಗಳು ಕೂಡ ಗಮನ ಸೆಳೆಯುತ್ತಿದೆ. ಯಂಗ್ ಟೀಂ ಸೇರಿಕೊಂಡು ಇಷ್ಟು ಒಳ್ಳೆಯ ಸಿನಿಮಾವನ್ನು ಕಟ್ಟಿಕೊಟ್ಟಿದೆ ಅಂದ್ರೆ ತುಂಬಾ ಖುಷಿಯ ವಿಚಾರ. ಟ್ರೇಲರ್ ಬಹಳಾನೇ ಖುಷಿ ಕೊಡ್ತು. ಮ್ಯೂಸಿಕ್, ಡೈಲಾಗ್, ಕ್ಯಾಮೆರಾ ವರ್ಕ್ ತುಂಬಾನೇ ಚೆನ್ನಾಗಿ ಮೂಡಿ ಬಂದಿದೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದ್ರು. ಚಿತ್ರದ ನಿರ್ದೇಶಕ ಶ್ರೀಧರ್ ಶಿಕಾರಿಪುರ ಮಾತನಾಡಿ ಇದು ನನ್ನ ನಿರ್ದೇಶನದ ಮೊದಲ ಸಿನಿಮಾ. ನಮ್ಮ ಸುತ್ತಮುತ್ತ ಇರುವವರ ಕಥೆಯೇ ಧರಣಿ ಮಂಡಲ ಮಧ್ಯದೊಳಗೆ ಸಿನಿಮಾ. ಹೈಪರ್ ಲಿಂಕ್ ಶೈಲಿಯ ಕ್ರೈಂ ಡ್ರಾಮಾ ಕಥಾಹಂದರದ ಸಿನಿಮಾವಿದು. ಬಾಕ್ಸಿಂಗ್ ನಲ್ಲಿ ಅಪಾರ ಆಸಕ್ತಿ ಇರುವ ಹುಡುಗನ ಬದುಕಿನಲ್ಲಿ ನಡೆಯುವ ಘಟನೆಗಳ ಸುತ್ತ ಹೆಣೆಯಲಾದ ಕಥೆ ಚಿತ್ರದಲ್ಲಿದೆ. ಪ್ರೀತಿ, ಸೆಂಟಿಮೆಂಟ್ ಎಳೆಯನ್ನೂ ಹೊತ್ತ ಈ ಚಿತ್ರ ಖಂಡಿತ ಪ್ರೇಕ್ಷಕರಿಗೆ ಮನರಂಜನೆ ನೀಡಲಿದೆ ಎಂದು ತಿಳಿಸಿದ್ದಾರೆ.

andolanait

Recent Posts

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

1 hour ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

1 hour ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

2 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

3 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

4 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

4 hours ago