ಚಿತ್ರ ಮಂಜರಿ

‘ಧರಣಿ ಮಂಡಲ ಮಧ್ಯದೊಳಗೆ’ ಚಿತ್ರದ ಟ್ರೇಲರ್ ಬಿಡುಗಡೆ

ಟೀಸರ್, ಹಾಡುಗಳ ಮೂಲಕ ಪ್ರೇಕ್ಷಕರ ಮನದಲ್ಲಿ ಭರವಸೆಯ ಮುದ್ರೆ ಒತ್ತಿರುವ ‘ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್ ರನ್ನು ಡಿಜಿಟಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ವೇದಿಕೆಯಲ್ಲಿ ನಾಯಕ ನಟ ವಸಿಷ್ಠ ಸಿಂಹ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಡಿಸೆಂಬರ್ 2ರಂದು ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಟ್ರೇಲರ್ ಹೊತ್ತು ಬಂದ ಸಿನಿಮಾ ತಂಡ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ಸಿನಿಮಾದ ಕ್ಯೂರಿಯಾಸಿಟಿ ಹೊತ್ತ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಪ್ರಾಮಿಸಿಂಗ್ ಆಗಿದ್ದು ಭರವಸೆ ಮೂಡಿಸಿದೆ. ಗುಲ್ಟು ಖ್ಯಾತಿಯ ನಟ ನವೀನ್ ಶಂಕರ್, ಐಶಾನಿ ಶೆಟ್ಟಿ ನಟಿಸಿರುವ ಈ ಚಿತ್ರವನ್ನು ಶ್ರೀಧರ್ ಶಿಕಾರಿಪುರ ನಿರ್ದೇಶನ ಮಾಡಿದ್ದಾರೆ.

ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ನಟ ವಸಿಷ್ಠ ಸಿಂಹ ಚಿತ್ರದಲ್ಲಿ ಪ್ರತಿಯೊಂದು ಅಂಶಗಳು ಕೂಡ ಗಮನ ಸೆಳೆಯುತ್ತಿದೆ. ಯಂಗ್ ಟೀಂ ಸೇರಿಕೊಂಡು ಇಷ್ಟು ಒಳ್ಳೆಯ ಸಿನಿಮಾವನ್ನು ಕಟ್ಟಿಕೊಟ್ಟಿದೆ ಅಂದ್ರೆ ತುಂಬಾ ಖುಷಿಯ ವಿಚಾರ. ಟ್ರೇಲರ್ ಬಹಳಾನೇ ಖುಷಿ ಕೊಡ್ತು. ಮ್ಯೂಸಿಕ್, ಡೈಲಾಗ್, ಕ್ಯಾಮೆರಾ ವರ್ಕ್ ತುಂಬಾನೇ ಚೆನ್ನಾಗಿ ಮೂಡಿ ಬಂದಿದೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದ್ರು. ಚಿತ್ರದ ನಿರ್ದೇಶಕ ಶ್ರೀಧರ್ ಶಿಕಾರಿಪುರ ಮಾತನಾಡಿ ಇದು ನನ್ನ ನಿರ್ದೇಶನದ ಮೊದಲ ಸಿನಿಮಾ. ನಮ್ಮ ಸುತ್ತಮುತ್ತ ಇರುವವರ ಕಥೆಯೇ ಧರಣಿ ಮಂಡಲ ಮಧ್ಯದೊಳಗೆ ಸಿನಿಮಾ. ಹೈಪರ್ ಲಿಂಕ್ ಶೈಲಿಯ ಕ್ರೈಂ ಡ್ರಾಮಾ ಕಥಾಹಂದರದ ಸಿನಿಮಾವಿದು. ಬಾಕ್ಸಿಂಗ್ ನಲ್ಲಿ ಅಪಾರ ಆಸಕ್ತಿ ಇರುವ ಹುಡುಗನ ಬದುಕಿನಲ್ಲಿ ನಡೆಯುವ ಘಟನೆಗಳ ಸುತ್ತ ಹೆಣೆಯಲಾದ ಕಥೆ ಚಿತ್ರದಲ್ಲಿದೆ. ಪ್ರೀತಿ, ಸೆಂಟಿಮೆಂಟ್ ಎಳೆಯನ್ನೂ ಹೊತ್ತ ಈ ಚಿತ್ರ ಖಂಡಿತ ಪ್ರೇಕ್ಷಕರಿಗೆ ಮನರಂಜನೆ ನೀಡಲಿದೆ ಎಂದು ತಿಳಿಸಿದ್ದಾರೆ.

andolanait

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

9 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

12 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

16 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

18 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

19 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

20 hours ago