ಚಿತ್ರ ಮಂಜರಿ

‘ಕೌಸಲ್ಯಾ ಸುಪ್ರಜಾ ರಾಮ’ ನಾಗಿ ಡಾರ್ಲಿಂಗ್‌ ಕೃಷ್ಣ : ವಿಭಿನ್ನ ವಿಡಿಯೋ ಮೂಲಕ ಚಿತ್ರದ ಟೈಟಲ್ ಬಿಡುಗಡೆ

ಬೆಂಗಳೂರು : ಕನ್ನಡ ಚಿತ್ರರಂಗ ಡಾರ್ಲಿಂಗ್‌ ಕೃಷ್ಣ ಅವರ ಮತ್ತೊಂದು ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ.

ಹೌದು,‘ಕೌಸಲ್ಯಾ ಸುಪ್ರಜಾ ರಾಮ’ ಹೊಸ ಸೇರ್ಪಡೆಯ ಮೂಲಕ ಸದಭಿರುಚಿ ಚಿತ್ರಗಳಿಗೆ ಜನಪ್ರಿಯವಾಗಿರುವ ‘ಮೊಗ್ಗಿನ ಮನಸು’ ಶಶಾಂಕ್ ಈ ಚಿತ್ರದ ನಿರ್ದೇಶಕರು. ಇತ್ತೀಚಿಗೆ ಬಿಡುಗಡೆಗೊಂಡ ಈ ಶೀರ್ಷಿಕೆಗೆ ನೆಟ್ಟಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಂದು ವಿಭಿನ್ನ ವಿಡಿಯೊ ಮೂಲಕ ಶಶಾಂಕ್ ತಮ್ಮ ಚಿತ್ರದ ಟೈಟಲ್ ಬಿಡುಗಡೆ ಮಾಡಿರುವುದು ವಿಶೇಷ.

     https://youtu.be/5Fiz5dDeVyo

‘ಕೌಸಲ್ಯಾ ಸುಪ್ರಜಾ ರಾಮ’ ನಾವು ದಿನ ಬೆಳಗ್ಗೆ ಕೇಳುವ ಸುಮಧುರ ಸುಪ್ರಭಾತದ ಮೊದಲ ಸಾಲು. ಇದೊಂದು ತಾಯಿ ಮಗನ ಭಾವನಾತ್ಮಕ ಸನ್ನಿವೇಶಗಳನ್ನೊಳಗೊಂಡಿರುವ ಚಿತ್ರ. ಹಾಗಂತ ನಮ್ಮ ಚಿತ್ರದಲ್ಲಿ ಮನೋರಂಜನೆಗೆ ಕೊರತೆಯಿಲ್ಲ. ಉತ್ತಮ ಮನೋರಂಜನೆ ಹಾಗೂ ಭಾವನೆ ಇರುವ, ಕುಟುಂಬ ಸಮೇತ ನೋಡಬಹುದಾದ ಸುಂದರ ಕೌಟುಂಬಿಕ ಚಿತ್ರ ಎನ್ನುತ್ತಾರೆ ಶಶಾಂಕ್‌.
ಡಾರ್ಲಿಂಗ್ ಕೃಷ್ಣ ಅವರ ತಾಯಿ – ತಂದೆ ಪಾತ್ರದಲ್ಲಿ ಸುಧಾ ಬೆಳವಾಡಿ, ರಂಗಾಯಣ ರಘು ಅಭಿನಯಿಸುತ್ತಿದ್ದಾರೆ. ಅಚ್ಯುತ್‌ಕುಮಾರ್, ಗಿರಿರಾಜ್ ಸಹ ತಾರಾಬಳಗದಲ್ಲಿದ್ದಾರೆ. ಇಬ್ಬರು ನಾಯಕಿಯರಿದ್ದು, ಅದರಲ್ಲಿ ಒಬ್ಬರು ಹೊಸಬರು ಎನ್ನುತ್ತಿದೆ ಚಿತ್ರತಂಡ.
ಈಗಾಗಲೇ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಐದು ಹಾಡುಗಳಿದೆ. ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ. ಸುಜ್ಞಾನ್ ಈ ಚಿತ್ರದ ಛಾಯಾಗ್ರಾಹಕರು. ಶಶಾಂಕ್ ಸಿನಿಮಾಸ್ ಹಾಗೂ ಬಿ.ಸಿ.ಪಾಟೀಲ್ ಅವರ ಕೌರವ ಪ್ರೊಡಕ್ಷನ್ ಹೌಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.

 

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

12 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

16 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago