ಚಿತ್ರ ಮಂಜರಿ

‘ಕೌಸಲ್ಯಾ ಸುಪ್ರಜಾ ರಾಮ’ ನಾಗಿ ಡಾರ್ಲಿಂಗ್‌ ಕೃಷ್ಣ : ವಿಭಿನ್ನ ವಿಡಿಯೋ ಮೂಲಕ ಚಿತ್ರದ ಟೈಟಲ್ ಬಿಡುಗಡೆ

ಬೆಂಗಳೂರು : ಕನ್ನಡ ಚಿತ್ರರಂಗ ಡಾರ್ಲಿಂಗ್‌ ಕೃಷ್ಣ ಅವರ ಮತ್ತೊಂದು ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ.

ಹೌದು,‘ಕೌಸಲ್ಯಾ ಸುಪ್ರಜಾ ರಾಮ’ ಹೊಸ ಸೇರ್ಪಡೆಯ ಮೂಲಕ ಸದಭಿರುಚಿ ಚಿತ್ರಗಳಿಗೆ ಜನಪ್ರಿಯವಾಗಿರುವ ‘ಮೊಗ್ಗಿನ ಮನಸು’ ಶಶಾಂಕ್ ಈ ಚಿತ್ರದ ನಿರ್ದೇಶಕರು. ಇತ್ತೀಚಿಗೆ ಬಿಡುಗಡೆಗೊಂಡ ಈ ಶೀರ್ಷಿಕೆಗೆ ನೆಟ್ಟಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಂದು ವಿಭಿನ್ನ ವಿಡಿಯೊ ಮೂಲಕ ಶಶಾಂಕ್ ತಮ್ಮ ಚಿತ್ರದ ಟೈಟಲ್ ಬಿಡುಗಡೆ ಮಾಡಿರುವುದು ವಿಶೇಷ.

     https://youtu.be/5Fiz5dDeVyo

‘ಕೌಸಲ್ಯಾ ಸುಪ್ರಜಾ ರಾಮ’ ನಾವು ದಿನ ಬೆಳಗ್ಗೆ ಕೇಳುವ ಸುಮಧುರ ಸುಪ್ರಭಾತದ ಮೊದಲ ಸಾಲು. ಇದೊಂದು ತಾಯಿ ಮಗನ ಭಾವನಾತ್ಮಕ ಸನ್ನಿವೇಶಗಳನ್ನೊಳಗೊಂಡಿರುವ ಚಿತ್ರ. ಹಾಗಂತ ನಮ್ಮ ಚಿತ್ರದಲ್ಲಿ ಮನೋರಂಜನೆಗೆ ಕೊರತೆಯಿಲ್ಲ. ಉತ್ತಮ ಮನೋರಂಜನೆ ಹಾಗೂ ಭಾವನೆ ಇರುವ, ಕುಟುಂಬ ಸಮೇತ ನೋಡಬಹುದಾದ ಸುಂದರ ಕೌಟುಂಬಿಕ ಚಿತ್ರ ಎನ್ನುತ್ತಾರೆ ಶಶಾಂಕ್‌.
ಡಾರ್ಲಿಂಗ್ ಕೃಷ್ಣ ಅವರ ತಾಯಿ – ತಂದೆ ಪಾತ್ರದಲ್ಲಿ ಸುಧಾ ಬೆಳವಾಡಿ, ರಂಗಾಯಣ ರಘು ಅಭಿನಯಿಸುತ್ತಿದ್ದಾರೆ. ಅಚ್ಯುತ್‌ಕುಮಾರ್, ಗಿರಿರಾಜ್ ಸಹ ತಾರಾಬಳಗದಲ್ಲಿದ್ದಾರೆ. ಇಬ್ಬರು ನಾಯಕಿಯರಿದ್ದು, ಅದರಲ್ಲಿ ಒಬ್ಬರು ಹೊಸಬರು ಎನ್ನುತ್ತಿದೆ ಚಿತ್ರತಂಡ.
ಈಗಾಗಲೇ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಐದು ಹಾಡುಗಳಿದೆ. ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ. ಸುಜ್ಞಾನ್ ಈ ಚಿತ್ರದ ಛಾಯಾಗ್ರಾಹಕರು. ಶಶಾಂಕ್ ಸಿನಿಮಾಸ್ ಹಾಗೂ ಬಿ.ಸಿ.ಪಾಟೀಲ್ ಅವರ ಕೌರವ ಪ್ರೊಡಕ್ಷನ್ ಹೌಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.

 

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

11 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

11 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago