ಚಿತ್ರ ಮಂಜರಿ

‘ಕೌಸಲ್ಯಾ ಸುಪ್ರಜಾ ರಾಮ’ ನಾಗಿ ಡಾರ್ಲಿಂಗ್‌ ಕೃಷ್ಣ : ವಿಭಿನ್ನ ವಿಡಿಯೋ ಮೂಲಕ ಚಿತ್ರದ ಟೈಟಲ್ ಬಿಡುಗಡೆ

ಬೆಂಗಳೂರು : ಕನ್ನಡ ಚಿತ್ರರಂಗ ಡಾರ್ಲಿಂಗ್‌ ಕೃಷ್ಣ ಅವರ ಮತ್ತೊಂದು ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ.

ಹೌದು,‘ಕೌಸಲ್ಯಾ ಸುಪ್ರಜಾ ರಾಮ’ ಹೊಸ ಸೇರ್ಪಡೆಯ ಮೂಲಕ ಸದಭಿರುಚಿ ಚಿತ್ರಗಳಿಗೆ ಜನಪ್ರಿಯವಾಗಿರುವ ‘ಮೊಗ್ಗಿನ ಮನಸು’ ಶಶಾಂಕ್ ಈ ಚಿತ್ರದ ನಿರ್ದೇಶಕರು. ಇತ್ತೀಚಿಗೆ ಬಿಡುಗಡೆಗೊಂಡ ಈ ಶೀರ್ಷಿಕೆಗೆ ನೆಟ್ಟಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಂದು ವಿಭಿನ್ನ ವಿಡಿಯೊ ಮೂಲಕ ಶಶಾಂಕ್ ತಮ್ಮ ಚಿತ್ರದ ಟೈಟಲ್ ಬಿಡುಗಡೆ ಮಾಡಿರುವುದು ವಿಶೇಷ.

     https://youtu.be/5Fiz5dDeVyo

‘ಕೌಸಲ್ಯಾ ಸುಪ್ರಜಾ ರಾಮ’ ನಾವು ದಿನ ಬೆಳಗ್ಗೆ ಕೇಳುವ ಸುಮಧುರ ಸುಪ್ರಭಾತದ ಮೊದಲ ಸಾಲು. ಇದೊಂದು ತಾಯಿ ಮಗನ ಭಾವನಾತ್ಮಕ ಸನ್ನಿವೇಶಗಳನ್ನೊಳಗೊಂಡಿರುವ ಚಿತ್ರ. ಹಾಗಂತ ನಮ್ಮ ಚಿತ್ರದಲ್ಲಿ ಮನೋರಂಜನೆಗೆ ಕೊರತೆಯಿಲ್ಲ. ಉತ್ತಮ ಮನೋರಂಜನೆ ಹಾಗೂ ಭಾವನೆ ಇರುವ, ಕುಟುಂಬ ಸಮೇತ ನೋಡಬಹುದಾದ ಸುಂದರ ಕೌಟುಂಬಿಕ ಚಿತ್ರ ಎನ್ನುತ್ತಾರೆ ಶಶಾಂಕ್‌.
ಡಾರ್ಲಿಂಗ್ ಕೃಷ್ಣ ಅವರ ತಾಯಿ – ತಂದೆ ಪಾತ್ರದಲ್ಲಿ ಸುಧಾ ಬೆಳವಾಡಿ, ರಂಗಾಯಣ ರಘು ಅಭಿನಯಿಸುತ್ತಿದ್ದಾರೆ. ಅಚ್ಯುತ್‌ಕುಮಾರ್, ಗಿರಿರಾಜ್ ಸಹ ತಾರಾಬಳಗದಲ್ಲಿದ್ದಾರೆ. ಇಬ್ಬರು ನಾಯಕಿಯರಿದ್ದು, ಅದರಲ್ಲಿ ಒಬ್ಬರು ಹೊಸಬರು ಎನ್ನುತ್ತಿದೆ ಚಿತ್ರತಂಡ.
ಈಗಾಗಲೇ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಐದು ಹಾಡುಗಳಿದೆ. ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ. ಸುಜ್ಞಾನ್ ಈ ಚಿತ್ರದ ಛಾಯಾಗ್ರಾಹಕರು. ಶಶಾಂಕ್ ಸಿನಿಮಾಸ್ ಹಾಗೂ ಬಿ.ಸಿ.ಪಾಟೀಲ್ ಅವರ ಕೌರವ ಪ್ರೊಡಕ್ಷನ್ ಹೌಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.

 

andolanait

Recent Posts

ಕೇರಳ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ…

10 mins ago

ಕೋಚಿಂಗ್ ಮಾಫಿಯಾಕ್ಕೆ NEET ಬಲಿ…!

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…

2 hours ago

ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರ ವಿಶ್ವಾಸ ಉಳಿಸಿಕೊಳ್ಳಬೇಕಿದೆ ಎನ್‌ಟಿಎ

ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಅಂಗಳಕ್ಕೆ ತಲುಪಿದ ಅಧಿಕಾರ ಹಂಚಿಕೆ ಮಾತು

ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…

2 hours ago

ಪಾರಂಪರಿಕ ಕಟ್ಟಡ ಸಂರಕ್ಷಿಸಿ.. ಪರಂಪರೆ ಉಳಿಸಿ..!

ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು…

2 hours ago

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

5 hours ago