ಚಿತ್ರ ಮಂಜರಿ

ಗಲ್ಲಾ ಪೆಟ್ಟಿಗೆಯಲ್ಲಿ ದರ್ಶನ್‌ ಕಮಾಲ್‌: 100 ಕೋಟಿ ಕ್ಲಬ್‌ ಸೇರಿದ ಕಾಟೇರ

2023ರ ದಿಸೆಂಬರ್‌ 29ರಂದು ರಿಲೀಸ್‌ ಆದ ನಟ ದರ್ಶನ್‌ ಅಭಿನಯದ ಕಾಟೇರ ಸಿನಿಮಾ ಯಶಸ್ಸು ಕಂಡಿದೆ. ಬಿಡುಗಡೆಗೊಂಡ ಕೇವಲ 7 ದಿನಗಳಲ್ಲಿ 100 ಕೋಟಿ ಕ್ಲಬ್‌ ಸೇರಿದೆ.

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ನಟನೆಯ, ತರುಣ್ ಸುಧೀರ್ ನಿರ್ದೇಶನ ಮತ್ತು ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ ಕಾಟೇರ ಸಿನಿಮಾ 104 ಕೋಟಿ ರೂಪಾಯಿ ಬಾಚಿಕೊಳ್ಳುವ ಮೂಲಕ 2024ರಲ್ಲಿನ ಕನ್ನಡದ ಮೊಲದ ಯಶಸ್ವಿ ಚಿತ್ರವಾಗಿ ಗೆದ್ದು ಬೀಗಿದೆ. ಇದು ದರ್ಶನ್‌ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ.

ನಟ ದರ್ಶನ್ ಅವರ ಆಪ್ತರು ನೀಡಿದ ಮಾಹಿತಿ ಪ್ರಕಾರ ‘ಕಾಟೇರ’ ಸಿನಿಮಾ ಏಳು ದಿನಕ್ಕೆ 104.58 ಕೋಟಿ ರೂಪಾಯಿ ಗಳಿಸಿದೆ. ಕೇವಲ ಕನ್ನಡದಲ್ಲಿ ರಿಲೀಸ್ ಆಗಿ ‘ಕಾಟೇರ’ ಇಷ್ಟು ದೊಡ್ಡ ಮೊತ್ತದ ಗಳಿಕೆ ಮಾಡುತ್ತಿರುವುದು ತಂಡದ ಖುಷಿ ಹೆಚ್ಚಿಸಿದೆ. ಸದ್ಯ ಅಪ್ಪಟ ಕನ್ನಡ ಸಿನಿಮಾ ಕನ್ನಡದ ನೆಲದಲ್ಲಿ ಗೆದ್ದಬೀಗಿದ್ದು, ಟಾಲಿವುಡ್ ಹಾಗೂ ಕಾಲಿವುಡ್​ನಲ್ಲೂ ‘ಕಾಟೇರ’ ಚಿತ್ರ ರಿಲೀಸ್‌ ಬೇಡಿಕೆ ಕಂಡುಬಂದ ಹಿನ್ನಲೆಯಲ್ಲಿ ಇತರೆ ಭಾಷೆಗಳಿಗೆ ಡಬ್‌ ಮಾಡಿ ಸಿನಿಮಾ ರಿಲೀಸ್‌ ಮಾಡುವ ಬಗ್ಗೆ ಚಿತ್ರತಂಡ ಯೋಚಿಸುತ್ತಿದೆ.

ಕಾಟೇರ ಕಲೆಕ್ಷನ್‌ ವಿವರ:

ಡಿಸೆಂಬರ್ 29: 19.79 ಕೋಟಿ ರೂಪಾಯಿ

ಡಿಸೆಂಬರ್ 30: 17.35 ಕೋಟಿ ರೂಪಾಯಿ

ಡಿಸೆಂಬರ್ 31: 20.94 ಕೋಟಿ ರೂಪಾಯಿ

ಜನವರಿ 1: 18.26 ಕೋಟಿ ರೂಪಾಯಿ

ಜನವರಿ 2: 9.24 ಕೋಟಿ ರೂಪಾಯಿ

ಜನವರಿ 3: 9.78 ಕೋಟಿ ರೂಪಾಯಿ

ಜನವರಿ 4: 9.52 ಕೋಟಿ ರೂಪಾಯಿ

ಈವರೆಗೆ ಕಾಟೇರ ಚಿತ್ರದ 52.77 ಲಕ್ಷ ಟಿಕೆಟ್‌ಗಳು ಮಾರಾಟವಾಗಿದೆ. ಹಿರಿಯ ನಟಿ ಮಾಲಾಶ್ರೀ ಮಗಳಾದ ಆರಾಧನಾ ಮೊಟ್ಟ ಮೊದಲ ಬಾರಿಗೆ ನಾಯಕಿಯಾಗಿ ಪಾದಾರ್ಪಣೆ ಮಾಡಿದ್ದಾರೆ. ಅಚ್ಯುತ್‌ ಕುಮಾರ್‌, ಜಗಪತಿ ಬಾಬು, ಕುಮಾರ್‌ ಗೋವಿಂದ್ ಸೇರಿದಂತೆ ದೊಟ್ಟ ತಾರಾ ಬಳಗಳವನ್ನೇ ಚಿತ್ರತಂಡ ಹೊಂದಿದೆ.

andolanait

Recent Posts

ಸಂಸತ್‌ ವಿಶೇಷ ಅಧಿವೇಶನ: ಮೂರು ಮಹತ್ವದ ಮಸೂದೆ ಮಂಡನೆ

ನವದೆಹಲಿ: ಇಂದಿನಿಂದ ಆರಂಭವಾಗಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದೆ. ಸಂವಿಧಾನದ ತಿದ್ದುಪಡಿ ಮಸೂದೆ-2026,…

24 mins ago

ಪಶ್ಚಿಮಘಟ್ಟಗಳನ್ನು ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಳದಲ್ಲಿ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದಾಗಿದೆ ಎಂದು…

51 mins ago

ಲೋಕಸಭೆಯಲ್ಲಿ ಮಹತ್ವದ ಕ್ಷೇತ್ರ ಮರುವಿಂಗಡಣೆ ಮಸೂದೆ ಮಂಡನೆ

ನವದೆಹಲಿ: ಕೇಂದ್ರ ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು. ಈ…

1 hour ago

ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ತೀವ್ರ ವಿರೋಧ: ತಮಿಳುನಾಡು ಸಿಎಂ ಸ್ಟಾಲಿನ್‌ ಪ್ರತಿಭಟನೆ

ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,…

2 hours ago

ತಾಪಮಾನ ಏರಿಕೆ ಬೆನ್ನಲ್ಲೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…

2 hours ago

ಓದುಗರ ಪತ್ರ: ವಿಶ್ವ ಶಾಂತಿಗೆ ಪೋಪ್ ಕರೆ ಸ್ವಾಗತಾರ್ಹ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…

3 hours ago