ಚಿತ್ರ ಮಂಜರಿ

ಗಲ್ಲಾ ಪೆಟ್ಟಿಗೆಯಲ್ಲಿ ದರ್ಶನ್‌ ಕಮಾಲ್‌: 100 ಕೋಟಿ ಕ್ಲಬ್‌ ಸೇರಿದ ಕಾಟೇರ

2023ರ ದಿಸೆಂಬರ್‌ 29ರಂದು ರಿಲೀಸ್‌ ಆದ ನಟ ದರ್ಶನ್‌ ಅಭಿನಯದ ಕಾಟೇರ ಸಿನಿಮಾ ಯಶಸ್ಸು ಕಂಡಿದೆ. ಬಿಡುಗಡೆಗೊಂಡ ಕೇವಲ 7 ದಿನಗಳಲ್ಲಿ 100 ಕೋಟಿ ಕ್ಲಬ್‌ ಸೇರಿದೆ.

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ನಟನೆಯ, ತರುಣ್ ಸುಧೀರ್ ನಿರ್ದೇಶನ ಮತ್ತು ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ ಕಾಟೇರ ಸಿನಿಮಾ 104 ಕೋಟಿ ರೂಪಾಯಿ ಬಾಚಿಕೊಳ್ಳುವ ಮೂಲಕ 2024ರಲ್ಲಿನ ಕನ್ನಡದ ಮೊಲದ ಯಶಸ್ವಿ ಚಿತ್ರವಾಗಿ ಗೆದ್ದು ಬೀಗಿದೆ. ಇದು ದರ್ಶನ್‌ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ.

ನಟ ದರ್ಶನ್ ಅವರ ಆಪ್ತರು ನೀಡಿದ ಮಾಹಿತಿ ಪ್ರಕಾರ ‘ಕಾಟೇರ’ ಸಿನಿಮಾ ಏಳು ದಿನಕ್ಕೆ 104.58 ಕೋಟಿ ರೂಪಾಯಿ ಗಳಿಸಿದೆ. ಕೇವಲ ಕನ್ನಡದಲ್ಲಿ ರಿಲೀಸ್ ಆಗಿ ‘ಕಾಟೇರ’ ಇಷ್ಟು ದೊಡ್ಡ ಮೊತ್ತದ ಗಳಿಕೆ ಮಾಡುತ್ತಿರುವುದು ತಂಡದ ಖುಷಿ ಹೆಚ್ಚಿಸಿದೆ. ಸದ್ಯ ಅಪ್ಪಟ ಕನ್ನಡ ಸಿನಿಮಾ ಕನ್ನಡದ ನೆಲದಲ್ಲಿ ಗೆದ್ದಬೀಗಿದ್ದು, ಟಾಲಿವುಡ್ ಹಾಗೂ ಕಾಲಿವುಡ್​ನಲ್ಲೂ ‘ಕಾಟೇರ’ ಚಿತ್ರ ರಿಲೀಸ್‌ ಬೇಡಿಕೆ ಕಂಡುಬಂದ ಹಿನ್ನಲೆಯಲ್ಲಿ ಇತರೆ ಭಾಷೆಗಳಿಗೆ ಡಬ್‌ ಮಾಡಿ ಸಿನಿಮಾ ರಿಲೀಸ್‌ ಮಾಡುವ ಬಗ್ಗೆ ಚಿತ್ರತಂಡ ಯೋಚಿಸುತ್ತಿದೆ.

ಕಾಟೇರ ಕಲೆಕ್ಷನ್‌ ವಿವರ:

ಡಿಸೆಂಬರ್ 29: 19.79 ಕೋಟಿ ರೂಪಾಯಿ

ಡಿಸೆಂಬರ್ 30: 17.35 ಕೋಟಿ ರೂಪಾಯಿ

ಡಿಸೆಂಬರ್ 31: 20.94 ಕೋಟಿ ರೂಪಾಯಿ

ಜನವರಿ 1: 18.26 ಕೋಟಿ ರೂಪಾಯಿ

ಜನವರಿ 2: 9.24 ಕೋಟಿ ರೂಪಾಯಿ

ಜನವರಿ 3: 9.78 ಕೋಟಿ ರೂಪಾಯಿ

ಜನವರಿ 4: 9.52 ಕೋಟಿ ರೂಪಾಯಿ

ಈವರೆಗೆ ಕಾಟೇರ ಚಿತ್ರದ 52.77 ಲಕ್ಷ ಟಿಕೆಟ್‌ಗಳು ಮಾರಾಟವಾಗಿದೆ. ಹಿರಿಯ ನಟಿ ಮಾಲಾಶ್ರೀ ಮಗಳಾದ ಆರಾಧನಾ ಮೊಟ್ಟ ಮೊದಲ ಬಾರಿಗೆ ನಾಯಕಿಯಾಗಿ ಪಾದಾರ್ಪಣೆ ಮಾಡಿದ್ದಾರೆ. ಅಚ್ಯುತ್‌ ಕುಮಾರ್‌, ಜಗಪತಿ ಬಾಬು, ಕುಮಾರ್‌ ಗೋವಿಂದ್ ಸೇರಿದಂತೆ ದೊಟ್ಟ ತಾರಾ ಬಳಗಳವನ್ನೇ ಚಿತ್ರತಂಡ ಹೊಂದಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

3 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

31 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago