ಚಿತ್ರ ಮಂಜರಿ

ಗಲ್ಲಾ ಪೆಟ್ಟಿಗೆಯಲ್ಲಿ ದರ್ಶನ್‌ ಕಮಾಲ್‌: 100 ಕೋಟಿ ಕ್ಲಬ್‌ ಸೇರಿದ ಕಾಟೇರ

2023ರ ದಿಸೆಂಬರ್‌ 29ರಂದು ರಿಲೀಸ್‌ ಆದ ನಟ ದರ್ಶನ್‌ ಅಭಿನಯದ ಕಾಟೇರ ಸಿನಿಮಾ ಯಶಸ್ಸು ಕಂಡಿದೆ. ಬಿಡುಗಡೆಗೊಂಡ ಕೇವಲ 7 ದಿನಗಳಲ್ಲಿ 100 ಕೋಟಿ ಕ್ಲಬ್‌ ಸೇರಿದೆ.

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ನಟನೆಯ, ತರುಣ್ ಸುಧೀರ್ ನಿರ್ದೇಶನ ಮತ್ತು ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ ಕಾಟೇರ ಸಿನಿಮಾ 104 ಕೋಟಿ ರೂಪಾಯಿ ಬಾಚಿಕೊಳ್ಳುವ ಮೂಲಕ 2024ರಲ್ಲಿನ ಕನ್ನಡದ ಮೊಲದ ಯಶಸ್ವಿ ಚಿತ್ರವಾಗಿ ಗೆದ್ದು ಬೀಗಿದೆ. ಇದು ದರ್ಶನ್‌ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ.

ನಟ ದರ್ಶನ್ ಅವರ ಆಪ್ತರು ನೀಡಿದ ಮಾಹಿತಿ ಪ್ರಕಾರ ‘ಕಾಟೇರ’ ಸಿನಿಮಾ ಏಳು ದಿನಕ್ಕೆ 104.58 ಕೋಟಿ ರೂಪಾಯಿ ಗಳಿಸಿದೆ. ಕೇವಲ ಕನ್ನಡದಲ್ಲಿ ರಿಲೀಸ್ ಆಗಿ ‘ಕಾಟೇರ’ ಇಷ್ಟು ದೊಡ್ಡ ಮೊತ್ತದ ಗಳಿಕೆ ಮಾಡುತ್ತಿರುವುದು ತಂಡದ ಖುಷಿ ಹೆಚ್ಚಿಸಿದೆ. ಸದ್ಯ ಅಪ್ಪಟ ಕನ್ನಡ ಸಿನಿಮಾ ಕನ್ನಡದ ನೆಲದಲ್ಲಿ ಗೆದ್ದಬೀಗಿದ್ದು, ಟಾಲಿವುಡ್ ಹಾಗೂ ಕಾಲಿವುಡ್​ನಲ್ಲೂ ‘ಕಾಟೇರ’ ಚಿತ್ರ ರಿಲೀಸ್‌ ಬೇಡಿಕೆ ಕಂಡುಬಂದ ಹಿನ್ನಲೆಯಲ್ಲಿ ಇತರೆ ಭಾಷೆಗಳಿಗೆ ಡಬ್‌ ಮಾಡಿ ಸಿನಿಮಾ ರಿಲೀಸ್‌ ಮಾಡುವ ಬಗ್ಗೆ ಚಿತ್ರತಂಡ ಯೋಚಿಸುತ್ತಿದೆ.

ಕಾಟೇರ ಕಲೆಕ್ಷನ್‌ ವಿವರ:

ಡಿಸೆಂಬರ್ 29: 19.79 ಕೋಟಿ ರೂಪಾಯಿ

ಡಿಸೆಂಬರ್ 30: 17.35 ಕೋಟಿ ರೂಪಾಯಿ

ಡಿಸೆಂಬರ್ 31: 20.94 ಕೋಟಿ ರೂಪಾಯಿ

ಜನವರಿ 1: 18.26 ಕೋಟಿ ರೂಪಾಯಿ

ಜನವರಿ 2: 9.24 ಕೋಟಿ ರೂಪಾಯಿ

ಜನವರಿ 3: 9.78 ಕೋಟಿ ರೂಪಾಯಿ

ಜನವರಿ 4: 9.52 ಕೋಟಿ ರೂಪಾಯಿ

ಈವರೆಗೆ ಕಾಟೇರ ಚಿತ್ರದ 52.77 ಲಕ್ಷ ಟಿಕೆಟ್‌ಗಳು ಮಾರಾಟವಾಗಿದೆ. ಹಿರಿಯ ನಟಿ ಮಾಲಾಶ್ರೀ ಮಗಳಾದ ಆರಾಧನಾ ಮೊಟ್ಟ ಮೊದಲ ಬಾರಿಗೆ ನಾಯಕಿಯಾಗಿ ಪಾದಾರ್ಪಣೆ ಮಾಡಿದ್ದಾರೆ. ಅಚ್ಯುತ್‌ ಕುಮಾರ್‌, ಜಗಪತಿ ಬಾಬು, ಕುಮಾರ್‌ ಗೋವಿಂದ್ ಸೇರಿದಂತೆ ದೊಟ್ಟ ತಾರಾ ಬಳಗಳವನ್ನೇ ಚಿತ್ರತಂಡ ಹೊಂದಿದೆ.

andolanait

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

11 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

11 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

11 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

11 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

12 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

12 hours ago