ಚಿತ್ರ ಮಂಜರಿ

ಗಲ್ಲಾ ಪೆಟ್ಟಿಗೆಯಲ್ಲಿ ದರ್ಶನ್‌ ಕಮಾಲ್‌: 100 ಕೋಟಿ ಕ್ಲಬ್‌ ಸೇರಿದ ಕಾಟೇರ

2023ರ ದಿಸೆಂಬರ್‌ 29ರಂದು ರಿಲೀಸ್‌ ಆದ ನಟ ದರ್ಶನ್‌ ಅಭಿನಯದ ಕಾಟೇರ ಸಿನಿಮಾ ಯಶಸ್ಸು ಕಂಡಿದೆ. ಬಿಡುಗಡೆಗೊಂಡ ಕೇವಲ 7 ದಿನಗಳಲ್ಲಿ 100 ಕೋಟಿ ಕ್ಲಬ್‌ ಸೇರಿದೆ.

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ನಟನೆಯ, ತರುಣ್ ಸುಧೀರ್ ನಿರ್ದೇಶನ ಮತ್ತು ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ ಕಾಟೇರ ಸಿನಿಮಾ 104 ಕೋಟಿ ರೂಪಾಯಿ ಬಾಚಿಕೊಳ್ಳುವ ಮೂಲಕ 2024ರಲ್ಲಿನ ಕನ್ನಡದ ಮೊಲದ ಯಶಸ್ವಿ ಚಿತ್ರವಾಗಿ ಗೆದ್ದು ಬೀಗಿದೆ. ಇದು ದರ್ಶನ್‌ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ.

ನಟ ದರ್ಶನ್ ಅವರ ಆಪ್ತರು ನೀಡಿದ ಮಾಹಿತಿ ಪ್ರಕಾರ ‘ಕಾಟೇರ’ ಸಿನಿಮಾ ಏಳು ದಿನಕ್ಕೆ 104.58 ಕೋಟಿ ರೂಪಾಯಿ ಗಳಿಸಿದೆ. ಕೇವಲ ಕನ್ನಡದಲ್ಲಿ ರಿಲೀಸ್ ಆಗಿ ‘ಕಾಟೇರ’ ಇಷ್ಟು ದೊಡ್ಡ ಮೊತ್ತದ ಗಳಿಕೆ ಮಾಡುತ್ತಿರುವುದು ತಂಡದ ಖುಷಿ ಹೆಚ್ಚಿಸಿದೆ. ಸದ್ಯ ಅಪ್ಪಟ ಕನ್ನಡ ಸಿನಿಮಾ ಕನ್ನಡದ ನೆಲದಲ್ಲಿ ಗೆದ್ದಬೀಗಿದ್ದು, ಟಾಲಿವುಡ್ ಹಾಗೂ ಕಾಲಿವುಡ್​ನಲ್ಲೂ ‘ಕಾಟೇರ’ ಚಿತ್ರ ರಿಲೀಸ್‌ ಬೇಡಿಕೆ ಕಂಡುಬಂದ ಹಿನ್ನಲೆಯಲ್ಲಿ ಇತರೆ ಭಾಷೆಗಳಿಗೆ ಡಬ್‌ ಮಾಡಿ ಸಿನಿಮಾ ರಿಲೀಸ್‌ ಮಾಡುವ ಬಗ್ಗೆ ಚಿತ್ರತಂಡ ಯೋಚಿಸುತ್ತಿದೆ.

ಕಾಟೇರ ಕಲೆಕ್ಷನ್‌ ವಿವರ:

ಡಿಸೆಂಬರ್ 29: 19.79 ಕೋಟಿ ರೂಪಾಯಿ

ಡಿಸೆಂಬರ್ 30: 17.35 ಕೋಟಿ ರೂಪಾಯಿ

ಡಿಸೆಂಬರ್ 31: 20.94 ಕೋಟಿ ರೂಪಾಯಿ

ಜನವರಿ 1: 18.26 ಕೋಟಿ ರೂಪಾಯಿ

ಜನವರಿ 2: 9.24 ಕೋಟಿ ರೂಪಾಯಿ

ಜನವರಿ 3: 9.78 ಕೋಟಿ ರೂಪಾಯಿ

ಜನವರಿ 4: 9.52 ಕೋಟಿ ರೂಪಾಯಿ

ಈವರೆಗೆ ಕಾಟೇರ ಚಿತ್ರದ 52.77 ಲಕ್ಷ ಟಿಕೆಟ್‌ಗಳು ಮಾರಾಟವಾಗಿದೆ. ಹಿರಿಯ ನಟಿ ಮಾಲಾಶ್ರೀ ಮಗಳಾದ ಆರಾಧನಾ ಮೊಟ್ಟ ಮೊದಲ ಬಾರಿಗೆ ನಾಯಕಿಯಾಗಿ ಪಾದಾರ್ಪಣೆ ಮಾಡಿದ್ದಾರೆ. ಅಚ್ಯುತ್‌ ಕುಮಾರ್‌, ಜಗಪತಿ ಬಾಬು, ಕುಮಾರ್‌ ಗೋವಿಂದ್ ಸೇರಿದಂತೆ ದೊಟ್ಟ ತಾರಾ ಬಳಗಳವನ್ನೇ ಚಿತ್ರತಂಡ ಹೊಂದಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

50 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

52 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

53 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

55 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

60 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago