ಚಿತ್ರ ಮಂಜರಿ

ಗಲ್ಲಾ ಪೆಟ್ಟಿಗೆಯಲ್ಲಿ ದರ್ಶನ್‌ ಕಮಾಲ್‌: 100 ಕೋಟಿ ಕ್ಲಬ್‌ ಸೇರಿದ ಕಾಟೇರ

2023ರ ದಿಸೆಂಬರ್‌ 29ರಂದು ರಿಲೀಸ್‌ ಆದ ನಟ ದರ್ಶನ್‌ ಅಭಿನಯದ ಕಾಟೇರ ಸಿನಿಮಾ ಯಶಸ್ಸು ಕಂಡಿದೆ. ಬಿಡುಗಡೆಗೊಂಡ ಕೇವಲ 7 ದಿನಗಳಲ್ಲಿ 100 ಕೋಟಿ ಕ್ಲಬ್‌ ಸೇರಿದೆ.

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ನಟನೆಯ, ತರುಣ್ ಸುಧೀರ್ ನಿರ್ದೇಶನ ಮತ್ತು ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ ಕಾಟೇರ ಸಿನಿಮಾ 104 ಕೋಟಿ ರೂಪಾಯಿ ಬಾಚಿಕೊಳ್ಳುವ ಮೂಲಕ 2024ರಲ್ಲಿನ ಕನ್ನಡದ ಮೊಲದ ಯಶಸ್ವಿ ಚಿತ್ರವಾಗಿ ಗೆದ್ದು ಬೀಗಿದೆ. ಇದು ದರ್ಶನ್‌ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ.

ನಟ ದರ್ಶನ್ ಅವರ ಆಪ್ತರು ನೀಡಿದ ಮಾಹಿತಿ ಪ್ರಕಾರ ‘ಕಾಟೇರ’ ಸಿನಿಮಾ ಏಳು ದಿನಕ್ಕೆ 104.58 ಕೋಟಿ ರೂಪಾಯಿ ಗಳಿಸಿದೆ. ಕೇವಲ ಕನ್ನಡದಲ್ಲಿ ರಿಲೀಸ್ ಆಗಿ ‘ಕಾಟೇರ’ ಇಷ್ಟು ದೊಡ್ಡ ಮೊತ್ತದ ಗಳಿಕೆ ಮಾಡುತ್ತಿರುವುದು ತಂಡದ ಖುಷಿ ಹೆಚ್ಚಿಸಿದೆ. ಸದ್ಯ ಅಪ್ಪಟ ಕನ್ನಡ ಸಿನಿಮಾ ಕನ್ನಡದ ನೆಲದಲ್ಲಿ ಗೆದ್ದಬೀಗಿದ್ದು, ಟಾಲಿವುಡ್ ಹಾಗೂ ಕಾಲಿವುಡ್​ನಲ್ಲೂ ‘ಕಾಟೇರ’ ಚಿತ್ರ ರಿಲೀಸ್‌ ಬೇಡಿಕೆ ಕಂಡುಬಂದ ಹಿನ್ನಲೆಯಲ್ಲಿ ಇತರೆ ಭಾಷೆಗಳಿಗೆ ಡಬ್‌ ಮಾಡಿ ಸಿನಿಮಾ ರಿಲೀಸ್‌ ಮಾಡುವ ಬಗ್ಗೆ ಚಿತ್ರತಂಡ ಯೋಚಿಸುತ್ತಿದೆ.

ಕಾಟೇರ ಕಲೆಕ್ಷನ್‌ ವಿವರ:

ಡಿಸೆಂಬರ್ 29: 19.79 ಕೋಟಿ ರೂಪಾಯಿ

ಡಿಸೆಂಬರ್ 30: 17.35 ಕೋಟಿ ರೂಪಾಯಿ

ಡಿಸೆಂಬರ್ 31: 20.94 ಕೋಟಿ ರೂಪಾಯಿ

ಜನವರಿ 1: 18.26 ಕೋಟಿ ರೂಪಾಯಿ

ಜನವರಿ 2: 9.24 ಕೋಟಿ ರೂಪಾಯಿ

ಜನವರಿ 3: 9.78 ಕೋಟಿ ರೂಪಾಯಿ

ಜನವರಿ 4: 9.52 ಕೋಟಿ ರೂಪಾಯಿ

ಈವರೆಗೆ ಕಾಟೇರ ಚಿತ್ರದ 52.77 ಲಕ್ಷ ಟಿಕೆಟ್‌ಗಳು ಮಾರಾಟವಾಗಿದೆ. ಹಿರಿಯ ನಟಿ ಮಾಲಾಶ್ರೀ ಮಗಳಾದ ಆರಾಧನಾ ಮೊಟ್ಟ ಮೊದಲ ಬಾರಿಗೆ ನಾಯಕಿಯಾಗಿ ಪಾದಾರ್ಪಣೆ ಮಾಡಿದ್ದಾರೆ. ಅಚ್ಯುತ್‌ ಕುಮಾರ್‌, ಜಗಪತಿ ಬಾಬು, ಕುಮಾರ್‌ ಗೋವಿಂದ್ ಸೇರಿದಂತೆ ದೊಟ್ಟ ತಾರಾ ಬಳಗಳವನ್ನೇ ಚಿತ್ರತಂಡ ಹೊಂದಿದೆ.

andolanait

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

41 mins ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

9 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

19 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

24 hours ago