ಬೆಂಗಳೂರು: ಕಾವೇರಿ ಹೋರಾಟದ ಸಂದರ್ಭದಲ್ಲಿ ನಟ ದರ್ಶನ್ ಹಾಗೂ ತಮ್ಮ ನಡುವೆ ಎದ್ದು ತೋರಿದ ಮನಸ್ತಾಪದ ವಿಚಾರದಲ್ಲಿ ಧ್ರುವ ಸರ್ಜಾ ತಮ್ಮ ಬರ್ತ್ಡೇ ಸಂಭ್ರಮದ ಸಂದರ್ಭದಲ್ಲಿ ಮಾತನಾಡಿದ್ದಾರೆ. ದರ್ಶನ್ ಬಳಿ ಕೇಳಬೇಕಾದ ಪ್ರಶ್ನೆಗಳು ನನ್ನ ಬಳಿ ಇದ್ದು, ಅದನ್ನು ಅವರ ಬಳಿಯೇ ಕೇಳಬೇಕಿದೆ ಎಂದಿದ್ದಾರೆ.
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳ ನಡುವೆ ಬರ್ತ್ಡೇ ಆಚರಿಸಿಕೊಂಡರು. ಅವರ ಮನೆಯ ಮುಂದೆ ಸೇರಿದ ಅಭಿಮಾನಿಗಳು ನೆಚ್ಚಿನ ನಟನಿಗೆ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಧ್ರುವ ಸರ್ಜಾ, ದರ್ಶನ್ ಹಾಗೂ ತಮ್ಮ ನಡುವಿನ ಮನಸ್ತಾಪದ ಬಗ್ಗೆ ಮಾತನಾಡಿದರು. ದರ್ಶನ್ ಅವರು ಹಿರಿಯ ನಟ, ಸೀನಿಯರ್ ಕೂಡ. ದರ್ಶನ್ ಅವರ ಉಪಸ್ಥಿತಿ ಮತ್ತು ಅನುಪಸ್ಥಿತಿಯಲ್ಲೂ ಅದೇ ಮರ್ಯಾದೆ ಇರುತ್ತೆ. ಅದರೆ ಅವರ ಬಗ್ಗೆ ಕೇಳಲು ಕೆಲವು ಪ್ರಶ್ನೆಗಳಿವೆ. ಅವುಗಳನ್ನು ಅವರ ಬಳಿಯೇ ಕೇಳಬೇಕು ಎಂದಿದ್ದಾರೆ.
ನನಗೂ ಸ್ವಾಭಿಮಾನ ಇದೆ, ನಾನು ಅವರೊಟ್ಟಿಗೆ ಈ ವಿಚಾರವಾಗಿ ಮಾತನಾಡುತ್ತೇನೆ. ಕೆಲವರು ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಇಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ಅವರ ಬಗ್ಗೆ ಹೇಳುವುದು ಇಷ್ಟೇ, ನನ್ನಲ್ಲಿರುವ ಕೆಲವು ಗೊಂದಲ ಪ್ರಶ್ನೆಗಳಿಗೆ ಉತ್ತರ ಸಿಗಬೇಕು. ನಾಟಕೀಯವಾಗಿ ಮನಸಲ್ಲೊಂದು ಹೊರಗೊಂದು ಥರ ಇರುವುದು ನನಗೆ ಬರುವುದಿಲ್ಲ ಎಂದಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…