ಚಿತ್ರ ಮಂಜರಿ

ನನ್ನ ಕೆಲವು ಪ್ರಶ್ನೆಗಳಿಗೆ ದರ್ಶನ್ ಉತ್ತರ ನೀಡಬೇಕು: ಮೌನ ಮುರಿದ ಧ್ರುವಸರ್ಜಾ

ಬೆಂಗಳೂರು: ಕಾವೇರಿ ಹೋರಾಟದ ಸಂದರ್ಭದಲ್ಲಿ ನಟ ದರ್ಶನ್‌  ಹಾಗೂ ತಮ್ಮ ನಡುವೆ ಎದ್ದು ತೋರಿದ ಮನಸ್ತಾಪದ ವಿಚಾರದಲ್ಲಿ ಧ್ರುವ ಸರ್ಜಾ ತಮ್ಮ ಬರ್ತ್‌ಡೇ ಸಂಭ್ರಮದ ಸಂದರ್ಭದಲ್ಲಿ ಮಾತನಾಡಿದ್ದಾರೆ. ದರ್ಶನ್‌ ಬಳಿ ಕೇಳಬೇಕಾದ ಪ್ರಶ್ನೆಗಳು ನನ್ನ ಬಳಿ ಇದ್ದು, ಅದನ್ನು ಅವರ ಬಳಿಯೇ ಕೇಳಬೇಕಿದೆ ಎಂದಿದ್ದಾರೆ.

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳ ನಡುವೆ ಬರ್ತ್‌ಡೇ ಆಚರಿಸಿಕೊಂಡರು. ಅವರ ಮನೆಯ ಮುಂದೆ ಸೇರಿದ ಅಭಿಮಾನಿಗಳು ನೆಚ್ಚಿನ ನಟನಿಗೆ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಧ್ರುವ ಸರ್ಜಾ, ದರ್ಶನ್‌ ಹಾಗೂ ತಮ್ಮ ನಡುವಿನ ಮನಸ್ತಾಪದ ಬಗ್ಗೆ ಮಾತನಾಡಿದರು. ದರ್ಶನ್ ಅವರು ಹಿರಿಯ ನಟ, ಸೀನಿಯರ್ ಕೂಡ. ದರ್ಶನ್ ಅವರ ಉಪಸ್ಥಿತಿ ಮತ್ತು ಅನುಪಸ್ಥಿತಿಯಲ್ಲೂ ಅದೇ ಮರ್ಯಾದೆ ಇರುತ್ತೆ. ಅದರೆ ಅವರ ಬಗ್ಗೆ ಕೇಳಲು ಕೆಲವು ಪ್ರಶ್ನೆಗಳಿವೆ. ಅವುಗಳನ್ನು ಅವರ ಬಳಿಯೇ ಕೇಳಬೇಕು ಎಂದಿದ್ದಾರೆ.

ನನಗೂ ಸ್ವಾಭಿಮಾನ ಇದೆ, ನಾನು ಅವರೊಟ್ಟಿಗೆ ಈ ವಿಚಾರವಾಗಿ ಮಾತನಾಡುತ್ತೇನೆ. ಕೆಲವರು ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಇಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ಅವರ ಬಗ್ಗೆ ಹೇಳುವುದು ಇಷ್ಟೇ, ನನ್ನಲ್ಲಿರುವ ಕೆಲವು ಗೊಂದಲ ಪ್ರಶ್ನೆಗಳಿಗೆ ಉತ್ತರ ಸಿಗಬೇಕು. ನಾಟಕೀಯವಾಗಿ ಮನಸಲ್ಲೊಂದು ಹೊರಗೊಂದು ಥರ ಇರುವುದು ನನಗೆ ಬರುವುದಿಲ್ಲ ಎಂದಿದ್ದಾರೆ.

andolanait

Recent Posts

SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ

ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…

16 mins ago

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

2 hours ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

2 hours ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

2 hours ago

ಓದುಗರ ಪತ್ರ: ಮಾದರಿಯ ನಡೆ!

ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…

4 hours ago

ಓದುಗರ ಪತ್ರ: ಅರಮನೆ ಸುತ್ತಲಿನ ಪಾದಚಾರಿ ಮಾರ್ಗ ದುರಸ್ತಿ ಮಾಡಿ

ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…

4 hours ago