ಇದೇ ಮೊದಲ ಬಾರಿಗೆ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಕನ್ನಡದ ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಚಿತ್ರವೊಂದು ರೆಡಿಯಾಗಿದೆ. ಜೈಲರ್ ಹೆಸರಿನಲ್ಲಿ ಮೂಡಿ ಬಂದಿರುವ ಸಿನಿಮಾದ ಆಡಿಯೋ ರಿಲೀಸ್ ಇವೆಂಟ್ ಇದೇ ಜುಲೈ 28ರಂದು ಚೆನ್ನೈನಲ್ಲಿ ನಡೆಯಲಿದೆ. ನೆಹರು ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ನಡೆಯಲಿದ್ದು, ಶಿವಣ್ಣ ಕೂಡ ಭಾಗಿಯಾಗಲಿದ್ದಾರೆ.
ಮತ್ತೊಂದು ಖುಷಿ ಸಂಗತಿ ಎಂದರೆ ‘ಜೈಲರ್’ಸಿನಿಮಾದ ಕರ್ನಾಟಕ ವಿತರಣಾ ಹಕ್ಕು ಜಯಣ್ಣಗೆ ಸಿಕ್ಕಿದ್ದು, ಹೆಚ್ಚು ಚಿತ್ರಮಂದಿರಗಳಲ್ಲಿ ಈ ಸಿನಿಮಾವನ್ನು ರಿಲೀಸ್ ಮಾಡಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೊಡ್ಡದೊಂದು ಗೆಲುವು ಕಾಣದ ಜಯಣ್ಣಗೆ ಈ ಸಿನಿಮಾ ಕೈ ಹಿಡಿಯಲಿದೆ ಎಂದು ಅಂದಾಜಿಸಲಾಗಿದೆ.
ಒಂದು ಕಡೆ ಸಿನಿಮಾವನ್ನು ರಿಲೀಸ್ ಮಾಡಲು ದೇಶಾದ್ಯಂತ ಸರ್ವಸಿದ್ದತೆ ನಡೆಸಿದ್ದರೆ, ಮತ್ತೊಂದು ಕಡೆ ಚಿತ್ರದ ಟೈಟಲ್ ತಂಡಕ್ಕೆ ಸಂಕಷ್ಟ ತಂದಿದೆ ಈ ಸಿನಿಮಾ ಮೂರು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ. ಈ ಸಂದರ್ಭದಲ್ಲಿ ಮಲಯಾಳಂ ನಿರ್ದೇಶಕರೊಬ್ಬರು ಟೈಟಲ್ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದಾರೆ.
ಮಲಯಾಳಂನಲ್ಲಿ ಈಗಾಗಲೇ ನಿರ್ದೇಶಕ ಸಕ್ಕಿರ್ ಮಡತ್ತಿಲ್ಲ ಜೈಲರ್ ಹೆಸರಿನಲ್ಲಿ ಸಿನಿಮಾ ಮಾಡಿದ್ದಾರೆ. ಅದು ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಮಲಯಾಳಂನಲ್ಲಿ ರಜನಿ ಜೈಲರ್ ಸಿನಿಮಾ ಕೂಡ ಬಿಡುಗಡೆ ಆಗುತ್ತಿರುವುದರಿಂದ, ಮಲಯಾಳಂನಲ್ಲಿ ಟೈಟಲ್ ಬದಲಾಯಿಸಿ ರಿಲೀಸ್ ಮಾಡುವಂತೆ ಅವರು ಮನವಿ ಮಾಡಿಕೊಂಡಿದ್ದರು. ಆದರೆ, ಅದು ಆಗುವುದಿಲ್ಲ ಎಂದು ಸನ್ ಪಿಕ್ಚರ್ ನಿರ್ಮಾಣ ಸಂಸ್ಥೆ ಉತ್ತರ ಬರದಿತ್ತು.
ತಮಿಳಿನ ಜೈಲರ್ ಸಿನಿಮಾದ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಮೊದಲು ಜೈಲರ್ ಹೆಸರಿನಲ್ಲಿ ತಾವು ಸಿನಿಮಾ ಮಾಡಿದ್ದರಿಂದ ಮತ್ತು ಮಲಯಾಳಂನಲ್ಲಿ ತಮಗೆ ರಜನಿ ಸಿನಿಮಾದಿಂದ ತೊಂದರೆ ಆಗುವುದರಿಂದ, ಟೈಟಲ್ ಬದಲಾಯಿಸುವಂತೆ ಅವರು ಕೋರ್ಟ್ ಗೆ ಮೊರೆ ಹೋಗಿದ್ದಾರೆ.
ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಜೈಲರ್ ಕೂಡ ಒಂದು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್ ದಿಗ್ಗಜರು ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಸದ್ಯ ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸುತ್ತಿರುವ ಈ ಚಿತ್ರ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದೆ.
ಸನ್ ಪಿಕ್ಚರ್ ನಿರ್ಮಾಣ ಮಾಡಿರುವ ಈ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶಿಸಿದ್ದಾರೆ. ಇದೇ ಮೊದಲ ಬಾರಿಗೆ ರಜನಿಕಾಂತ್ ಜೊತೆ ಶಿವರಾಜ್ಕುಮಾರ್ ವಿಶೇಷ ಪಾತ್ರದಲ್ಲಿ ನಟಿಸಿರೋದು ಕುತೂಹಲ ಕೆರಳಿಸಿದೆ. ಇನ್ನು ಬಾಲಿವುಡ್ ನಟ ಜಾಕಿ ಶ್ರಾಫ್, ಮಲಯಾಳಂ ಸೂಪರ್ಸ್ಟಾರ್ ಮೋಹನ್ಲಾಲ್, ಟಾಲಿವುಡ್ ನಟ ಸುನಿಲ್, ನಾಗಬಾಬು, ನಟಿ ರಮ್ಯಾ ಕೃಷ್ಣ, ತಮನ್ನಾ ಭಾಟಿಯಾ ನಟಿಸಿದ್ದು, ಸಿನಿಪ್ರಿಯರಿಗೆ ಇವರೆಲ್ಲರನ್ನೂ ಒಂದೇ ಸಿನಿಮಾದಲ್ಲಿ ನೋಡುವ ಭಾಗ್ಯ ಸಿಗಲಿದೆ.
ಅಣ್ಣಾತ್ತೆ ಬಳಿಕ ರಜನಿ ನಟಿಸಿರುವ 169ನೇ ಸಿನಿಮಾ ಜೈಲರ್. ತಲೈವ ಹೊಸ ಸಿನಿಮಾ ಎಂಟ್ರಿಗೆ ಕಾದು ಕುಳಿತಿರುವ ಅಭಿಮಾನಿಗಳು ಹಬ್ಬ ಮಾಡಲು ಸಜ್ಜಾಗಿದ್ದಾರೆ. ರಾಕ್ ಸ್ಟಾರ್ ಅನಿರುದ್ಧ್ ರವಿಚಂದರ್ ಸಂಗೀತ ನಿರ್ದೇಶನದ ಜೈಲರ್ ಸಿನಿಮಾವನ್ನೂ ಚೆನ್ನೈ, ಮಂಗಳೂರು, ಹೈದರಾಬಾದ್, ಕೇರಳ ಸೇರಿದಂತೆ ಹಲವೆಡೆ ಶೂಟಿಂಗ್ ನಡೆಸಲಾಗಿದೆ.
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…
ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…
ಗಿರೀಶ್ ಹುಣಸೂರು ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…
ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…