ಚಿತ್ರ ಮಂಜರಿ

ಮುದ್ದಾದ ಮಗಳಿಗೆ ಹೆಸರಿಟ್ಟ ರಣ್‌ಬೀರ್, ಆಲಿಯಾ ದಂಪತಿ

ಆಲಿಯಾ ಭಟ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಮಗಳ ಆಗಮನದ ಖುಷಿಯಲ್ಲಿದ್ದಾರೆ ಕಪೂರ್ ಕುಟುಂಬ. ಇದೀಗ ಮುದ್ದು ಮಗಳಿಗೆ ಚೆಂದದ ಹೆಸರನ್ನ ಇಟ್ಟಿದ್ದಾರೆ. ರಣ್‌ಬೀರ್  ಮತ್ತು ಆಲಿಯಾ ಮಗಳಿಗೆ ನಾಮಕರಣ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ನವೆಂಬರ್ 6 ರಂದು ಆಲಿಯಾ ಭಟ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಇನ್ನೂ ರಣಬೀರ್ ದಂಪತಿಯ ಮಗಳಿಗೆ ಇಡುವ ಹೆಸರೇನು ಅನ್ನೋದನ್ನ ತಿಳಿದುಕೊಳ್ಳುವ ಕುತೂಹಲವೂ ಅಭಿಮಾನಿಗಳಿಗೆ ಹೆಚ್ಚಾಗಿತ್ತು. ಈಗ ರಣಬೀರ್ ಹಾಗೂ ಆಲಿಯಾ ಮಗಳ ಹೆಸರು ಬಹಿರಂಗಪಡಿಸಲಾಗಿದೆ.

ಮಗಳ ಹೆಸರನ್ನು ಅಲಿಯಾ ಭಟ್ ಇನ್‌ಸ್ಟಾಗ್ರಾಂ ಮೂಲಕ ಬಹಿರಂಗ ಪಡಿಸಿದ್ದಾರೆ. ʻರಾಹಾʼ ಪದದ ಅರ್ಥವನ್ನು ಅಲಿಯಾ ಭಟ್ ವಿವರಿಸಿದ್ದಾರೆ. ರಾಹಾ ಹಲವು ಅರ್ಥಗಳನ್ನು ಹೊಂದಿದೆ. ರಾಹಾ ಎಂದರೆ ದೈವಿಕ ಮಾರ್ಗ ಎಂದರ್ಥ. ಸ್ವಾಹಿಲಿ ಭಾಷೆಯಲ್ಲಿ ಸಂತೋಷ. ಇನ್ನು ಸಂಸ್ಕೃತದಲ್ಲಿ ಕುಲ ಎಂದರ್ಥ.

ಬಂಗಾಳಿ ಭಾಷೆಯಲ್ಲಿ ವಿಶ್ರಾಂತಿ, ಸೌಕರ್ಯ, ಪರಿಹಾರ ಎಂದರ್ಥ, ಅರೆಬಿಕ್ ಭಾಷೆಯಲ್ಲಿ ರಾಹಾ ಎಂದರೆ ಶಾಂತಿ, ಸಂತೋಷ ಹಾಗೂ ಸ್ವಾತಂತ್ರ‍್ಯ ಎಂಬ ಅರ್ಥವಿದೆ. ನಾವು ರಾಹಾಳನ್ನು ಕೈಯಲ್ಲಿ ಹಿಡಿದ ದಿನದಿಂದ ನಾವು ಸಂತೋಷ, ಶಾಂತಿ ಅನುಭವಿಸುತ್ತಿದ್ದೇವೆ. ನಮ್ಮ ಕುಟುಂಬವನ್ನು ಸಂತೋಷವಾಗಿರಿಸಿದ ರಾಹಾಳಿಗೆ ಧನ್ಯವಾದ. ನಮ್ಮ ಜೀವನ ಈಗಷ್ಟೇ ಆರಂಭವಾದಂತಿದೆ ಎಂದು ಅಲಿಯಾ ಭಟ್ ಹೇಳಿದ್ದಾರೆ.

andolanait

Recent Posts

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

4 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

4 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

5 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

6 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

6 hours ago

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

6 hours ago